ಜಯ್ ಶಾ-ದೇವಜಿತ್ ಸೈಕಿಯಾ 
ಕ್ರಿಕೆಟ್

BCCI: ಜಯ್ ಶಾ ಬದಲಿಗೆ ನೂತನ ಕಾರ್ಯದರ್ಶಿಯಾಗಿ ದೇವಜಿತ್ ಸೈಕಿಯಾ ನೇಮಕ!

ಡಿಸೆಂಬರ್ 1ರಂದು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ (ಐಸಿಸಿ) ಅಧ್ಯಕ್ಷರಾಗಿ ಜಯ್ ಶಾ ಅಧಿಕಾರ ವಹಿಸಿಕೊಂಡಾಗಿನಿಂದ ಸೈಕಿಯಾ ಬಿಸಿಸಿಐನ ಹಂಗಾಮಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ನವದೆಹಲಿ: ಇಂದು ನಡೆದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (BCCI) ವಿಶೇಷ ಸಾಮಾನ್ಯ ಸಭೆಯಲ್ಲಿ (SGM) ದೇವಜಿತ್ ಸೈಕಿಯಾ ಮತ್ತು ಪ್ರಭತೇಜ್ ಸಿಂಗ್ ಭಾಟಿಯಾ ಅವರನ್ನು ಕ್ರಮವಾಗಿ ಬಿಸಿಸಿಐ ಕಾರ್ಯದರ್ಶಿ ಮತ್ತು ಖಜಾಂಚಿಯಾಗಿ ಅಧಿಕೃತವಾಗಿ ಆಯ್ಕೆ ಮಾಡಲಾಗಿದೆ. ಬಿಸಿಸಿಐ ಚುನಾವಣಾ ಅಧಿಕಾರಿ ಮತ್ತು ಭಾರತದ ಮಾಜಿ ಮುಖ್ಯ ಚುನಾವಣಾ ಆಯುಕ್ತ (CEC) ಅಚಲ್ ಕುಮಾರ್ ಜ್ಯೋತಿ ಅವರು ಪಟ್ಟಿಯನ್ನು ಅಂತಿಮಗೊಳಿಸಿದ್ದು ಖಾಲಿ ಇರುವ ಹುದ್ದೆಗಳಿಗೆ ಸೈಕಿಯಾ ಮತ್ತು ಪ್ರಭತೇಜ್ ಮಾತ್ರ ಕಣದಲ್ಲಿದ್ದರು.

ಡಿಸೆಂಬರ್ 1ರಂದು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ (ಐಸಿಸಿ) ಅಧ್ಯಕ್ಷರಾಗಿ ಜಯ್ ಶಾ ಅಧಿಕಾರ ವಹಿಸಿಕೊಂಡಾಗಿನಿಂದ ಸೈಕಿಯಾ ಬಿಸಿಸಿಐನ ಹಂಗಾಮಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಬಿಸಿಸಿಐ ಸಂವಿಧಾನದ ಪ್ರಕಾರ, ಯಾವುದೇ ಖಾಲಿ ಹುದ್ದೆಯನ್ನು 45 ದಿನಗಳಲ್ಲಿ ಎಸ್‌ಜಿಎಂ ಕರೆಯುವ ಮೂಲಕ ಭರ್ತಿ ಮಾಡಬೇಕು. ಇನ್ನು 43ನೇ ದಿನಕ್ಕೆ ಆಯ್ಕೆ ಪ್ರಕ್ರಿಯೆ ಮುಗಿಸಲಾಗಿದೆ.

ಇದಕ್ಕೂ ಮೊದಲು, ಆಶಿಶ್ ಶೆಲಾರ್ ಬಿಸಿಸಿಐನ ಖಜಾಂಚಿಯಾಗಿದ್ದರು ಆದರೆ ಮಹಾರಾಷ್ಟ್ರ ಸರ್ಕಾರದಲ್ಲಿ ಕ್ಯಾಬಿನೆಟ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಆ ಹುದ್ದೆಯನ್ನು ತೊರೆದರು. ಇದಾದ ನಂತರವೇ ಭಾಟಿಯಾ ಖಜಾಂಚಿ ಹುದ್ದೆಗೆ ನಾಮಪತ್ರ ಸಲ್ಲಿಸಿದರು.

ಈ ಇಬ್ಬರು ಪದಾಧಿಕಾರಿಗಳ ಆಯ್ಕೆಯು ಎಸ್‌ಜಿಎಂನ ಪ್ರಮುಖ ಕಾರ್ಯಸೂಚಿಯಾಗಿದೆ. ಐಸಿಸಿ ಅಧ್ಯಕ್ಷ ಶಾ ಅವರು ವಿಶೇಷ ಆಹ್ವಾನಿತರಾಗಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ಸಮಯದಲ್ಲಿ, ಬಿಸಿಸಿಐನ ರಾಜ್ಯ ಘಟಕಗಳು ಸಹ ಅವರನ್ನು ಗೌರವಿಸುತ್ತವೆ. ಕಳೆದ ತಿಂಗಳು ಗ್ರೆಗ್ ಬಾರ್ಕ್ಲೇ ಅವರನ್ನು ಐಸಿಸಿ ಮುಖ್ಯಸ್ಥರನ್ನಾಗಿ ಶಾ ನೇಮಿಸಿದ್ದರು.

ದೇವಜಿತ್ ಸೈಕಿಯಾ ಅಸ್ಸಾಂ ನಿವಾಸಿಯಾಗಿದ್ದು ಕ್ರಿಕೆಟ್, ಕಾನೂನು ಮತ್ತು ಆಡಳಿತದಂತಹ ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡಿದ್ದಾರೆ. ಮಾಜಿ ಪ್ರಥಮ ದರ್ಜೆ ಕ್ರಿಕೆಟಿಗರಾಗಿದ್ದ ಸೈಕಿಯಾ 1990 ಮತ್ತು 1991ರ ನಡುವೆ ನಾಲ್ಕು ಪಂದ್ಯಗಳನ್ನು ಆಡಿದ್ದರು. ಅವರು ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಆಗಿದ್ದರು. ಆದಾಗ್ಯೂ, ಅವರ ಕ್ರಿಕೆಟ್ ವೃತ್ತಿಜೀವನವು ತುಂಬಾ ಚಿಕ್ಕದಾಗಿತ್ತು. ಆದರೆ ಅವರು 53 ರನ್ ಗಳಿಸಿದ್ದಾರೆ. ತಮ್ಮ ಕ್ರಿಕೆಟ್ ವೃತ್ತಿಜೀವನದ ನಂತರ, ಸೈಕಿಯಾ ಕಾನೂನು ಕ್ಷೇತ್ರವನ್ನು ಪ್ರವೇಶಿಸಿದರು. ಅವರು 28ನೇ ವಯಸ್ಸಿನಲ್ಲಿ ಗುವಾಹಟಿ ಹೈಕೋರ್ಟ್‌ನಲ್ಲಿ ವಕೀಲರಾಗಿ ಅಭ್ಯಾಸ ಮಾಡಲು ಪ್ರಾರಂಭಿಸಿದರು. ವಕೀಲಿ ವೃತ್ತಿಗೆ ಸೇರುವ ಮೊದಲು, ಅವರು ಕ್ರೀಡಾ ಕೋಟಾದ ಮೂಲಕ ಉತ್ತರ ಗಡಿನಾಡು ರೈಲ್ವೆ ಮತ್ತು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ನಲ್ಲಿ ಉದ್ಯೋಗಗಳನ್ನು ಪಡೆದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT