ಜಸ್ಪ್ರೀತ್ ಬುಮ್ರಾ  
ಕ್ರಿಕೆಟ್

IND vs ENG 4ನೇ ಟೆಸ್ಟ್: ಬೂಮ್ರಾ ಆಡ್ತಾರಾ? ಮೊಹಮ್ಮದ್ ಸಿರಾಜ್ ಹೇಳಿದ್ದು ಹೀಗೆ...!

ಐದು ಟೆಸ್ಟ್‌ ಪಂದ್ಯಗಳ ಪೈಕಿ ಮೂರಲ್ಲಿ ಮಾತ್ರ ಬೂಮ್ರಾ ಆಡುತ್ತಿದ್ದು, ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಎರಡನೇ ಟೆಸ್ಟ್‌ನಲ್ಲಿ ಆಡಿರಲಿಲ್ಲ.

ಮ್ಯಾಂಚೆಸ್ಟರ್: ಓಲ್ಡ್ ಟ್ರಾಫರ್ಡ್‌ನಲ್ಲಿ ಬುಧವಾರದಿಂದ ಆರಂಭವಾಗಲಿರುವ ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್‌ನಲ್ಲಿ ಜಸ್ಪ್ರೀತ್ ಬುಮ್ರಾ ಆಡುವುದನ್ನು ಭಾರತದ ವೇಗಿ ಮೊಹಮ್ಮದ್ ಸಿರಾಜ್ ಸೋಮವಾರ ಖಚಿತಪಡಿಸಿದ್ದಾರೆ.

ಐದು ಟೆಸ್ಟ್‌ ಪಂದ್ಯಗಳ ಪೈಕಿ ಮೂರಲ್ಲಿ ಮಾತ್ರ ಬೂಮ್ರಾ ಆಡುತ್ತಿದ್ದು, ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಎರಡನೇ ಟೆಸ್ಟ್‌ನಲ್ಲಿ ಆಡಿರಲಿಲ್ಲ. ಆ ಟೆಸ್ಟ್ ನ್ನು ಗೆದ್ದಿದ್ದ ಭಾರತ ಲಾರ್ಡ್ಸ್‌ನಲ್ಲಿ ನಡೆದ ಮೂರನೇ ಟೆಸ್ಟ್‌ನಲ್ಲಿ ಇಂಗ್ಲೆಂಡ್ ವಿರುದ್ಧ 22 ರನ್‌ಗಳಿಂದ ಸೋಲು ಕಂಡಿತ್ತು.

ಐದು ಟೆಸ್ಟ್ ಸರಣಿಯಲ್ಲಿ ಭಾರತ 1-2 ಅಂತರದಿಂದ ಹಿನ್ನಡೆ ಕಾಯ್ದುಕೊಂಡಿದೆ. ಭಾರತದ ಮಾಜಿ ನಾಯಕ ಅನಿಲ್ ಕುಂಬ್ಳೆ ಇತ್ತೀಚೆಗೆ ಕೊನೆಯ ಎರಡು ಟೆಸ್ಟ್‌ಗಳಲ್ಲಿ ಸ್ಟಾರ್ ವೇಗಿಗಳನ್ನು ಆಡುವ ಅಗತ್ಯತೆಯ ಬಗ್ಗೆ ಮಾತನಾಡಿದ್ದರು.

ಅಭ್ಯಾಸದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮೊಹಮ್ಮದ್ ಸಿರಾಜ್, ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಬುಮ್ರಾ ಆಡೋದನ್ನು ಖಚಿತಪಡಿಸಿದರು. ನನಗೆ ತಿಳಿದಂತೆ ಜಸ್ಸಿ ಬಾಯ್ ಆಡ್ತಾರೆ. ಗಾಯದ ಕಾರಣ ಬೌಲಿಂಗ್ ವಿಭಾಗದಲ್ಲಿ ದಿನದಿಂದ ದಿನಕ್ಕೆ ಬದಲಾವಣೆಯಾಗುತ್ತಿದೆ ಎಂದು ತಿಳಿಸಿದರು.

ಮುಂದಿನ ಪಂದ್ಯಕ್ಕೆ ಯಾವ ರೀತಿಯ ಪ್ಲಾನ್ ಮಾಡಿದ್ದೀರಿ ಎಂಬ ಪ್ರಶ್ನೆಗೆ ಉತ್ತರಿಸಿದ ಸಿರಾಜ್, ಇಂಗ್ಲೆಂಡ್ ಹೇಗೆ ಆಡುತ್ತದೆ ಎಂಬುದನ್ನು ಪರಿಗಣಿಸಿ ಉತ್ತಮ ರೀತಿಯಲ್ಲಿ ಬೌಲಿಂಗ್ ಮಾಡುವುದು ನಮ್ಮ ಯೋಜನೆಯಾಗಿದೆ. ಕಳೆದ ಪಂದ್ಯದಲ್ಲಿ ಆಡಿದಂತೆ ತಾಳ್ಮೆಯಿಂದ ಆಡಬೇಕೆಂದು ಬಯಸುತ್ತೇವೆ ಎಂದರು. ಕೈಗೆ ಗಾಯವಾಗಿರುವ ಕಾರಣ ಅರ್ಷದೀಪ್ ಸಿಂಗ್ ಮ್ಯಾಂಚೆಸ್ಟರ್ ಟೆಸ್ಟ್‌ನಿಂದ ಹೊರಗುಳಿದಿರುವ ಹಿನ್ನೆಲೆಯಲ್ಲಿ ಅನ್ಶುಲ್ ಕಾಂಬೋಜ್ ತಂಡ ಸೇರಿದ್ದಾರೆ. ನಿತೀಶ್ ರೆಡ್ಡಿ ಮೊಣಕಾಲಿನ ಗಾಯದ ಕಾರಣದಿಂದಾಗಿ ಇಡೀ ಸರಣಿಯಿಂದ ಹೊರಗುಳಿದಿದ್ದಾರೆ.

ಆಕಾಶ್ ದೀಪ್ ಗೂ ಗಾಯಗಳಾಗಿದ್ದು, ಸೋಮವಾರ ಬೌಲಿಂಗ್ ನೆಟ್ ನಲ್ಲಿ ಕಾಣಿಸಿಕೊಳ್ಳಲಿಲ್ಲ. ಆಕಾಶ್ ದೀಪ್ ಅವರನ್ನು ವೈದ್ಯರು ತಪಾಸಣೆ ನಡೆಸಿದ್ದಾರೆ. ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಅರ್ಷದೀಪ್ ಬದಲಿಗೆ ಅನ್ಶುಲ್ ಬಂದಿದ್ದು, ಅವರಿಗೆ ಒಳ್ಳೇಯದಾಗಲಿ ಎಂದು ಸಿರಾಜ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

SCROLL FOR NEXT