ಲಿಟ್ಟನ್ ದಾಸ್,  Litton Das
ಕ್ರಿಕೆಟ್

ಶಿವಲಿಂಗಕ್ಕೆ ವಿಶೇಷ ಅಭಿಷೇಕ ಮಾಡಿ 'ಮಹಾ ಶಿವರಾತ್ರಿ' ಆಚರಿಸಿದ ಬಾಂಗ್ಲಾದೇಶದ ಕ್ರಿಕೆಟಿಗ; ಮೆಚ್ಚುಗೆಯ ಮಹಾಪೂರ

ಇದರ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಮೆಚ್ಚುಗೆಯ ಮಹಾಪೂರವೇ ಹರಿದುಬರುತ್ತಿದೆ.

ನವದೆಹಲಿ: ಮಹಾ ಶಿವರಾತ್ರಿಯ ಶುಭ ಸಂದರ್ಭದಲ್ಲಿ ನೆರೆಯ ದೇಶದ ಕ್ರಿಕೆಟಿಗರು ದೇವಾಲಯದ ಭೇಟಿ, ಆಚರಣೆಗಳ ಮೂಲಕ ತಮ್ಮ ಭಕ್ತಿಯನ್ನು ಪ್ರದರ್ಶಿಸಿದ್ದಾರೆ. ಬಾಂಗ್ಲಾದೇಶದ ಕ್ರಿಕೆಟಿಗ ಲಿಟ್ಟನ್ ದಾಸ್,

ಮಹಾ ಶಿವರಾತ್ರಿಯನ್ನು ಭಕ್ತಿಭಾವ, ಶ್ರದ್ದಾಪೂರ್ವಕವಾಗಿ ಆಚರಿಸಿದ್ದಾರೆ. ಶಿವಲಿಂಗಗಳಿಗೆ ವಿಶೇಷ ಅಭಿಷೇಕ, ಪೂಜೆ ಪುನಸ್ಕಾರ ಮಾಡಿದ್ದಾರೆ. ಇದರ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಮೆಚ್ಚುಗೆಯ ಮಹಾಪೂರವೇ ಹರಿದುಬರುತ್ತಿದೆ.

ಹಿಂದೂ ಕುಟುಂಬದಿಂದ ಬಂದಿರುವ ಲಿಟ್ಟನ್ ದಾಸ್, ಚಾಂಪಿಯನ್ ಟ್ರೋಫಿ ಪಂದ್ಯಗಳಲ್ಲಿ ಬಾಂಗ್ಲಾದೇಶದ ತಂಡದಲ್ಲಿ ಸ್ಥಾನ ಪಡೆದಿಲ್ಲ.

ಇನ್ನೂ ಭಾರತದಲ್ಲಿ ಹಲವಾರು ಕ್ರಿಕೆಟ್ ತಾರೆಯರು ದೇವಾಲಯಗಳಿಗೆ ಭೇಟಿ ನೀಡುವ ಮೂಲಕ ಮಹಾಶಿವರಾತ್ರಿ ಆಚರಿಸಿದ್ದಾರೆ. IPL 2025 ಟೂರ್ನಿಗಾಗಿ ಮುಂಬೈ ಇಂಡಿಯನ್ಸ್ ಪರ ಆಟಗಾರರಾದ ತಿಲಕ್ ವರ್ಮಾ, ದೀಪಕ್ ಚಹಾರ್ ಮತ್ತು ಕರಣ್ ಶರ್ಮಾ ಅವರು ಮುಂಬೈನ ಐತಿಹಾಸಿಕ ಬಾಬುಲ್‌ನಾಥ್ ದೇವಾಲಯಕ್ಕೆ ಭೇಟಿ ನೀಡಿದ್ದು, ಶಿವನಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ತಿಲಕ್ ವರ್ಮಾ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಈ ಪೋಟೋ ಹಂಚಿಕೊಂಡಿದ್ದಾರೆ.

ತಿಲಕ್ ವರ್ಮಾ, ದೀಪಕ್ ಚಹಾರ್ ಮತ್ತು ಕರಣ್ ಶರ್ಮಾ

ಭಾರತದ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್, ವೆಂಕಟೇಶ್ ಪ್ರಸಾದ್ ಸೇರಿದಂತೆ ಹಲವು ಮಂದಿ ಗಣ್ಯರು ದೇಶದ ಜನತೆಗೆ ಮಹಾಶಿವರಾತ್ರಿಯ ಶುಭಾಶಯ ಕೋರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT