ಬೆನ್ ಸ್ಟೋಕ್ಸ್ 
ಕ್ರಿಕೆಟ್

England vs India 5th test: ಇಂಗ್ಲೆಂಡ್ ತಂಡದಲ್ಲಿ ಮೂರು ಬದಲಾವಣೆ; ನಿರ್ಣಾಯಕ ಪಂದ್ಯದಿಂದ ಬೆನ್ ಸ್ಟೋಕ್ಸ್, ಜೋಫ್ರಾ ಆರ್ಚರ್ ಔಟ್!

ಬೆನ್ ಸ್ಟೋಕ್ಸ್ ಅನುಪಸ್ಥಿತಿಯಲ್ಲಿ ಒಲಿ ಪೋಪ್ ಇಂಗ್ಲೆಂಡ್ ತಂಡವನ್ನು ಮುನ್ನಡೆಸಲಿದ್ದಾರೆ.

ಲಂಡನ್: ಗುರುವಾರದಿಂದ ಇಲ್ಲಿ ಪ್ರಾರಂಭವಾಗುವ ಭಾರತ ವಿರುದ್ಧದ ಐದನೇ ಮತ್ತು ಅಂತಿಮ ಟೆಸ್ಟ್‌ಗಾಗಿ ಇಂಗ್ಲೆಂಡ್ ತನ್ನ ಪ್ಲೇಯಿಂಗ್ XI ನಲ್ಲಿ ಮೂರು ಬದಲಾವಣೆಗಳನ್ನು ಮಾಡಿದೆ. ಹೀಗಾಗಿ ಗಾಯಗೊಂಡಿರುವ ನಾಯಕ ಬೆನ್ ಸ್ಟೋಕ್ಸ್ ಮತ್ತು ಪ್ರಮುಖ ವೇಗಿ ಜೋಫ್ರಾ ಆರ್ಚರ್ ಪಂದ್ಯದಿಂದ ಹೊರಗುಳಿದಿದ್ದಾರೆ.

ನಾಲ್ಕು ಟೆಸ್ಟ್ ಪಂದ್ಯಗಳ ನಂತರ ಆತಿಥೇಯರು ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದ್ದಾರೆ. ಇದೀಗ ಸರಣಿ ಯಾರ ಪಾಲಾಗಲಿದೆ ಎಂದು ನಿರ್ಧರಿಸುವ ಪಂದ್ಯದಲ್ಲಿ ಇಂಗ್ಲೆಂಡ್ ತಂಡದಲ್ಲಿ ಮೂರು ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದೆ.

ಬೆನ್ ಸ್ಟೋಕ್ಸ್ ಅನುಪಸ್ಥಿತಿಯಲ್ಲಿ ಒಲಿ ಪೋಪ್ ಇಂಗ್ಲೆಂಡ್ ತಂಡವನ್ನು ಮುನ್ನಡೆಸಲಿದ್ದಾರೆ.

ಬ್ಯಾಟಿಂಗ್‌ನಲ್ಲೂ ಮಿಂಚಿದ್ದ ಸ್ಟೋಕ್ಸ್, 17 ವಿಕೆಟ್‌ಗಳನ್ನು ಪಡೆದು ತಂಡದ ಗೆಲುವಿಗೆ ನೆರವಾಗಿದ್ದರು. ಆದರೆ, ಭುಜದ ಗಾಯದಿಂದಾಗಿ ಓವಲ್‌ನಲ್ಲಿ ನಡೆಯಲಿರುವ ಪಂದ್ಯದಿಂದ ಹೊರಗುಳಿದಿದ್ದಾರೆ. ನಾಲ್ಕು ವರ್ಷಗಳ ಸುದೀರ್ಘ ಅಂತರದ ನಂತರ ಟೆಸ್ಟ್ ಕ್ರಿಕೆಟ್‌ಗೆ ಹಿಂದಿರುಗಿದ್ದ ಆರ್ಚರ್ ಅವರಿಗೆ ವಿಶ್ರಾಂತಿ ನೀಡಲಾಗಿದೆ.

'ಕ್ಯಾಪ್ಟನ್ ಬೆನ್ ಸ್ಟೋಕ್ಸ್ ಬಲ ಭುಜದ ಗಾಯದಿಂದಾಗಿ ಅಲಭ್ಯರಾಗಿದ್ದಾರೆ. ಸ್ಪಿನ್ನರ್ ಲಿಯಾಮ್ ಡಾಸನ್ ಮತ್ತು ವೇಗದ ಬೌಲರ್‌ಗಳಾದ ಜೋಫ್ರಾ ಆರ್ಚರ್ ಮತ್ತು ಬ್ರೈಡನ್ ಕಾರ್ಸ್ ಕೂಡ ಹೊರಗುಳಿದಿದ್ದಾರೆ' ಎಂದು ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ಇಸಿಬಿ) ಬುಧವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಜೇಕಬ್ ಬೆಥೆಲ್ ಅವರನ್ನು ಇಂಗ್ಲೆಂಡ್ ತಂಡಕ್ಕೆ ಸೇರಿಸಿಕೊಂಡಿದ್ದು, ಬೌಲರ್‌ಗಳಾದ ಗಸ್ ಅಟ್ಕಿನ್ಸನ್, ಜೇಮೀ ಓವರ್‌ಟನ್ ಮತ್ತು ಜೋಶ್ ಟಂಗ್ ತಂಡವನ್ನು ಸೇರಿಕೊಂಡಿದ್ದಾರೆ' ಎಂದು ಇಸಿಬಿ ಹೇಳಿದೆ.

ಇಂಗ್ಲೆಂಡ್ ಪ್ಲೇಯಿಂಗ್ XI

ಝಾಕ್ ಕ್ರಾಲಿ, ಬೆನ್ ಡಕೆಟ್, ಓಲಿ ಪೋಪ್ (ನಾಯಕ), ಜೋ ರೂಟ್, ಹ್ಯಾರಿ ಬ್ರೂಕ್, ಜೇಕಬ್ ಬೆಥೆಲ್, ಜೇಮೀ ಸ್ಮಿತ್ (ವಿಕೆಟ್ ಕೀಪರ್), ಕ್ರಿಸ್ ವೋಕ್ಸ್, ಗಸ್ ಅಟ್ಕಿನ್ಸನ್, ಜೇಮೀ ಓವರ್ಟನ್, ಜೋಶ್ ಟಂಗ್.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

2,900 ಕೆಜಿ ಸ್ಫೋಟಗಳ ಪತ್ತೆ ಬೆನ್ನಲ್ಲೇ ದೆಹಲಿಯ ಕೆಂಪು ಕೋಟೆ ಬಳಿ ಕಾರು ಸ್ಫೋಟ; ಆತಂಕ ಸೃಷ್ಟಿ, Video!

ವೈಟ್-ಕಾಲರ್ ಭಯೋತ್ಪಾದಕ ಪರಿಸರ ಅನಾವರಣ; 350 ಕೆಜಿ ಸ್ಫೋಟಕಗಳ ಪತ್ತೆ ಬೆನ್ನಲ್ಲೆ ವೈದ್ಯರ ಮನೆಯಿಂದ 2,563 ಕೆಜಿ ಸ್ಫೋಟಕಗಳು ವಶಕ್ಕೆ!

ಕಾರಿನಲ್ಲಿ ಎಕೆ-47 ರೈಫಲ್ ಇಟ್ಟುಕೊಂಡಿದ್ದ ಲಖನೌ ವೈದ್ಯೆಯ ಬಂಧನ!

ತಿರುವಾಂಕೂರು ದೇವಸ್ವಂ ಮಂಡಳಿ ಅಧ್ಯಕ್ಷರಾಗಿ ಕೆ ಜಯಕುಮಾರ್ ನೇಮಕ

ಗುಜರಾತ್‌: ಬೈಕ್​ಗೆ ಡಿಕ್ಕಿ ಹೊಡೆದು 200 ಅಡಿ ಎಳೆದೊಯ್ದ BMW ಕಾರು; ಎಂಜಿನಿಯರಿಂಗ್ ವಿದ್ಯಾರ್ಥಿ ಸಾವು

SCROLL FOR NEXT