ಜಸ್ಪ್ರೀತ್ ಬುಮ್ರಾ 
ಕ್ರಿಕೆಟ್

BGT 2025, 5th test: ಅರ್ಧಕ್ಕೆ ಹೊರನಡೆದ ಜಸ್ಪ್ರೀತ್ ಬುಮ್ರಾ; ತಂಡ ಮುನ್ನಡೆಸುವ ಜವಾಬ್ದಾರಿ ಕೊಹ್ಲಿ ಹೆಗಲಿಗೆ!

ಪಂದ್ಯದ ನಡುವೆ ಗಾಯದಿಂದಾಗಿ ಮೈದಾನದಿಂದ ಹೊರನಡೆದಿದ್ದ ಬುಮ್ರಾಗೆ ಎಷ್ಟು ಪ್ರಮಾಣದಲ್ಲಿ ಗಾಯಗಳಾಗಿವೆ ಎಂಬ ಸ್ಪಷ್ಟತೆ ಸಿಕ್ಕಿಲ್ಲ. ಆದರೆ, ವಿಶ್ವದ ನಂ.1 ವೇಗದ ಬೌಲರ್ ಸ್ಕ್ಯಾನ್‌ ಮಾಡಿಸುವ ಸಲುವಾಗಿ ವೈದ್ಯರೊಂದಿಗೆ ಮೈದಾನವನ್ನು ತೊರೆದಿದ್ದಾರೆ.

ಸಿಡ್ನಿ: ಸಿಡ್ನಿ ಕ್ರಿಕೆಟ್‌ ಗ್ರೌಂಡ್‌ನಲ್ಲಿ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟ್ರೋಫಿಯ ಐದನೇ ಟೆಸ್ಟ್‌ ಪಂದ್ಯದ 2ನೇ ದಿನದಾಟದ ನಡುವೆ ಭಾರತ ತಂಡದ ಸ್ಟ್ಯಾಂಡ್-ಇನ್ ನಾಯಕ ಜಸ್ಪ್ರೀತ್ ಬುಮ್ರಾ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಪಂದ್ಯದ ನಡುವೆ ಗಾಯದಿಂದಾಗಿ ಮೈದಾನದಿಂದ ಹೊರನಡೆದಿದ್ದ ಬುಮ್ರಾಗೆ ಎಷ್ಟು ಪ್ರಮಾಣದಲ್ಲಿ ಗಾಯಗಳಾಗಿವೆ ಎಂಬ ಸ್ಪಷ್ಟತೆ ಸಿಕ್ಕಿಲ್ಲ. ಆದರೆ, ವಿಶ್ವದ ನಂ.1 ವೇಗದ ಬೌಲರ್ ಸ್ಕ್ಯಾನ್‌ ಮಾಡಿಸುವ ಸಲುವಾಗಿ ವೈದ್ಯರೊಂದಿಗೆ ಮೈದಾನವನ್ನು ತೊರೆದಿದ್ದಾರೆ.

ಬುಮ್ರಾ ಅನುಪಸ್ಥಿತಿಯಲ್ಲಿ ಸದ್ಯ ವಿರಾಟ್ ಕೊಹ್ಲಿ ತಂಡವನ್ನು ಮುನ್ನಡೆಸುತ್ತಿದ್ದಾರೆ. ಸರಣಿಯಲ್ಲಿ ಈಗಾಗಲೇ 32 ವಿಕೆಟ್‌ಗಳನ್ನು ಪಡೆದಿರುವ ಬುಮ್ರಾ, ಬೆಳಗಿನ ಅವಧಿಯಲ್ಲಿ ಮಾರ್ನಸ್ ಲ್ಯಾಬುಸ್ಚಾಗ್ನೆ ಅವರನ್ನು ಔಟ್ ಮಾಡುವ ಮೂಲಕ 10 ಓವರ್‌ಗಳಲ್ಲಿ 33 ರನ್ ಗೆ 2 ವಿಕೆಟ್ ಪಡೆದಿದ್ದರು. ಶನಿವಾರದ ದಿನದಾಟದಲ್ಲಿ ಆರಂಭದಿಂದಲೇ ಆಸೀಸ್‌ ಬ್ಯಾಟರ್‌ಗಳಿಗೆ ಕಂಟಕರಾದ ಬುಮ್ರಾ, ಊಟದ ಸಮಯದಲ್ಲಿ ಮೊದಲ ಬಾರಿಗೆ ಮೈದಾನವನ್ನು ತೊರೆದರು. ನಂತರ ಬಂದು 1 ಓವರ್ ಬೌಲಿಂಗ್ ಮಾಡಿ ಗಾಯದ ಕಾರಣ ಮೈದಾನದಿಂದ ಹೊರನಡೆದರು.

ಮೈದಾನದಿಂದ ಹೊರಡುವುದಕ್ಕೂ ಮೊದಲು, ಕೊಹ್ಲಿಯೊಂದಿಗೆ ಬುಮ್ರಾ ತ್ವರಿತ ಮಾತುಕತೆ ನಡೆಸಿರುವುದು ಕಂಡುಬಂದಿದೆ. ಬಹುಶಃ, ಬೌಲಿಂಗ್ ಮಾಡುವಾಗ ಅವರಿಗಾದ ಅಸ್ವಸ್ಥತೆಯ ಬಗ್ಗೆ ಕೊಹ್ಲಿಗೆ ಹೇಳಿರುವ ಸಾಧ್ಯತೆ ಇದೆ. ಆ ನಂತರ ಕೊಹ್ಲಿ ನಾಯಕನ ಜವಾಬ್ದಾರಿಯನ್ನು ವಹಿಸಿಕೊಂಡರು. ಅವರು SUV ಯಲ್ಲಿ ಕ್ರೀಡಾಂಗಣದಿಂದ ಹೊರಡುವ ದೃಶ್ಯಗಳನ್ನು ಫಾಕ್ಸ್ ಸ್ಪೋರ್ಟ್ಸ್ ಚಾನೆಲ್ ತೋರಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ