ಸಿತಾಂಶು ಕೋಟಕ್  
ಕ್ರಿಕೆಟ್

ಟೀಂ ಇಂಡಿಯಾ ಬ್ಯಾಟಿಂಗ್ ಕೋಚ್ ಆಗಿ ಸಿತಾಂಶು ಕೋಟಕ್ ನೇಮಕ!

ಭಾರತ ತಂಡಕ್ಕೆ ಪ್ರಸ್ತುತ ಗೌತಮ್ ಗಂಭೀರ್ ಮುಖ್ಯ ಕೋಚ್ ಆಗಿದ್ದು, ಅಭಿಷೇಕ್ ನಾಯರ್ (ಸಹಾಯಕ ಕೋಚ್), ರಿಯಾನ್ ಟೆನ್ ಡೋಸ್ಚೇಟ್ (ಸಹಾಯಕ ಕೋಚ್), ಮೊರ್ನೆ ಮೊರ್ಕೆಲ್ (ಬೌಲಿಂಗ್ ಕೋಚ್) ಮತ್ತು ಟಿ ದಿಲೀಪ್ (ಫೀಲ್ಡಿಂಗ್ ಕೋಚ್) ಆಗಿದ್ದಾರೆ.

ನವದೆಹಲಿ: ತವರಿನಲ್ಲಿ ನಡೆಯಲಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಸೀಮಿತ ಓವರ್‌ಗಳ ಸರಣಿಗೆ ದೇಶೀಯ ಕ್ರಿಕೆಟ್ ದಿಗ್ಗಜ ಸಿತಾಂಶು ಕೋಟಕ್ ಅವರನ್ನು ಬ್ಯಾಟಿಂಗ್ ಕೋಚ್ ಆಗಿ ನೇಮಕ ಮಾಡಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ನಿರ್ಧರಿಸಿದೆ. ಭಾರತ ತಂಡ ತವರಿನಲ್ಲಿ ಐದು T-20 ಮತ್ತು ಮೂರು ಏಕದಿನ ಪಂದ್ಯಗಳನ್ನು ಆಡಲಿದೆ.

ಬಾರ್ಡರ್ ಗವಾಸ್ಕರ್ ಟ್ರೋಫಿಯ ನಂತರ ಈಡನ್ ಗಾರ್ಡನ್ ಮೈದಾನದಲ್ಲಿ ಜನವರಿ 22 ರಂದು ಇಂಗ್ಲೆಂಡ್ ವಿರುದ್ಧದ ಟಿ-20 ಪಂದ್ಯವನ್ನು ಭಾರತ ಆಡಲಿದೆ. ಇದಕ್ಕಾಗಿ ಕೋಲ್ಕತ್ತಾದಲ್ಲಿ ಜನವರಿ 18 ರಿಂದ ಮೂರು ದಿನಗಳ ಅಭ್ಯಾಸ ನಡೆಯಲಿದ್ದು, ಕೋಟಕ್ ಅವರು ಬ್ಯಾಟಿಂಗ್ ಕೋಚ್ ಆಗಿ ಭಾರತ ತಂಡ ಸೇರಲಿದ್ದಾರೆ ಎಂದು ಭಾರತೀಯ ಮಂಡಳಿಯ ಮೂಲಗಳು ತಿಳಿಸಿವೆ.

ಭಾರತ ತಂಡಕ್ಕೆ ಪ್ರಸ್ತುತ ಗೌತಮ್ ಗಂಭೀರ್ ಮುಖ್ಯ ಕೋಚ್ ಆಗಿದ್ದು, ಅಭಿಷೇಕ್ ನಾಯರ್ (ಸಹಾಯಕ ಕೋಚ್), ರಿಯಾನ್ ಟೆನ್ ಡೋಸ್ಚೇಟ್ (ಸಹಾಯಕ ಕೋಚ್), ಮೊರ್ನೆ ಮೊರ್ಕೆಲ್ (ಬೌಲಿಂಗ್ ಕೋಚ್) ಮತ್ತು ಟಿ ದಿಲೀಪ್ (ಫೀಲ್ಡಿಂಗ್ ಕೋಚ್) ಆಗಿದ್ದಾರೆ.

52ರ ಹರೆಯದ ಮಾಜಿ ಎಡಗೈ ಬ್ಯಾಟರ್ ಕೋಟಕ್ ಸೌರಾಷ್ಟ್ರ ತಂಡದ ನಾಯಕನಾಗಿದ್ದರು. 1992-93ರಿಂದ 2013ರ ತನಕ ದೇಶೀಯ ಕ್ರಿಕೆಟ್‌ನಲ್ಲಿ ಆಡಿದ್ದ ಕೋಟಕ್ ಅವರು 130 ಪ್ರಥಮ ದರ್ಜೆ ಪಂದ್ಯಗಳಲ್ಲಿ 41. 76ರ ಸರಾಸರಿಯಲ್ಲಿ 15 ಶತಕ ಹಾಗೂ 55 ಅರ್ಧ ಶತಕಗಳ ಸಹಿತ 8,061 ರನ್ ಗಳಿಸಿದ್ದಾರೆ. ನಿವೃತ್ತಿ ನಂತರ ಪೂರ್ಣಕಾಲಿಕ ತರಬೇತುದಾರರಾಗಿದ್ದ ಕೋಟಕ್ ಅವರು ಸೌರಾಷ್ಟ್ರ ತಂಡಕ್ಕೆ ಕೋಚಿಂಗ್ ನೀಡಿದ್ದರು. ನಂತರ ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಬ್ಯಾಟಿಂಗ್ ಕೋಚ್ ಆಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ರಾಜ್ಯಸಭಾ ಸದಸ್ಯತ್ವ ನಿರಾಕರಣೆ

ವಿದಾಯದ ಕೊನೇ ಕ್ಷಣದಲ್ಲೂ Siddaramaiah ಮಹತ್ವದ ಕ್ರಮ: ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ ವರ್ಗಾವಣೆ

Siddaramaiah Press Meet: 'ಹೈಕಮಾಂಡ್ ಆದೇಶದ ಮೇಲೆ ರಾಜಿನಾಮೆ ನೀಡಿದ್ದೇನೆ': ಸಿದ್ದರಾಮಯ್ಯ ವಿದಾಯದ ಮಾತು

Siddaramaiah ರಾಜಿನಾಮೆ: 'ನಾನು ಆ ಪಕ್ಷದಲ್ಲಿ ಇಲ್ಲದೆ ಇರಬಹುದು, ಆದರೆ ಅವರೊಂದಿಗಿನ ಒಡನಾಟ ಮರೆಯುವಂತದ್ದಲ್ಲ': BC ಪಾಟೀಲ್ ಭಾವುಕ

ಬೆಂಗಳೂರು ಬಲು ದುಬಾರಿ: ನಮ್ ಊರಲ್ಲಿ ಬಟ್ಟೆ ಇಸ್ತ್ರಿಗೆ ಬರೀ 5 ರೂಪಾಯಿ, ಆದ್ರೆ ಇಲ್ಲಿ 20 ರೂಪಾಯಿ!: ನೊಯ್ಡಾ ನಿವಾಸಿ ಅಚ್ಚರಿ!

SCROLL FOR NEXT