ಯಶ್ ದಯಾಳ್ 
ಕ್ರಿಕೆಟ್

IPL 2025 ಸಮಯದಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ; RCB ವೇಗಿ ಯಶ್ ದಯಾಳ್ ವಿರುದ್ಧ FIR ದಾಖಲು

ಸಂತ್ರಸ್ತೆ 17 ವರ್ಷದವಳಿದ್ದಾಗ ಅತ್ಯಾಚಾರ ನಡೆದಿರುವುದರಿಂದ, ಈ ಪ್ರಕರಣವನ್ನು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (POCSO) ಕಾಯ್ದೆ, 2012ರ ಅಡಿಯಲ್ಲಿ ದಾಖಲಿಸಲಾಗಿದೆ.

ಇತ್ತೀಚೆಗಷ್ಟೇ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪಿಯಾಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ವೇಗಿ ಯಶ್ ದಯಾಳ್ ಇದೀಗ ಹೊಸ ವಿವಾದದಲ್ಲಿ ಸಿಲುಕಿದ್ದಾರೆ. ಜೈಪುರದ ಸಂಗನೇರ್ ಸದರ್ ಪೊಲೀಸ್ ಠಾಣೆಯಲ್ಲಿ ದಯಾಳ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಎಫ್‌ಐಆರ್ ದಾಖಲಾಗಿದೆ.

ದೈನಿಕ್ ಭಾಸ್ಕರ್ ವರದಿ ಪ್ರಕಾರ, ದಯಾಳ್ ಅಪ್ರಾಪ್ತ ಬಾಲಕಿಯನ್ನು ಎರಡು ವರ್ಷಗಳ ಕಾಲ ಶೋಷಣೆ ಮಾಡಿದ್ದಾರೆ. ಆಕೆಗೆ ವೃತ್ತಿಪರ ಕ್ರಿಕೆಟ್‌ನಲ್ಲಿ ಉಜ್ವಲ ಭವಿಷ್ಯದ ಭರವಸೆ ನೀಡಿದ್ದಾರೆ. ಗಾಜಿಯಾಬಾದ್‌ನಲ್ಲಿ ನಡೆದ ಪ್ರತ್ಯೇಕ ಲೈಂಗಿಕ ದೌರ್ಜನ್ಯ ಪ್ರಕರಣದ ನಂತರ ದಯಾಳ್ ಮತ್ತೊಂದು ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ.

ಜೈಪುರ ಪೊಲೀಸರ ಪ್ರಕಾರ, ಈಗ 19 ವರ್ಷದ ಸಂತ್ರಸ್ತೆ, ಅಪ್ರಾಪ್ತಳಾಗಿದ್ದಾಗ ಕ್ರಿಕೆಟ್ ಮೂಲಕ ದಯಾಳ್ ಅವರನ್ನು ಭೇಟಿಯಾದಳು. ಐಪಿಎಲ್ 2025 ರ ಅವಧಿಯಲ್ಲಿ ಸೇರಿದಂತೆ ಕಳೆದ ಎರಡು ವರ್ಷಗಳಿಂದ ಪದೇ ಪದೆ ಕಿರುಕುಳ ನೀಡಲಾಗಿದೆ ಎಂದು ಎಫ್‌ಐಆರ್ ಆರೋಪಿಸಿದೆ.

ಆರ್‌ಸಿಬಿ vs ರಾಜಸ್ಥಾನ ರಾಯಲ್ಸ್ ಪಂದ್ಯಕ್ಕಾಗಿ ಜೈಪುರದಲ್ಲಿದ್ದಾಗ (ಏಪ್ರಿಲ್ 13 ರಂದು ಮಧ್ಯಾಹ್ನದ ಪಂದ್ಯ), ದಯಾಳ್ ಸಂತ್ರಸ್ತೆಯನ್ನು ಸೀತಾಪುರ ಹೋಟೆಲ್‌ಗೆ ಕರೆಸಿ ಮತ್ತೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಭಾವನಾತ್ಮಕ ಮತ್ತು ದೈಹಿಕ ಕಿರುಕುಳವನ್ನು ಸಹಿಸಿಕೊಂಡ ನಂತರ, ಆಕೆ ಜುಲೈ 23 ರಂದು ದೂರು ದಾಖಲಿಸಿದ್ದಾರೆ.

ಸಂತ್ರಸ್ತೆ 17 ವರ್ಷದವಳಿದ್ದಾಗ ಅತ್ಯಾಚಾರ ನಡೆದಿರುವುದರಿಂದ, ಈ ಪ್ರಕರಣವನ್ನು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (POCSO) ಕಾಯ್ದೆ, 2012ರ ಅಡಿಯಲ್ಲಿ ದಾಖಲಿಸಲಾಗಿದೆ.

ಜುಲೈ 6 ರಂದು ಗಾಜಿಯಾಬಾದ್‌ನಲ್ಲಿ ಯಶ್ ದಯಾಳ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ದಯಾಳ್ ಮದುವೆಯಾಗುವುದಾಗಿ ಸುಳ್ಳು ಭರವಸೆ ನೀಡಿ ಐದು ವರ್ಷ ತನ್ನ ಮೇಲೆ ಲೈಂಗಿಕ ಕಿರುಕುಳ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ. ಆದಾಗ್ಯೂ, ಅಲಹಾಬಾದ್ ಹೈಕೋರ್ಟ್ ಯಶ್ ದಯಾಳ್ ಅವರ ಬಂಧನಕ್ಕೆ ತಡೆ ನೀಡಿದೆ. ದಯಾಳ್ ಸಂತ್ರಸ್ತೆಯು ತಮ್ಮ ಕುಟುಂಬಕ್ಕೆ ಪರಿಚಿತರು ಎಂಬುದನ್ನು ಒಪ್ಪಿಕೊಂಡರು. ಆದರೆ, ವಿವಾಹವಾಗುವುದಾಗಿ ಭರವಸೆ ನೀಡಿಲ್ಲ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನನಗೇನು ಗೊತ್ತಿಲ್ಲ, ನನ್ನೇನು ಕೇಳ್ಬೇಡಿ: ಏನೇ ಇದ್ದರೂ ತೀರ್ಮಾನ ಹೈಕಮಾಂಡ್ ಮಾಡುತ್ತೇ: ರಾಜ್ಯ ರಾಜಕಾರಣ ಕುರಿತು ಖರ್ಗೆ ಹೇಳಿಕೆ

ಲೈಂಗಿಕ ಬಲವರ್ಧನೆಗೆ ಆಯುರ್ವೇದ ಔಷಧಿ: 'ವಿಜಯ್ ಗುರೂಜಿ' ನಂಬಿ, ಕಿಡ್ನಿ, 48 ಲಕ್ಷ ಕಳೆದುಕೊಂಡ ಬೆಂಗಳೂರು ಟೆಕ್ಕಿ!

Cricket: ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಸರಣಿಗೆ ಭಾರತ ತಂಡ ಪ್ರಕಟ, ಕನ್ನಡಿಗ ಕೆಎಲ್ ರಾಹುಲ್ ಗೆ ಕೊನೆಗೂ ಒಲಿದ ಅದೃಷ್ಟ!

ಗೋವಾ: 'ಕಾಮಸೂತ್ರ-ಕ್ರಿಸ್‌ಮಸ್' ಕಾರ್ಯಕ್ರಮಕ್ಕೆ ತೀವ್ರ ವಿರೋಧ; ಸ್ಥಗಿತ

Ashes 2025: ದಾಖಲೆ ಬರೆದ ಆಸ್ಟ್ರೇಲಿಯಾ vs ಇಂಗ್ಲೆಂಡ್ ಪಂದ್ಯ, 148 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಇದೇ ಮೊದಲು!

SCROLL FOR NEXT