ವಿರಾಟ್ ಕೊಹ್ಲಿ 
ಕ್ರಿಕೆಟ್

Ranji Trophy: 6 ರನ್‌ ಗಳಿಸಿ ವಿರಾಟ್ ಕೊಹ್ಲಿ ಔಟ್; ಕ್ಷಣದಲ್ಲೇ ಕ್ರೀಡಾಂಗಣದಿಂದ ಹೊರನಡೆದ ಫ್ಯಾನ್ಸ್!

ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ರೈಲ್ವೇಸ್ ವಿರುದ್ಧದ ಲೀಗ್ ಹಂತದ ಪಂದ್ಯದ ಎರಡನೇ ದಿನದಂದು ವಿರಾಟ್ ಕೊಹ್ಲಿ ಕೇವಲ ಆರು ರನ್‌ಗಳಿಗೆ ಔಟ್ ಆಗಿದ್ದು, ಇದರಿಂದ ಬೇಸರಗೊಂಡ ಫ್ಯಾನ್ಸ್ ಕ್ರೀಡಾಂಗಣದಿಂದ ಹೊರನಡೆದಿದ್ದಾರೆ.

ನವದೆಹಲಿ: ಭಾರತದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಬರೋಬ್ಬರಿ 12 ವರ್ಷಗಳ ಬಳಿಕ ರಣಜಿ ಟ್ರೋಫಿ ಟೂರ್ನಿಯಲ್ಲಿ ಕಾಣಿಸಿಕೊಂಡಿದ್ದು, ಕೊಹ್ಲಿ ಬ್ಯಾಟಿಂಗ್ ನೋಡಲು ಜಮಾಯಿಸಿದ್ದ ಅಭಿಮಾನಿಗಳಿಗೆ ತೀವ್ರ ನಿರಾಸೆ ಉಂಟಾಗಿದೆ.

ಇಲ್ಲಿನ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ರೈಲ್ವೇಸ್ ವಿರುದ್ಧದ ಲೀಗ್ ಹಂತದ ಪಂದ್ಯದ ಎರಡನೇ ದಿನದಂದು ವಿರಾಟ್ ಕೊಹ್ಲಿ ಕೇವಲ ಆರು ರನ್‌ಗಳಿಗೆ ಔಟ್ ಆಗಿದ್ದು, ಇದರಿಂದ ಬೇಸರಗೊಂಡ ಫ್ಯಾನ್ಸ್ ಕ್ರೀಡಾಂಗಣದಿಂದ ಹೊರನಡೆದಿದ್ದಾರೆ.

ಕೊಹ್ಲಿ ದೆಹಲಿ ತಂಡವನ್ನು ಪ್ರತನಿಧಿಸುತ್ತಿದ್ದು, 15 ಎಸೆತಗಳಲ್ಲಿ ಆರು ರನ್ ಗಳಿಸಿ ಔಟ್ ಆಗಿದ್ದಾರೆ. ಬಲಗೈ ವೇಗಿ ಹಿಮಾಂಶು ಸಾಂಗ್ವಾನ್ ಅವರ ಎಸೆತದಲ್ಲಿ ಬೋಲ್ಡ್ ಆಗಿದ್ದಾರೆ. ಹಿಂದಿನ ಎಸೆತದಲ್ಲಿ ಕೊಹ್ಲಿ ಬೌಂಡರಿ ಬಾರಿಸಿದ್ದರು. ಅದೇ ರೀತಿಯ ಶಾಟ್ ಅನ್ನು ಪ್ರಯತ್ನಿಸಲು ಕೊಹ್ಲಿ ಮುಂದಾದಾಗ ಚೆಂಡು ಅವರತ್ತ ಹೆಚ್ಚು ಸ್ವಿಂಗ್ ಆಗಿದ್ದರಿಂದ ಕೊಹ್ಲಿ ವಿಕೆಟ್ ಕಳೆದುಕೊಳ್ಳಬೇಕಾಯಿತು.

36 ವರ್ಷದ ಬ್ಯಾಟರ್ ಸುಮಾರು 12 ವರ್ಷಗಳ ನಂತರ ರಣಜಿ ಟ್ರೋಫಿಯಲ್ಲಿ ಮೈದಾನಕ್ಕಿಳಿದಿದ್ದಾರೆ. 2012ರ ನವೆಂಬರ್‌ನಲ್ಲಿ ಉತ್ತರ ಪ್ರದೇಶ ವಿರುದ್ಧ ಗಾಜಿಯಾಬಾದ್‌ನಲ್ಲಿ ನಡೆದ ಪಂದ್ಯಾದಲ್ಲಿ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದರು.

ಟಾಸ್ ಗೆದ್ದ ದೆಹಲಿ ತಂಡ ಬೌಲಿಂಗ್ ಆಯ್ದುಕೊಂಡಿತ್ತು. ಮೊದಲಿಗೆ ಬ್ಯಾಟಿಂಗ್ ಮಾಡಿದ್ದ ರೈಲ್ವೇಸ್ ತಂಡ ಮೊದಲ ಇನಿಂಗ್ಸ್‌ನಲ್ಲಿ 67.4 ಓವರ್‌ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 241 ರನ್ ಕಲೆಹಾಕಿತ್ತು. ತನ್ನ ಇನಿಂಗ್ಸ್ ಆರಂಭಿಸಿರುವ ದೆಹಲಿ ಸದ್ಯ 41 ಓವರ್‌ಗಳಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ 164 ರನ್ ಗಳಿಸಿದೆ. 30 ಓವರ್‌ಗಳ ಅಂತ್ಯಕ್ಕೆ ದೆಹಲಿ 4 ವಿಕೆಟ್‌ ನಷ್ಟಕ್ಕೆ 103 ರನ್ ಗಳಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT