ಮಳೆಯಿಂದಾಗಿ ರಾವಲ್ಪಿಂಡಿಯಲ್ಲಿ ನಡೆಯಬೇಕಿದ್ದ ಪಾಕಿಸ್ತಾನ-ಬಾಂಗ್ಲಾದೇಶ ನಡುವಿನ ಪಂದ್ಯ ರದ್ದು 
ಕ್ರಿಕೆಟ್

Champions Trophy 2025: ಮಳೆಯಿಂದ ಬಾಂಗ್ಲಾದೇಶ ವಿರುದ್ಧದ ಪಂದ್ಯ ರದ್ದು; ಪಾಕಿಸ್ತಾನಕ್ಕೆ ಮುಖಭಂಗ!

ಬರೋಬ್ಬರಿ 29 ವರ್ಷಗಳ ಬಳಿಕ ಮೊದಲ ಬಾರಿಗೆ ಐಸಿಸಿ ಟೂರ್ನಮೆಂಟ್ ಅನ್ನು ಆಯೋಜಿಸಿರುವ ಪಾಕಿಸ್ತಾನ, ಟೂರ್ನಿಯಲ್ಲಿ ಒಂದೇ ಒಂದು ಗೆಲುವು ದಾಖಲಿಸದೆ ತನ್ನ ಅಭಿಯಾನವನ್ನು ಕೊನೆಗೊಳಿಸಿದೆ.

ರಾವಲ್ಪಿಂಡಿ: ಚಾಂಪಿಯನ್ಸ್ ಟ್ರೋಫಿ 2025 ಟೂರ್ನಿಯಿಂದಲೇ ಹೊರಬಿದ್ದಿರುವ ಪಾಕಿಸ್ತಾನಕ್ಕೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಗುರುವಾರ ಇಲ್ಲಿ ನಡೆಯಬೇಕಿದ್ದ ಪಾಕಿಸ್ತಾನ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯ ಮಳೆಯಿಂದ ರದ್ದಾಗಿದೆ.

ಬರೋಬ್ಬರಿ 29 ವರ್ಷಗಳ ಬಳಿಕ ಮೊದಲ ಬಾರಿಗೆ ಐಸಿಸಿ ಟೂರ್ನಮೆಂಟ್ ಅನ್ನು ಆಯೋಜಿಸಿರುವ ಪಾಕಿಸ್ತಾನ, ಟೂರ್ನಿಯಲ್ಲಿ ಒಂದೇ ಒಂದು ಗೆಲುವು ದಾಖಲಿಸದೆ ತನ್ನ ಅಭಿಯಾನವನ್ನು ಕೊನೆಗೊಳಿಸಿದೆ.

ಚಾಂಪಿಯನ್ಸ್ ಟ್ರೋಫಿಯಲ್ಲಿ 8 ತಂಡಗಳು ಆಡುತ್ತಿದ್ದು ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ನ್ಯೂಜಿಲೆಂಡ್, ಭಾರತ, ಪಾಕಿಸ್ತಾನ, ಬಾಂಗ್ಲಾದೇಶ ತಂಡಗಳು ಎ ಗುಂಪಿಯನಲ್ಲಿದ್ದರೆ, ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ, ಇಂಗ್ಲೆಂಡ್ ಮತ್ತು ಅಫ್ಗಾನಿಸ್ತಾನ ಬಿ ಗುಂಪಿನಲ್ಲಿ ಆಡುತ್ತಿವೆ.

ಮಳೆಯಿಂದಾಗಿ ಪಂದ್ಯ ರದ್ದಾಗಿರುವ ಕಾರಣ ಎ ಗುಂಪಿನಲ್ಲಿರುವ ಪಾಕಿಸ್ತಾನ ಮತ್ತು ಬಾಂಗ್ಲಾದೇಶ ತಂಡಗಳು ತಲಾ ಒಂದು ಅಂಕವನ್ನು ಹಂಚಿಕೊಂಡಿವೆ.

ಬಾಂಗ್ಲಾದೇಶ ಕೂಡ ಟೂರ್ನಿಯಲ್ಲಿ ಒಂದೇ ಒಂದು ಪಂದ್ಯದಲ್ಲಿ ಗೆಲುವು ಸಾಧಿಸದೆ ತಮ್ಮ ಪ್ರಯಾಣವನ್ನು ಕೊನೆಗೊಳಿಸಿದೆ. ತಂಡದಲ್ಲಿ ಬದಲಾವಣೆ ಮಾಡಿಕೊಳ್ಳಲು ಅಥವಾ ಆತ್ಮಾವಲೋಕನ ಮಾಡಿಕೊಳ್ಳಲು ಸಾಕಷ್ಟು ಸಮಯದೊಂದಿಗೆ ತವರಿಗೆ ಮರಳಲಿದೆ.

ಪಂದ್ಯಾವಳಿಯಲ್ಲಿ ಪಾಕಿಸ್ತಾನದ ಕಳಪೆ ಪ್ರದರ್ಶನಕ್ಕೆ ವ್ಯಾಪಕ ಟೀಕೆಗೆ ಗುರಿಯಾಗಿದೆ. ಪ್ರಮುಖವಾಗಿ, ದುಬೈನಲ್ಲಿ ಸಾಂಪ್ರದಾಯಿಕ ಎದುರಾಳಿ ಭಾರತದ ವಿರುದ್ಧ ಆರು ವಿಕೆಟ್‌ಗಳ ಸೋಲು ಕಂಡ ಪಾಕಿಸ್ತಾನದ ವಿರುದ್ಧ ಮಾಜಿ ಕ್ರಿಕೆಟಿಗರು ಕಿಡಿಕಾರುತ್ತಿದ್ದಾರೆ.

ರಾವಲ್ಪಿಂಡಿಯಲ್ಲಿ ಟಾಸ್ ಇಲ್ಲದೆಯೇ ಪಂದ್ಯವನ್ನು ರದ್ದು ಮಾಡಲಾಗಿದೆ. ಈ ವಾರದ ಆರಂಭದಲ್ಲಿ ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ನಡುವಿನ ಪಂದ್ಯ ಕೂಡ ಮಳೆಯಿಂದ ರದ್ದಾಗಿತ್ತು. ಎ ಗುಂಪಿನಿಂದ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಸೆಮಿಫೈನಲ್‌ಗೆ ಪ್ರವೇಶ ಪಡೆದಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT