ಮಯಾಂಕ್ ಯಾದವ್ 
ಕ್ರಿಕೆಟ್

ಇಂಗ್ಲೆಂಡ್ ಸರಣಿಗೂ ಮುನ್ನವೇ ಭಾರತಕ್ಕೆ ಆಘಾತ: 156.7 Kmph ಸಾಮರ್ಥ್ಯದ ಸ್ಟಾರ್ ವೇಗಿಗೆ ಗಾಯ

ಉಳಿದಂತೆ ಹಿರಿಯ ವೇಗಿಗಳಾದ ಮಹಮದ್ ಶಮಿ, ಮೊಹಮ್ಮದ್ ಸಿರಾಜ್ ಮತ್ತು ಅರ್ಶ್‌ದೀಪ್ ಸಿಂಗ್ ರಂತಹ ಸ್ಟಾರ್ ಆಟಗಾರರು ಇಂಗ್ಲೆಂಡ್ ವಿರುದ್ಧದ ಸೀಮಿತ ಓವರ್‌ಗಳ ಸರಣಿ ಹಾಗೂ ಚಾಂಪಿಯನ್ಸ್ ಟ್ರೋಫಿಗೆ ಆಡುವುದು ಖಚಿತವಾಗಿದೆ.

ಮುಂಬೈ: ಇಂಗ್ಲೆಂಡ್ ವಿರುದ್ದದ ಟಿ20 ಮತ್ತು ಏಕದಿನ ಸರಣಿಗೆ ಭಾರತ ತಂಡ ಸಜ್ಜಾಗಿರುವಂತೆಯೇ ಇತ್ತ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದ್ದು, ತಂಡದ ಸ್ಟಾರ್ ವೇಗಿ ಗಾಯದ ಸಮಸ್ಯೆಗೆ ತುತ್ತಾಗಿದ್ದಾರೆ.

ಹೌದು.. ಇಂಗ್ಲೆಂಡ್ ವಿರುದ್ಧದ ಸೀಮಿತ ಓವರ್ ಗಳ ಸರಣಿಗೆ ಪ್ರಮುಖ ಸಂಭಾವ್ಯ ಆಟಗಾರರ ಪಟ್ಟಿಯಲ್ಲಿದ್ದ ಭಾರತ ತಂಡದ ವೇಗದ ಬೌಲಿಂಗ್ ಸೆನ್ಸೇಷನ್ ಆಟಗಾರ ಗಾಯದ ಸಮಸ್ಯೆಗೆ ತುತ್ತಾಗಿದ್ದು, ಇಡೀ ಇಂಗ್ಲೆಂಡ್ ವಿರುದ್ಧ ಏಕದಿನ ಮತ್ತು ಟಿ20 ಸರಣಿಗೆ ಅಲಭ್ಯರಾಗುವ ಸಾಧ್ಯತೆ ಇದೆ ಹೇಳಲಾಗಿದೆ.

ಕಳೆದ ವರ್ಷವಷ್ಟೇ ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ ವೇಳೆ ಟೀಂ ಇಂಡಿಯಾಕ್ಕೆ ಪದಾರ್ಪಣೆ ಮಾಡಿದ್ದ ಉದಯೋನ್ಮುಖ ವೇಗದ ಬೌಲರ್ ಮಯಾಂಕ್ ಯಾದವ್ ಬೆನ್ನು ನೋವಿಗೆ ತುತ್ತಾಗಿದ್ದು, ಬ್ಯಾಕ್ ಇಂಜುರಿ ಸಮಸ್ಯೆಯಿಂದಾಗಿ ಸೀಮಿತ ಓವರ್ ಗಳ ಸರಣಿಗೆ ಅಲಭ್ಯರಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಇದೇ ಬೆನ್ನು ನೋವಿನ ಕಾರಣದಿಂದಾಗಿಯೇ ಮಯಾಂಕ್ ಈ ಹಿಂದೆ ಸೌರಾಷ್ಟ್ರ ವಿರುದ್ಧದ ದೆಹಲಿಯ ರಣಜಿ ಟ್ರೋಫಿ ಎರಡನೇ ಲೆಗ್ ಪಂದ್ಯದಲ್ಲೂ ಮೈದಾನಕ್ಕೆ ಇಳಿದಿರಲಿಲ್ಲ. ಮಯಾಂಕ್ ಯಾದವ್ ಗಾಯದ ಗಂಭೀರತೆ ಕುರಿತು ಇನ್ನೂ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲವಾದರೂ ಮುಂದಿನವಾರ ಬಿಸಿಸಿಐನ ಆಯ್ಕೆ ಸಮಿತಿ ಸಭೆ ಸೇರುವ ಹೊತ್ತಿಗೆ ಮಯಾಂಕ್ ಯಾದವ್ ಗುಣಮುಖರಾಗದಿದ್ದರೆ ಅವರನ್ನು ಕೈಬಿಡುವ ಸಾಧ್ಯತೆ ಹೆಚ್ಚು ಎನ್ನಲಾಗಿದೆ.

ಏಕದಿನ, ಟೆಸ್ಟ್ ಪದಾರ್ಪಣೆ ಮುಂದೂಡಿಕೆ?

ಒಂದು ವೇಳೆ ಆಯ್ಕೆ ಸಮಿತಿ ಸಭೆ ವೇಳೆಗೆ ಮಯಾಂಕ್ ಚೇತರಿಸಿಕೊಳ್ಳದಿದ್ದರೆ ಅವರ ಏಕದಿನ ಮತ್ತು ಟೆಸ್ಟ್ ಕ್ರಿಕೆಟ್ ಪದಾರ್ಪಣೆ ಕೂಡ ಮುಂದೂಡಿಕೆಯಾಗುವ ಸಾಧ್ಯತೆ ಇದೆ. ಈಗಾಗಲೇ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿ ವೇಳೆ ಭಾರತದ ವೇಗದ ಆಸ್ತ್ರ ಜಸ್ ಪ್ರೀತ್ ಬುಮ್ರಾ ಗಾಯಗೊಂಡ ಹಿನ್ನಲೆಯಲ್ಲಿ ಅವರಿಗೆ ಬದಲಿಯಾಗಿ ಮಯಾಂಕ್ ಯಾದವ್ ರನ್ನು ಕಣಕ್ಕಿಳಿಸಲು ಆಯ್ಕೆ ಸಮಿತಿ ಚಿಂತನೆಯಲ್ಲಿತ್ತು ಎನ್ನಲಾಗಿದೆ. ಆದರೆ ಇದೀಗ ಮಯಾಂಕ್ ಗಾಯಗೊಂಡಿರುವುದು ಆಯ್ಕೆ ಸಮಿತಿ ಇತರೆ ಆಯ್ಕೆಗಳತ್ತೆ ದೃಷ್ಟಿ ಹಾಯಿಸುವಂತೆ ಮಾಡಿದೆ.

ಉಳಿದಂತೆ ಹಿರಿಯ ವೇಗಿಗಳಾದ ಮಹಮದ್ ಶಮಿ, ಮೊಹಮ್ಮದ್ ಸಿರಾಜ್ ಮತ್ತು ಅರ್ಶ್‌ದೀಪ್ ಸಿಂಗ್ ರಂತಹ ಸ್ಟಾರ್ ಆಟಗಾರರು ಇಂಗ್ಲೆಂಡ್ ವಿರುದ್ಧದ ಸೀಮಿತ ಓವರ್‌ಗಳ ಸರಣಿ ಹಾಗೂ ಚಾಂಪಿಯನ್ಸ್ ಟ್ರೋಫಿಗೆ ಆಡುವುದು ಖಚಿತವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಇನ್ನೂ ನನಸಾಗಿಲ್ಲ ದಶಕಗಳ ಕನಸು: ಹಾಸನ ವಿಮಾನ ನಿಲ್ದಾಣಕ್ಕೆ ಸಿಗದ ರೆಕ್ಕೆ, ಯೋಜನೆಗೆ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

SCROLL FOR NEXT