ಚಾಂಪಿಯನ್ಸ್ ಟ್ರೋಫಿಯಲ್ಲಿ ಅಫ್ಗಾನಿಸ್ತಾನ ಮತ್ತು ಇಂಗ್ಲೆಂಡ್ ನಡುವಿನ ಪಂದ್ಯದ ವೇಳೆ ಮೈದಾನಕ್ಕೆ ನುಗ್ಗಿದ ಅಭಿಮಾನಿ 
ಕ್ರಿಕೆಟ್

ಚಾಂಪಿಯನ್ಸ್ ಟ್ರೋಫಿ ಪಂದ್ಯದ ವೇಳೆ ಮೈದಾನಕ್ಕೆ ನುಗ್ಗಿದ ಅಭಿಮಾನಿ; ಮತ್ತೆ ಸಂಕಷ್ಟಕ್ಕೆ ಸಿಲುಕಿದ ಪಿಸಿಬಿ!

ಸೋಮವಾರ ಬಾಂಗ್ಲಾದೇಶ ವಿರುದ್ಧದ ಪಂದ್ಯದ ಸಮಯದಲ್ಲಿಯೂ ಅಭಿಮಾನಿಯೊಬ್ಬರು ಮೈದಾನಕ್ಕೆ ಓಡಿ ಬಂದು ನ್ಯೂಜಿಲೆಂಡ್ ಬ್ಯಾಟ್ಸ್‌ಮನ್ ರಚಿನ್ ರವೀಂದ್ರ ಅವರನ್ನು ಅಪ್ಪಿಕೊಳ್ಳಲು ಯತ್ನಿಸಿದ್ದರು.

ಚಾಂಪಿಯನ್ಸ್ ಟ್ರೋಫಿ 2025 ಟೂರ್ನಿಯಲ್ಲಿ ಲಾಹೋರ್‌ನಲ್ಲಿ ನಡೆದ ಪಂದ್ಯದಲ್ಲಿ ಬುಧವಾರ ಇಂಗ್ಲೆಂಡ್ ವಿರುದ್ಧ ಅಫ್ಘಾನಿಸ್ತಾನ ಜಯಗಳಿಸಿದ ನಂತರ ಅಭಿಮಾನಿಯೊಬ್ಬರು ಮತ್ತೊಮ್ಮೆ ಮೈದಾನಕ್ಕೆ ನುಗ್ಗಿದ್ದಾರೆ. ಭದ್ರತೆಯ ನಡುವೆಯೂ ಅಭಿಮಾನಿಯೊಬ್ಬರು ಮೈದಾನಕ್ಕೆ ನುಗ್ಗಿ, ಆಟಗಾರರನ್ನು ಅಪ್ಪಿಕೊಳ್ಳಲು ಓಡಿ ಬಂದರು. ಆದರೆ, ಭದ್ರತಾ ಅಧಿಕಾರಿಗಳು ಅವರನ್ನು ಹಿಡಿದು ಮೈದಾನದಿಂದ ಹೊರಗೆ ಕರೆದೊಯ್ದರು.

ಸೋಮವಾರ ಬಾಂಗ್ಲಾದೇಶ ವಿರುದ್ಧದ ಪಂದ್ಯದ ಸಮಯದಲ್ಲಿಯೂ ಅಭಿಮಾನಿಯೊಬ್ಬರು ಮೈದಾನಕ್ಕೆ ಓಡಿ ಬಂದು ನ್ಯೂಜಿಲೆಂಡ್ ಬ್ಯಾಟ್ಸ್‌ಮನ್ ರಚಿನ್ ರವೀಂದ್ರ ಅವರನ್ನು ಅಪ್ಪಿಕೊಳ್ಳಲು ಯತ್ನಿಸಿದ್ದರು. ಇವೆರಡು ಘಟನೆಯ ನಂತರ, ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಭದ್ರತಾ ಉಲ್ಲಂಘನೆಯನ್ನು ಗಂಭೀರವಾಗಿ ಪರಿಗಣಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

'ನಿನ್ನೆ ಪ್ರೇಕ್ಷಕರೊಬ್ಬರು ಆಟದ ಮೈದಾನಕ್ಕೆ ಪ್ರವೇಶಿಸಿದಾಗ ಸಂಭವಿಸಿದ ಭದ್ರತಾ ಉಲ್ಲಂಘನೆಯನ್ನು ಪಿಸಿಬಿ ಗಂಭೀರವಾಗಿ ಪರಿಗಣಿಸಿದೆ. ಆಟಗಾರರು ಮತ್ತು ಅಧಿಕಾರಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವುದು ನಮ್ಮ ಪ್ರಮುಖ ಆದ್ಯತೆಯಾಗಿದೆ' ಎಂದು ಮಂಡಳಿ ತಿಳಿಸಿರುವುದಾಗಿ ಮಂಗಳವಾರ ಡಾನ್ ತಿಳಿಸಿದೆ.

'ಸಂಬಂಧಿತ ವ್ಯಕ್ತಿಯನ್ನು ಇಂದು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ಇದಲ್ಲದೆ, ಪಾಕಿಸ್ತಾನದ ಎಲ್ಲ ಕ್ರಿಕೆಟ್ ಸ್ಟೇಡಿಯಂಗಳಿಗೆ ಪ್ರವೇಶಿಸದಂತೆ ಅವರಿಗೆ ಶಾಶ್ವತವಾಗಿ ನಿಷೇಧ ಹೇರಲಾಗಿದೆ' ಎಂದು ಹೇಳಿಕೆಯಲ್ಲಿ ಸೇರಿಸಲಾಗಿದೆ.

ಆದಾಗ್ಯೂ, ಇದೇ ರೀತಿಯ ಘಟನೆಗಳು ಮತ್ತೆ ಮರುಕಳಿಸುತ್ತಿದ್ದು, ಪಿಸಿಬಿ ತೆಗೆದುಕೊಂಡ ಕ್ರಮಗಳ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT