ಜಸ್ಪ್ರೀತ್ ಬುಮ್ರಾ 
ಕ್ರಿಕೆಟ್

Champions Trophy 2025: ಅಭ್ಯಾಸ ಆರಂಭಿಸಿದ ಜಸ್ಪ್ರೀತ್ ಬುಮ್ರಾಗೆ ಅಭಿಮಾನಿಗಳಿಂದ ವಿಶೇಷ ಬೇಡಿಕೆ!

ಬೆನ್ನುನೋವಿನಿಂದ ಬಳಲುತ್ತಿದ್ದ ಬುಮ್ರಾ ಅವರಿಗೆ ಐದು ವಾರಗಳ ವಿಶ್ರಾಂತಿಗೆ ಸಲಹೆ ನೀಡಲಾಗಿತ್ತು. ಆದರೆ, 31 ವರ್ಷದ ಸೀಮರ್ ಸಕಾಲದಲ್ಲಿ ಚೇತರಿಸಿಕೊಳ್ಳಲು ಸಾಧ್ಯವಾಗಿರಲಿಲ್ಲ.

ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿ ಸಂದರ್ಭದಲ್ಲಿ ಬೆನ್ನು ನೋವಿನಿಂದ ಬಳಲುತ್ತಿದ್ದ ಜಸ್ಪ್ರೀತ್ ಬುಮ್ರಾ, ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಚೇತರಿಸಿಕೊಳ್ಳುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ, ಅವರು ಫಿಟ್ ಆಗದ ಹಿನ್ನೆಲೆಯಲ್ಲಿ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದಿದ್ದರು. ಇದಾದ ಒಂದು ತಿಂಗಳ ನಂತರ ಬುಮ್ರಾ ಅಭ್ಯಾಸ ಆರಂಭಿಸಿದ್ದು, ಅಭಿಮಾನಿಗಳು ಇದೀಗ ವಿಶೇಷ ಬೇಡಿಕೆಯೊಂದನ್ನು ಮುಂದಿಟ್ಟಿದ್ದಾರೆ. ಬುಮ್ರಾ ಅವರ ಅನುಪಸ್ಥಿತಿಯ ಹೊರತಾಗಿಯೂ, ಭಾರತವು ಬಾಂಗ್ಲಾದೇಶ ಮತ್ತು ಪಾಕಿಸ್ತಾನವನ್ನು ಸೋಲಿಸುವ ಮೂಲಕ ಚಾಂಪಿಯನ್ಸ್ ಟ್ರೋಫಿಯ ಸೆಮಿಫೈನಲ್‌ನಲ್ಲಿ ಸ್ಥಾನ ಭದ್ರಪಡಿಸಿಕೊಂಡಿದೆ.

ಬೆನ್ನುನೋವಿನಿಂದ ಬಳಲುತ್ತಿದ್ದ ಬುಮ್ರಾ ಅವರಿಗೆ ಐದು ವಾರಗಳ ವಿಶ್ರಾಂತಿಗೆ ಸಲಹೆ ನೀಡಲಾಗಿತ್ತು. ಆದರೆ, 31 ವರ್ಷದ ಸೀಮರ್ ಸಕಾಲದಲ್ಲಿ ಚೇತರಿಸಿಕೊಳ್ಳಲು ಸಾಧ್ಯವಾಗಿರಲಿಲ್ಲ. ಇದೀಗ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್‌ಗೆ ಮುಂಚಿತವಾಗಿ, ಬುಮ್ರಾ ನೆಟ್‌ನಲ್ಲಿ ಅಭ್ಯಾಸ ಮಾಡುತ್ತಿರುವ ವಿಡಿಯೋವನ್ನು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. 'ಪ್ರತಿದಿನ ಪ್ರಗತಿ' ಎಂದು ಅವರು ವಿಡಿಯೋಗೆ ಶೀರ್ಷಿಕೆ ನೀಡಿದ್ದಾರೆ.

ಅಭಿಮಾನಿಗಳು ಇದೀಗ ಟೀಂ ಇಂಡಿಯಾದ ಸ್ಟಾರ್ ಆಟಗಾರ ಬುಮ್ರಾ ಮುಂದೆ ಹಲವಾರು ಬೇಡಿಕೆಗಳನ್ನು ಇಟ್ಟಿದ್ದಾರೆ. 'ಸೆಮಿ ಫೈನಲ್ ಖೇಲ್ ಲೋ ಜಸ್ಸಿ' ಎಂದು ಅಭಿಮಾನಿಯೊಬ್ಬರು ಕೇಳಿದ್ದಾರೆ.

'ಜಸ್ಸಿ ಭಾಯ್ ಫೈನಲ್‌ಗೆ ಬರುತ್ತಿದ್ದಾರೆ' ಎಂದು ಮತ್ತೊಬ್ಬ ಅಭಿಮಾನಿ ಹೇಳಿದ್ದಾರೆ. 'ಎಲ್ಲ ಆಟಗಾರರಲ್ಲಿ ಭಯದ ವಾತಾವರಣವಿದೆ' ಎಂದು ಮತ್ತೊಬ್ಬರು ಬರೆದಿದ್ದರೆ, 'ಬ್ರೋ ಜೂನ್‌ನಲ್ಲಿ ಇಂಗ್ಲೆಂಡ್ ಅನ್ನು ನಾಶಮಾಡಲು ಸಜ್ಜಾಗುತ್ತಿದ್ದಾರೆ' ಎಂದು ಇನ್ನೊಬ್ಬ ಅಭಿಮಾನಿ ಪೋಸ್ಟ್‌ನ ಅಡಿಯಲ್ಲಿ ಕಾಮೆಂಟ್ ಮಾಡಿದ್ದಾರೆ.

ಬುಮ್ರಾ ಅವರನ್ನು ಆರಂಭದಲ್ಲಿ ಚಾಂಪಿಯನ್ಸ್ ಟ್ರೋಫಿ 2025 ಟೂರ್ನಿಗಾಗಿ ಭಾರತ ತಂಡದಲ್ಲಿ ಹೆಸರಿಸಲಾಗಿತ್ತು. ಆದರೆ, ಬುಮ್ರಾ ಆ ಸಮಯಕ್ಕೆ ಚೇತರಿಸಿಕೊಳ್ಳಲು ಸಾಧ್ಯವಾಗಿರಲಿಲ್ಲ. ಹೀಗಾಗಿ, ಅವರನ್ನು ಬಿಟ್ಟು 15 ಆಟಗಾರರನ್ನು ಒಳಗೊಂಡಿದ್ದ ತಂಡವು ದುಬೈಗೆ ಪ್ರಯಾಣ ಬೆಳೆಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT