ಕ್ರಿಕೆಟ್

WPL 2025: RCBಗೆ ಹ್ಯಾಟ್ರಿಕ್ ಸೋಲು; ಸೆಮಿಸ್ ಪ್ರವೇಶಿಸಲು ಆರ್​ಸಿಬಿ ಮುಂದಿರುವ ಸವಾಲುಗಳೇನು?

ಡಬ್ಲ್ಯೂಪಿಎಲ್ 5 ಪಂದ್ಯಗಳ ಪೈಕಿ 2 ಪಂದ್ಯಗಳಲ್ಲಿ ಆರ್ ಸಿಬಿ ಗೆಲುವು ಸಾಧಿಸಿದ್ದು ಮೂರು ಪಂದ್ಯಗಳಲ್ಲಿ ಸೋತಿದೆ.

ಬೆಂಗಳೂರು: ಮಹಿಳಾ ಪ್ರೀಮಿಯರ್ ಲೀಗ್ (WPL) ಮೂರನೇ ಆವೃತ್ತಿಯ 12ನೇ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 6 ವಿಕೆಟ್‌ಗಳಿಂದ ಸೋಲಿಸಿತು. ಗುರುವಾರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗುಜರಾತ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಆರ್‌ಸಿಬಿ 7 ವಿಕೆಟ್ ಕಳೆದುಕೊಂಡು 125 ರನ್ ಗಳಿಸಿತ್ತು. ಜಿಜಿ ತಂಡ 17 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 126 ಪೇರಿಸಿ ಗೆಲುವು ಸಾಧಿಸಿದೆ.

ಗುಜರಾತ್ ಪರ ನಾಯಕಿ ಆಶ್ಲೇ ಗಾರ್ಡ್ನರ್ 58 ಮತ್ತು ಫೋಬೆ ಲಿಚ್‌ಫೀಲ್ಡ್ 30 ರನ್ ಗಳಿಸಿದರು. ಬೌಲಿಂಗ್‌ನಲ್ಲಿ ಡಿಯಾಂಡ್ರಾ ಡಾಟಿನ್ ಮತ್ತು ತನುಜಾ ಕನ್ವರ್ ತಲಾ 2 ವಿಕೆಟ್ ಪಡೆದರು. ಆರ್‌ಸಿಬಿ ಪರ ರೇಣುಕಾ ಠಾಕೂರ್ ಮತ್ತು ಜಾರ್ಜಿಯಾ ವೇರ್‌ಹ್ಯಾಮ್ ತಲಾ 2 ವಿಕೆಟ್ ಪಡೆದರು.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ ಆರಂಭ ಕೆಟ್ಟದಾಗಿತ್ತು. ತಂಡವು 25 ರನ್‌ಗಳಿಗೆ 3 ವಿಕೆಟ್‌ಗಳನ್ನು ಕಳೆದುಕೊಂಡಿತು. ನಾಯಕಿ ಸ್ಮೃತಿ ಮಂಧಾನ 10 ರನ್ ಗಳಿಸಿ ಔಟಾದರು. ಡ್ಯಾನಿ ವ್ಯಾಟ್ ಹಾಡ್ಜ್ 4 ರನ್ ಗಳಿಸಿ ಔಟಾದರು. ಆಲಿಸ್ ಪೆರ್ರಿ ಖಾತೆ ತೆರೆಯಲು ಸಹ ಸಾಧ್ಯವಾಗಲಿಲ್ಲ. ರಾಘವಿ ಬಿಶ್ತ್ 22 ಮತ್ತು ಕನಿಕಾ ಅಹುಜಾ 33 ರನ್ ಗಳಿಸಿ ತಂಡದ ಸ್ಕೋರ್ ಅನ್ನು 70ರ ಆಚೆಗೆ ಕೊಂಡೊಯ್ದರು.

ರಿಚಾ ಘೋಷ್ ಕೇವಲ 9 ರನ್ ಗಳಿಸಲು ಮಾತ್ರ ಸಾಧ್ಯವಾಯಿತು. ಜಾರ್ಜಿಯಾ ವೇರ್‌ಹ್ಯಾಮ್ 20 ಮತ್ತು ಕಿಮ್ ಗಾರ್ತ್ 14 ರನ್ ಗಳಿಸಿ ತಂಡದ ಮೊತ್ತವನ್ನು 125ಕ್ಕೆ ಏರಿಸಿದರು. ಗುಜರಾತ್ ಪರ ಡಿಯಾಂಡ್ರಾ ಡಾಟಿನ್ ಮತ್ತು ತನುಜಾ ಕನ್ವರ್ ತಲಾ 2 ವಿಕೆಟ್ ಪಡೆದರು. ಆಶ್ಲೀ ಗಾರ್ಡ್ನರ್ ಮತ್ತು ಕಾಶ್ವಿ ಗೌತಮ್ ತಲಾ 1 ವಿಕೆಟ್ ಪಡೆದರು.

ಡಬ್ಲ್ಯೂಪಿಎಲ್ 5 ಪಂದ್ಯಗಳ ಪೈಕಿ 2 ಪಂದ್ಯಗಳಲ್ಲಿ ಆರ್ ಸಿಬಿ ಗೆಲುವು ಸಾಧಿಸಿದ್ದು ಮೂರು ಪಂದ್ಯಗಳಲ್ಲಿ ಸೋತಿದೆ. ಇನ್ನು ಮೂರು ಪಂದ್ಯಗಳು ಉಳಿದಿದ್ದು ಈ ಮೂರು ಪಂದ್ಯಗಳಲ್ಲಿ ಆರ್ ಸಿಬಿ ಗೆಲ್ಲಲೇಬೇಕಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT