ವಿರಾಟ್ ಕೊಹ್ಲಿ-ಅಬ್ರಾರ್ ಅಹ್ಮದ್ 
ಕ್ರಿಕೆಟ್

Champions Trophy 2025: ಗಿಲ್‌ ಬೌಲ್ಡ್; ಕಣ್ಸನ್ನೆ ಮೂಲಕ ಗೇಲಿ ಮಾಡಿದ ಅಬ್ರಾರ್; ಮೈದಾನದಲ್ಲಿ ಕೊಹ್ಲಿ ಮಾಡಿದ್ದೇನು? Video!

ಚಾಂಪಿಯನ್ಸ್ ಟ್ರೋಫಿಯ ಪಾಕಿಸ್ತಾನ ಮತ್ತು ಭಾರತ ನಡುವಿನ ಪಂದ್ಯ ದುಬೈನಲ್ಲಿ ನಡೆಯುತ್ತಿದೆ. ಇನ್ನು ಪಾಕಿಸ್ತಾನ ತಂಡ ಭಾರತ ವಿರುದ್ಧ ಸೋಲಿನ ಸುಳಿಗೆ ಸಿಲುಕಿಕೊಂಡಿದೆ. ಬ್ಯಾಟಿಂಗ್ ನಲ್ಲಿ ಪಾಕ್ ಆಟಗಾರರ ವೈಫಲ್ಯ ಬೆನ್ನಲ್ಲೇ ಕಳಪೆ ಫೀಲ್ಡಿಂಗ್ ನಿಂದಾಗಿ ತಂಡಕ್ಕೆ ದೊಡ್ಡ ಹಿನ್ನೆಡೆಯಾಗಿದೆ.

ದುಬೈ: ಚಾಂಪಿಯನ್ಸ್ ಟ್ರೋಫಿಯ ಪಾಕಿಸ್ತಾನ ಮತ್ತು ಭಾರತ ನಡುವಿನ ಪಂದ್ಯ ದುಬೈನಲ್ಲಿ ನಡೆಯುತ್ತಿದೆ. ಇನ್ನು ಪಾಕಿಸ್ತಾನ ತಂಡ ಭಾರತ ವಿರುದ್ಧ ಸೋಲಿನ ಸುಳಿಗೆ ಸಿಲುಕಿಕೊಂಡಿದೆ. ಬ್ಯಾಟಿಂಗ್ ನಲ್ಲಿ ಪಾಕ್ ಆಟಗಾರರ ವೈಫಲ್ಯ ಬೆನ್ನಲ್ಲೇ ಕಳಪೆ ಫೀಲ್ಡಿಂಗ್ ನಿಂದಾಗಿ ತಂಡಕ್ಕೆ ದೊಡ್ಡ ಹಿನ್ನೆಡೆಯಾಗಿದೆ.

ಭಾರತದ ಪರ ಬ್ಯಾಟರ್ ಗಳಾದ ರೋಹಿತ್ ಶರ್ಮಾ ಮತ್ತು ಶುಭ್ಮನ್ ಗಿಲ್ ಉತ್ತಮ ಆರಂಭ ನೀಡಿದರು. ಆದರೆ ರೋಹಿತ್ ಶರ್ಮಾ 20 ರನ್ ಗೆ ಔಟಾಗಿ ಪೆವಿಲಿಯನ್ ಸೇರಿದರು. ನಂತರ ಕೊಹ್ಲಿ ಜೊತೆ ಸೇರಿ ಗಿಲ್ ತಾಳ್ಮೆಯ ಬ್ಯಾಟಿಂಗ್ ಮಾಡಿ 46 ರನ್ ಪೇರಿಸಿದರು. ಆದರೆ ಅಬ್ರಾರ್ ಅಹ್ಮದ್ ಬೌಲಿಂಗ್ ನಲ್ಲಿ ಗಿಲ್ ಬೌಲ್ಡ್ ಔಟ್ ಆದರು. ಈ ವೇಳೆ ಅಬ್ರಾರ್ ಸಂಭ್ರಮಾಚರಣೆ ಮಾಡಿದರು. ವಿರಾಟ್ ಕೊಹ್ಲಿ ಎದುರೇ ವಿಚಿತ್ರ ಕಣ್ಸನ್ನೆ ಮಾಡುವ ಮೂಲಕ ಕಿಚಾಯಿಸಿದರು. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಪಾಕಿಸ್ತಾನ ಪರ ಅಬ್ರಾರ್ ಅಹ್ಮದ್ 10 ಓವರ್ ಗಳನ್ನು ಮುಕ್ತಾಯಗೊಳಿಸಿದ್ದು 28 ರನ್ ಗಳನ್ನು ನೀಡಿ 1 ವಿಕೆಟ್ ಪಡೆದರು. ಇನ್ನು ಟೂರ್ನಿಯಲ್ಲಿ ಉತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಅಬ್ರಾರ್ ನನ್ನು ಮೈದಾನದಲ್ಲೇ ವಿರಾಟ್ ಕೊಹ್ಲಿ ಶೇಕ್ ಹ್ಯಾಂಡ್ ಮಾಡಿ ಯುವ ಕ್ರಿಕೆಟಿಗನನ್ನು ಪ್ರೋತ್ಸಾಹಿಸಿದರು.

ಮೊದಲು ಬ್ಯಾಟಿಂಗ್ ಮಾಡಿದ್ದ ಪಾಕಿಸ್ತಾನ 241 ರನ್ ಗಳಿಗೆ ಆಲೌಟ್ ಆಯಿತು. ಭಾರತ ಪ್ರಸ್ತುತ 38 ಓವರ್ ಮುಕ್ತಾಯಕ್ಕೆ 2 ವಿಕೆಟ್ ನಷ್ಟಕ್ಕೆ 209 ರನ್ ಗಳಿಸಿದೆ. ಗೆಲುವಿಗೆ ಇನ್ನು 33 ರನ್ ಬೇಕಿದ್ದು. ವಿರಾಟ್ ಕೊಹ್ಲಿ ಅಜೇಯ 85 ಮತ್ತು ಶ್ರೇಯಸ್ ಅಯ್ಯರ್ 56 ರನ್ ಗಳಿಸಿ ಆಡುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT