ಆಸ್ಟ್ರೇಲಿಯಾಕ್ಕೆ ಭರ್ಜರಿ ಜಯ 
ಕ್ರಿಕೆಟ್

BGT 2025, 5th Test: ಆಸ್ಟ್ರೇಲಿಯಾಗೆ 6 ವಿಕೆಟ್ ಭರ್ಜರಿ ಜಯ; ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಗೆ ಕಮಿನ್ಸ್ ಪಡೆ, ರೇಸ್ ನಿಂದ ಭಾರತ ಔಟ್!

2ನೇ ಇನ್ನಿಂಗ್ಸ್ ನಲ್ಲಿ ಭಾರತ ನೀಡಿದ 162 ರನ್ ಗುರಿಯನ್ನು ಬೆನ್ನು ಹತ್ತಿದ ಆಸ್ಟ್ರೇಲಿಯಾ ಕೇವಲ ನಾಲ್ಕು ವಿಕೆಟ್ ಕಳೆದುಕೊಂಡು ಗುರಿ ಮುಟ್ಟಿತು.

ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯ ಅಂತಿಮ ಹಾಗೂ 5ನೇ ಪಂದ್ಯದಲ್ಲಿ ಭಾರತ ತಂಡ ಮತ್ತೊಂದು ಹೀನಾಯ ಸೋಲು ಕಂಡಿದ್ದು, 3-1 ಅಂತರದಲ್ಲಿ ಸರಣಿ ಸೋಲು ಕಂಡಿದೆ.

2ನೇ ಇನ್ನಿಂಗ್ಸ್ ನಲ್ಲಿ ಭಾರತ ನೀಡಿದ 162 ರನ್ ಗುರಿಯನ್ನು ಬೆನ್ನು ಹತ್ತಿದ ಆಸ್ಟ್ರೇಲಿಯಾ ಕೇವಲ ನಾಲ್ಕು ವಿಕೆಟ್ ಕಳೆದುಕೊಂಡು ಗುರಿ ಮುಟ್ಟಿತು. ಆ ಮೂಲಕ 5 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಸ್ಟ್ರೇಲಿಯಾ 3-1 ಅಂತರದಲ್ಲಿ ತನ್ನದಾಗಿಸಿಕೊಂಡಿತು.

ದುಬಾರಿಯಾದ ಬುಮ್ರಾ ಅನುಪಸ್ಥಿತಿ

ಇನ್ನು ಈ ಪಂದ್ಯದಲ್ಲಿ ಗಾಯಗೊಂಡು ಹೊರಗುಳಿದಿದ್ದ ಜಸ್ ಪ್ರೀತ್ ಬುಮ್ರಾ ಅನುಪಸ್ಥಿತಿ ಭಾರತ ತಂಡಕ್ಕೆ ದುಬಾರಿಯಾಗಿ ಪರಿಣಮಿಸಿತು. ಬೆನ್ನು ನೋವಿನಿಂದ ಸ್ಕ್ಯಾನಿಂಗ್‌ಗೆ ಒಳಗಾಗಿದ್ದ ಬೂಮ್ರಾ, ಬ್ಯಾಟಿಂಗ್‌ ಮಾಡಿದರಾದರೂ ಬೌಲಿಂಗ್‌ ಮಾಡಲಿಲ್ಲ. 2ನೇ ಇನ್ನಿಂಗ್ಸ್ ನಲ್ಲಿ ಆಸ್ಟ್ರೇಲಿಯಾದ ಆರಂಭಿಕ ವಿಕೆಟ್‌ಗಳನ್ನು ಪಡೆಯುವ ಮೂಲಕ ಕನ್ನಡಿಗ ಪ್ರಸಿದ್ಧ್ ಕೃಷ್ಣ ಭಾರತಕ್ಕೆ ಗೆಲುವಿನ ಆಸೆ ಚಿಗುರಿಸಿದರು. ಆದರೆ ಆಸ್ಟ್ರೇಲಿಯಾ ಬ್ಯಾಟರ್‌ಗಳು ಎಚ್ಚರಿಕೆಯ ಆಟವಾಡಿ ತಂಡವನ್ನು ಗೆಲುವಿನ ದಡ ಸೇರಿಸಿದರು.

ಸುಲಭದ ತುತ್ತಾದ ಭಾರತ

ಎರಡನೇ ದಿನದಾಟಕ್ಕೆ 6 ವಿಕೆಟ್ ಕಳೆದುಕೊಂಡು 141 ರನ್‌ ಗಳಿಸಿದ್ದ ಭಾರತ ಆ ಮೊತ್ತಕ್ಕೆ 16 ರನ್‌ ಸೇರಿಸಿ ಆಲೌಟ್ ಆಗಿ, ಆಸ್ಟ್ರೇಲಿಯಾಗೆ 162 ರನ್‌ಗಳ ಗುರಿ ನೀಡಿತು. ಆರಂಭದಲ್ಲಿ ಆಸೀಸ್ ಬ್ಯಾಟರ್‌ಗಳು ಸುಲಭವಾಗಿ ಗೆಲ್ಲುವ ಮುನ್ಸೂಚನೆ ನೀಡಿದರು. ಆದರೆ ಅವರಿಗೆ ಪ್ರಸಿದ್ಧ ಕೃಷ್ಣ ಮೂಗುದಾರ ಹಾಕಿದರು. ಭಾರತದ ಪರ ಕೃಷ್ಣ 3 ಹಾಗೂ ಸಿರಾಜ್ ಒಂದು ವಿಕೆಟ್ ಕಿತ್ತರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT