ಭಾರತ- ಪಾಕಿಸ್ತಾನ 
ಕ್ರಿಕೆಟ್

WCL: 'ಭಯೋತ್ಪಾದನೆ ಮತ್ತು ಕ್ರಿಕೆಟ್ ಒಟ್ಟಿಗೆ ಹೋಗಲು ಸಾಧ್ಯವಿಲ್ಲ'; ಭಾರತ-ಪಾಕಿಸ್ತಾನ ಪಂದ್ಯದಿಂದ ಹಿಂದೆ ಸರಿದ EaseMyTrip!

ಕೆಲವು ವಿಷಯಗಳು ಕ್ರೀಡೆಗಿಂತ ದೊಡ್ಡದಾಗಿವೆ. ರಾಷ್ಟ್ರವು ಮೊದಲು ಎನ್ನುವುದು ಯಾವಾಗಲೂ ಮುಖ್ಯವಾಗುತ್ತದೆ.

ವಿಶ್ವ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ (WCL) ನಲ್ಲಿ ಭಾರತ ಮತ್ತು ಪಾಕಿಸ್ತಾನದ ಸೆಮಿಫೈನಲ್ ಪಂದ್ಯದಲ್ಲಿ ಕಂಪನಿಯು ಮುಂದುವರಿಯುವುದಿಲ್ಲ ಎಂದು EaseMyTrip ಸಹ-ಸಂಸ್ಥಾಪಕ ನಿಶಾಂತ್ ಪಿಟ್ಟಿ ಘೋಷಿಸಿದರು. ಹಲವಾರು ಭಾರತೀಯ ಆಟಗಾರರು ಪಾಕ್ ಜೊತೆಗಿನ ಪಂದ್ಯವನ್ನು ಬಹಿಷ್ಕರಿಸಲು ನಿರ್ಧರಿಸಿದ ನಂತರ ಉಭಯ ತಂಡಗಳ ನಡುವಿನ ಗುಂಪು ಹಂತದ ಪಂದ್ಯವನ್ನು ರದ್ದುಗೊಳಿಸಲಾಯಿತು. ಭಾರತ ಮತ್ತು ಪಾಕಿಸ್ತಾನದ ನಡುವಿನ ರಾಜಕೀಯ ಉದ್ವಿಗ್ನತೆಯ ನಡುವೆ, ಸೆಮಿಫೈನಲ್ ಪಂದ್ಯವೂ ನಡೆಯುತ್ತದೆಯೇ ಅಥವಾ ಇಲ್ಲವೇ ಎಂಬ ಪ್ರಶ್ನೆಗಳು ಎದ್ದಿವೆ. ಪ್ರಾಯೋಜಕರಲ್ಲಿ ಒಂದಾದ EaseMyTrip- 'ಭಯೋತ್ಪಾದನೆ ಮತ್ತು ಕ್ರಿಕೆಟ್ ಒಟ್ಟಿಗೆ ಹೋಗಲು ಸಾಧ್ಯವಿಲ್ಲ' ಎಂದು ಭಾವಿಸುವ ಕಾರಣ ಪಂದ್ಯದಲ್ಲಿ ಯಾವುದೇ ಪಾತ್ರವನ್ನು ವಹಿಸುವುದಿಲ್ಲ ಎಂದಿದೆ.

'ವಿಶ್ವ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಟೀಂ ಇಂಡಿಯಾವನ್ನು ನಾವು ಅಭಿನಂದಿಸುತ್ತೇವೆ. ನೀವು ರಾಷ್ಟ್ರವನ್ನು ಹೆಮ್ಮೆ ಪಡುವಂತೆ ಮಾಡಿದ್ದೀರಿ. ಆದಾಗ್ಯೂ, ಪಾಕಿಸ್ತಾನದ ವಿರುದ್ಧ ಮುಂಬರುವ ಸೆಮಿಫೈನಲ್ ಕೇವಲ ಪಂದ್ಯ ಮಾತ್ರವಲ್ಲ, ಭಯೋತ್ಪಾದನೆ ಮತ್ತು ಕ್ರಿಕೆಟ್ ಜೊತೆಯಾಗಿ ಹೋಗಲು ಸಾಧ್ಯವಿಲ್ಲ. EaseMyTrip, ನಾವು ಭಾರತದೊಂದಿಗೆ ನಿಲ್ಲುತ್ತೇವೆ. ಭಯೋತ್ಪಾದನೆಯನ್ನು ಉತ್ತೇಜಿಸುವ ದೇಶದೊಂದಿಗೆ ಸಂಬಂಧವನ್ನು ಸಾಮಾನ್ಯಗೊಳಿಸಲು ಪ್ರಯತ್ನಿಸುವ ಯಾವುದೇ ಘಟನೆಯನ್ನು ನಾವು ಬೆಂಬಲಿಸುವುದಿಲ್ಲ. ಭಾರತದ ಜನರು ಮಾತನಾಡಿದ್ದಾರೆ ಮತ್ತು ನಾವು ಅವರ ಮಾತನ್ನು ಕೇಳುತ್ತೇವೆ' ಎಂದು ಪಿಟ್ಟಿ ಪೋಸ್ಟ್ ಮಾಡಿದ್ದಾರೆ.

'WCL ನಲ್ಲಿ ಭಾರತ vs ಪಾಕಿಸ್ತಾನ ಪಂದ್ಯದೊಂದಿಗೆ EaseMyTrip ಯಾವುದೇ ರೀತಿಯ ಸಂಬಂಧ ಹೊಂದಿರುವುದಿಲ್ಲ. ಕೆಲವು ವಿಷಯಗಳು ಕ್ರೀಡೆಗಿಂತ ದೊಡ್ಡದಾಗಿವೆ. ರಾಷ್ಟ್ರವು ಮೊದಲು ಎನ್ನುವುದು ಯಾವಾಗಲೂ ಮುಖ್ಯವಾಗುತ್ತದೆ' ಎಂದು ಸಾಮಾಜಿಕ ಮಾಧ್ಯಮದಲ್ಲಿನ ಪೋಸ್ಟ್‌ನಲ್ಲಿ ಹೇಳಲಾಗಿದೆ.

ಈಮಧ್ಯೆ, ಮಾಜಿ ಕ್ರಿಕೆಟಿಗ ಮನೋಜ್ ತಿವಾರಿ ಅವರು ಸೆಪ್ಟೆಂಬರ್‌ನಿಂದ ಪ್ರಾರಂಭವಾಗುವ 2025ರ ಏಷ್ಯಾಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ನಿಗದಿತ ಪಂದ್ಯದ ವಿರುದ್ಧ ನಾನಿದ್ದೇನೆ ಎಂದು ಮಂಗಳವಾರ ಹೇಳಿದ್ದಾರೆ.

ಪುರುಷರ ಏಷ್ಯಾ ಕಪ್ 2025 ಅನ್ನು ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಸೆಪ್ಟೆಂಬರ್ 9 ರಿಂದ 28 ರವರೆಗೆ ಆಯೋಜಿಸಿದೆ ಮತ್ತು ಭಾರತ-ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯವನ್ನು ಸೆಪ್ಟೆಂಬರ್ 14 ರಂದು ನಿಗದಿಪಡಿಸಲಾಗಿದೆ ಎಂದು ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಘೋಷಿಸಿದ ನಂತರ ಅವರ ಹೇಳಿಕೆಗಳು ಬಂದಿವೆ.

ಏಷ್ಯಾಕಪ್‌ನಲ್ಲಿ ಭಾರತ, ಪಾಕಿಸ್ತಾನ, ಯುಎಇ ಮತ್ತು ಒಮನ್‌ಗಳು ಎ ಗುಂಪಿನಲ್ಲಿ ಕಾಣಿಸಿಕೊಂಡರೆ, ಶ್ರೀಲಂಕಾ, ಬಾಂಗ್ಲಾದೇಶ, ಅಫ್ಘಾನಿಸ್ತಾನ ಮತ್ತು ಹಾಂಗ್ ಕಾಂಗ್ ಬಿ ಗುಂಪಿನಲ್ಲಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಒಳ ಮೀಸಲಾತಿ: ಮತಬ್ಯಾಂಕ್ ಲೆಕ್ಕಾಚಾರದಲ್ಲಿ ಸಿದ್ದು ಸರ್ಕಾರ, ಉಪಚುನಾವಣೆ ಮುಗಿಯುವವರೆಗೂ ತೀರ್ಮಾನಕ್ಕೆ ಬ್ರೇಕ್..!

Hormuz closure: ಹಾರ್ಮುಜ್ ಜಲಸಂಧಿ ಬಂದ್, ಏಷ್ಯಾದ ಬಂದರುಗಳಲ್ಲಿ ಕ್ಯೂನಲ್ಲಿ ನಿಂತ ಹಡಗುಗಳು!

ಪದೇ ಪದೇ ಇರಾನ್ ದಾಳಿ: ಅಬುದಾಬಿಯಲ್ಲಿ ಕ್ಷಿಪಣಿ ಅವಶೇಷಗಳು ಬಿದ್ದು, ಭಾರತೀಯ ಪ್ರಜೆ ಸೇರಿದಂತೆ ಇಬ್ಬರು ಸಾವು!

ರಾಜ್ಯ ಸರ್ಕಾರ ನಿಯಮದ ಮಿತಿಯೊಳಗೆ ಸಾಲ ಮಾಡಿದೆ: ಸಿಎಂ ಸಿದ್ದರಾಮಯ್ಯ ಸಮರ್ಥನೆ

ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಕಣದಲ್ಲಿ 34 ಅಭ್ಯರ್ಥಿಗಳು, 80 ಲಕ್ಷ ನಗದು, 1.74 ಲಕ್ಷ ರೂ. ಮೌಲ್ಯದ ಮದ್ಯ ವಶಕ್ಕೆ

SCROLL FOR NEXT