ಸುನಿಲ್ ಗವಾಸ್ಕರ್ 
ಕ್ರಿಕೆಟ್

'ಭಾರತೀಯನಾಗಿದ್ದಕ್ಕೇ...': ಆಸ್ಟ್ರೇಲಿಯಾದಲ್ಲಿ Sunil Gavaskar ಗೆ ಅಪಮಾನ; ಅಸಮಾಧಾನ ಹೊರ ಹಾಕಿದ 'ಸನ್ನಿ'

ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆದ ಪ್ರಶಸ್ತಿ ಸಮಾರಂಭದ ವೇಳೆ ಸುನಿಲ್ ಗವಾಸ್ಕರ್ ಅವರಿಗೆ ಆಯೋಜಕರು ಅಪಮಾನ ಮಾಡಿದ್ದು, ಅವರ ಗೈರಿನಲ್ಲೇ ಪ್ರಶಸ್ತಿ ಪ್ರದಾನ ಮಾಡಿರುವ ಘಟನೆ ನಡೆದಿದೆ.

ಸಿಡ್ನಿ: ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿ ಅಂತ್ಯವಾಗಿದ್ದು 3-1 ಅಂತರದಲ್ಲಿ ಆಸ್ಟ್ರೇಲಿಯಾ ಸರಣಿ ಕೈವಶ ಮಾಡಿಕೊಂಡಿದೆ. ಆದರೆ ಸರಣಿ ಅಂತ್ಯದಲ್ಲಿ ಭಾರತದ ಕ್ರಿಕೆಟ್ ದಂತಕಥೆ ಸುನಿಲ್ ಗವಾಸ್ಕರ್ ಗೆ ಆಯೋಜಕರು ಅಪಮಾನ ಮಾಡಿದ್ದಾರೆ ಎನ್ನಲಾಗಿದೆ.

ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆದ ಪ್ರಶಸ್ತಿ ಸಮಾರಂಭದ ವೇಳೆ ಸುನಿಲ್ ಗವಾಸ್ಕರ್ ಅವರಿಗೆ ಆಯೋಜಕರು ಅಪಮಾನ ಮಾಡಿದ್ದು, ಅವರ ಗೈರಿನಲ್ಲೇ ಪ್ರಶಸ್ತಿ ಪ್ರದಾನ ಮಾಡಿರುವ ಘಟನೆ ನಡೆದಿದೆ.

ಆಸ್ಟ್ರೇಲಿಯಾದ ಅಲನ್ ಬಾರ್ಡರ್‌ ಹಾಗೂ ಭಾರತದ ಸುನಿಲ್ ಗವಾಸ್ಕರ್ ಹೆಸರಿನಲ್ಲಿ ಈ ಸರಣಿ ನಡೆದಿತ್ತು. ಸರಣಿ ಗೆದ್ದ ಆಸ್ಟ್ರೇಲಿಯಾ ತಂಡಕ್ಕೆ ಬಾರ್ಡರ್ ಅವರು ಟ್ರೋಫಿಯನ್ನು ನೀಡಿದರು. ಆದರೆ ಅದೇ ಸಮಯದಲ್ಲಿ ಗವಾಸ್ಕರ್, ಸ್ಥಳದಲ್ಲಿದ್ದರೂ ಅವರನ್ನು ನಿರ್ಲಕ್ಷಿಸಲಾಗಿತ್ತು.

ಆದರೆ ಭಾರತ ವಿರುದ್ಧ ಸರಣಿ ಗೆದ್ದ ಬಳಿಕ ಆಸ್ಟ್ರೇಲಿಯಾ ತಂಡಕ್ಕೆ ಟ್ರೋಫಿ ನೀಡಲು ತಮ್ಮನ್ನು ಆಹ್ವಾನಿಸದಿದ್ದಕ್ಕಾಗಿ ಕ್ರಿಕೆಟ್ ದಂತಕಥೆ ಸುನಿಲ್ ಗವಾಸ್ಕರ್ ಭಾನುವಾರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ ಸುನಿಲ್ ಗವಾಸ್ಕರ್, 'ನಾನು ಭಾರತೀಯನಾಗಿದ್ದರಿಂದಲೇ ಈ ರೀತಿ ಅಪಮಾನ ಮಾಡಿದ್ದಾರೆ. ನಿಸ್ಸಂಶಯವಾಗಿ ನಾನು ಟ್ರೋಫಿ ನೀಡಲು ಇಷ್ಟಪಡುತ್ತಿದ್ದೆ. ಇದು ಬಾರ್ಡರ್-ಗವಾಸ್ಕರ್ ಟ್ರೋಫಿ. ಆಸ್ಟ್ರೇಲಿಯಾ ಮತ್ತು ಭಾರತಕ್ಕೆ ಸಂಬಂಧಿಸಿದ್ದು’ ಎಂದು ಗವಾಸ್ಕರ್‌ ಹೇಳಿದ್ದಾರೆ.

‘ನಾನು ಮೈದಾನದಲ್ಲಿದ್ದೆ. ಇಲ್ಲಿ ಆಸ್ಟ್ರೇಲಿಯಾ ಗೆದ್ದಿರುವುದು ನನಗೆ ಮುಖ್ಯವಲ್ಲ. ಅವರು ಉತ್ತಮ ಕ್ರಿಕೆಟ್ ಆಡಿದರು, ಆದ್ದರಿಂದ ಅವರು ಗೆದ್ದರು. ನನ್ನ ಉತ್ತಮ ಸ್ನೇಹಿತ ಅಲನ್ ಬಾರ್ಡರ್ ಅವರೊಂದಿಗೆ ಟ್ರೋಫಿಯನ್ನು ನೀಡಲು ನಾನು ಸಂತೋಷಪಡುತ್ತೇನೆ’ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT