ಇಂಗ್ಲೆಂಡ್ ಸ್ಪಿನ್ನರ್ ಬಷೀರ್ ಗೆ ಗಾಯShoaib Bashir Doubtful For 4th Test As ECB 
ಕ್ರಿಕೆಟ್

Cricket: Ravindra Jadeja ಹೊಡೆತಕ್ಕೆ ಇಂಗ್ಲೆಂಡ್ ಸ್ಟಾರ್ ಆಟಗಾರ ಔಟ್; 4ನೇ ಟೆಸ್ಟ್ ಪಂದ್ಯಕ್ಕೆ Shoaib Bashir ಅಲಭ್ಯ?

ಇಂಗ್ಲೆಂಡ್ ತಂಡದ ಸ್ಟಾರ್ ಸ್ಪಿನ್ನರ್ ಶೊಯೆಬ್ ಬಶೀರ್ ಗಾಯದ ಸಮಸ್ಯೆಯಿಂದಾಗಿ ಮುಂದಿನ 4ನೇ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗುವ ಸಾಧ್ಯತೆ ಇದೆ

ಲಂಡನ್: ಭಾರತದ ವಿರುದ್ಧದ ಟೆಸ್ಟ್ ಸರಣಿ ಆಡುತ್ತಿರುವ ಇಂಗ್ಲೆಂಡ್ ತಂಡಕ್ಕೆ ಮರ್ಮಾಘಾತ ಎದುರಾಗಿದ್ದು, ಆಂಗ್ಲರ ಪ್ರಮುಖ ಆಟಗಾರ ಮುಂದಿನ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ ಎಂದು ಹೇಳಲಾಗಿದೆ.

ಹೌದು.. ಇಂಗ್ಲೆಂಡ್ ತಂಡದ ಸ್ಟಾರ್ ಸ್ಪಿನ್ನರ್ ಶೊಯೆಬ್ ಬಶೀರ್ ಗಾಯದ ಸಮಸ್ಯೆಯಿಂದಾಗಿ ಮುಂದಿನ 4ನೇ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

3ನೇ ಟೆಸ್ಟ್ ಪಂದ್ಯದ ವೇಳೆ ಶೊಯೆಬ್ ಬಷೀರ್ ಕೈಗೆ ಗಂಭೀರವಾಗಿದ್ದು, ಅವರು ಬೆರಳಿನ ಡಿಸ್ ಲೊಕೇಷನ್ ಸಮಸ್ಯೆಯಿಂದಾಗಿ ಬಳಲುತ್ತಿದ್ದಾರೆ ಎಂದು ಹೇಳಲಾಗಿದೆ.

ಹೀಗಾಗಿ ಮುಂದಿನ ಪಂದ್ಯಕ್ಕೆ ಅವರು ಅಲಭ್ಯರಾಗುವ ಸಾಧ್ಯತೆ ಇದೆ.

ವೈದ್ಯರು ಹೇಳಿದ್ದೇನು?

ಪಂದ್ಯದ ವೇಳೆ ನಡೆದ ಗಾಯದಿಂದಾಗಿ ಬಶೀರ್ ಬೆರಳಿಗೆ ಗಂಭೀರ ಗಾಯವಾಗಿದೆ. ಬೆರಳಿನ ಸ್ಥಾನಪಲ್ಲಟ ಸಮಸ್ಯೆ ಉಲ್ಪಣವಾಗದಂತೆ ನೋಡಿಕೊಳ್ಳಬೇಕು. ಹೀಗಾಗಿ ವಿಶ್ರಾಂತಿ ಅಗತ್ಯ ಎಂದು ಹೇಳಿದ್ದಾರೆ ಎನ್ನಲಾಗಿದೆ. ಇದೇ ಕಾರಣಕ್ಕೆ ಇಂಗ್ಲೆಂಡ್ ತಂಡ ಭಾರತದ ವಿರುದ್ಧದ ನಾಲ್ಕನೇ ಇನ್ನಿಂಗ್ಸ್ ನಲ್ಲಿ ಈ ವರೆಗೂ ಬಷೀರ್ ಬೌಲಿಂಗ್ ಮಾಡಿಲ್ಲ. ಸ್ಪಿನ್ನರ್ ನಾಲ್ಕನೇ ಇನ್ನಿಂಗ್ಸ್‌ನಲ್ಲಿ ಬೌಲಿಂಗ್ ಮಾಡುವ ನಿರೀಕ್ಷೆಯಿದೆ ಎಂಬ ವರದಿಗಳಿವೆ. ಆದರೆ ಇಂಗ್ಲೆಂಡ್ ಅವರನ್ನು ಬಳಸದಿರಲು ನಿರ್ಧರಿಸಿದೆ ಎನ್ನಲಾಗಿದೆ.

ಬಷೀರ್ ಆಗಿದ್ದೇನು?

ಇಂಗ್ಲೆಂಡ್ ತಂಡದ ಸ್ಟಾರ್ ಸ್ಪಿನ್ನರ್ ಶೋಯೆಬ್ ಬಶೀರ್ 3ನೇ ಟೆಸ್ಟ್ ನ ಮೊದಲ ಇನ್ನಿಂಗ್ಸ್‌ನ 78 ನೇ ಓವರ್‌ನಲ್ಲಿ ಬೆರಳಿಗೆ ಗಾಯ ಮಾಡಿಕೊಂಡರು. ಭಾರತ ತಂಡದ ರವೀಂದ್ರ ಜಡೇಜಾ ಬ್ಯಾಟಿಂಗ್ ಮಾಡುತ್ತಿದ್ದ ವೇಳೆ ಬಷೀರ್ ಎಸೆದ ಎಸೆತವನ್ನ ಬಲವಾಗಿ ಸ್ಟ್ರೈಟ್ ಡ್ರೈವ್ ನತ್ತ ಬಾರಿಸಿದರು.

ಈ ವೇಳೆ ಚೆಂಡನ್ನು ತಡೆಯಲು ಯತ್ನಿಸಿದ ಬಷೀರ್ ಗೆ ಕೈಗೆ ಗಾಯವಾಯಿತು. ಮೈದಾನದಲ್ಲೇ ಬಷೀರ್ ಕೈಯಿಂದ ರಕ್ತ ಚಿಮ್ಮಿತ್ತು. ಕೂಡಲೇ ಮೈದಾನದಿಂದ ಹೊರನಡೆದ ಬಷೀರ್ ಮತ್ತೆ ವಾಪಸ್ ಆಗಿಲ್ಲ.

ಬಷೀರ್ ಅನುಪಸ್ಥಿತಿಯಲ್ಲಿ ಇಂಗ್ಲೆಂಡ್ ತಂಡದ ಜೋ ರೂಟ್ ಪಾರ್ಟ್ ಟೈಮ್ ಬೌಲರ್ ಆಗಿ ಕಾಣಿಸಿಕೊಂಡರು. ಜೋ ರೂಟ್ ಒಟ್ಟು 10 ಓವರ್ ಬೌಲಿಂಗ್ ಮಾಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೌರಿಂಗ್ ಆಸ್ಪತ್ರೆ ದುರಂತ: ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಭೇಟಿ, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ ಪರಿಹಾರ ಘೋಷಣೆ

IPL 2026: ರಿಕಲ್ಟನ್ ಶತಕ ವ್ಯರ್ಥ; ಮುಂಬೈ ನೀಡಿದ ಟಾರ್ಗೆಟ್ ಧೂಳಿಪಟ, ದಾಖಲೆಯ 249 ರನ್ ಬಾರಿಸಿದ ಗೆದ್ದ SRH!

ಬಾಂಗ್ಲಾದೇಶ ಸರ್ಕಾರ ದೊಡ್ಡ ತಪ್ಪು ಮಾಡಿದೆ... ಟಿ20 ವಿಶ್ವಕಪ್ ಬಗ್ಗೆ ಶಕೀಬ್ ಅಲ್ ಹಸನ್ 'ಸ್ಫೋಟಕ ಹೇಳಿಕೆ'!

IPL 2026: 'ಬ್ಯಾಟಲ್ಲಿ AI Chip ಇದೆ' ಎಂದ ಪಾಕಿಸ್ತಾನದ Nouman Niaz ಗೆ ಬಟ್ಟೆ ಸುತ್ತಿ ಹೊಡೆದ ವೈಭವ್ ಸೂರ್ಯವಂಶಿ

Exit polls: ದೀದಿಗೆ ಶಾಕ್; BJP ತೆಕ್ಕೆಗೆ ಬಂಗಾಳ; ಅಸ್ಸಾಂನಲ್ಲೂ ಕಮಲ ಮ್ಯಾಜಿಕ್!

SCROLL FOR NEXT