ಶ್ರೇಯಸ್ ಅಯ್ಯರ್ 
ಕ್ರಿಕೆಟ್

IPL 2025: ಪಂಜಾಬ್ ಕಿಂಗ್ಸ್ ನಾಯಕ ಶ್ರೇಯಸ್ ಅಯ್ಯರ್ ಗೆ BCCI ಭಾರಿ ದಂಡ; ಕಾರಣ ಏನು?

ಪಂಜಾಬ್ ಕಿಂಗ್ಸ್ ನಾಯಕ ಶ್ರೇಯಸ್ ಅಯ್ಯರ್ ನಿಧಾನಗತಿಯ ಓವರ್ ರೇಟ್ ಅನ್ನು ಕಾಯ್ದುಕೊಂಡ ಕಾರಣ ಬಿಸಿಸಿಐ ರೂ. 24 ಲಕ್ಷ ದಂಡ ವಿಧಿಸಿದೆ.

ನವದೆಹಲಿ: ಭಾನುವಾರ ಅಲಹಾಬಾದಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಕ್ವಾಲಿಫೈಯರ್ 2 ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಭರ್ಜರಿ ಐದು ವಿಕೆಟ್ ಗಳಿಂದ ಗೆಲುವು ಸಾಧಿಸಿದ ಪಂಜಾಬ್ ಕಿಂಗ್ಸ್ ಫೈನಲ್ ಗೆ ಲಗ್ಗೆ ಇಟ್ಟಿದೆ.

ಆದರೆ, ಪಂಜಾಬ್ ಕಿಂಗ್ಸ್ ನಾಯಕ ಶ್ರೇಯಸ್ ಅಯ್ಯರ್ ನಿಧಾನಗತಿಯ ಓವರ್ ರೇಟ್ ಅನ್ನು ಕಾಯ್ದುಕೊಂಡ ಕಾರಣ ಬಿಸಿಸಿಐ ರೂ. 24 ಲಕ್ಷ ದಂಡ ವಿಧಿಸಿದೆ.

ಐಪಿಎಲ್ ನೀತಿ ಸಂಹಿತೆ ಉಲ್ಲಂಘನೆಯಿಂದಾಗಿ ಶ್ರೇಯಸ್ ಅಯ್ಯರ್ ಈ ದಂಡ ವಿಧಿಸಲಾಗಿದೆ. ಅಲ್ಲದೇ ಇಂಪ್ಯಾಕ್ಟ್ ಆಟಗಾರರು ಸೇರಿದಂತೆ ಪ್ಲೇಯಿಂಗ್ XIನ ಉಳಿದ ಆಟಗಾರರಿಗೆ ರೂ. 6 ಲಕ್ಷ ಅಥವಾ ಪಂದ್ಯದ ಶುಲ್ಕದ ಶೇ. 25 ರಷ್ಟು ಸಂಭಾವನೆಯನ್ನು ಕಡಿತ ಮಾಡಲಾಗಿದೆ.

ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಕೂಡ ಅದೇ ರೀತಿಯ ಶಿಕ್ಷೆ ಅನುಭವಿಸಿದ್ದಾರೆ. ಅವರಿಗೆ ರೂ. 30 ಲಕ್ಷ ದಂಡ ವಿಧಿಸಲಾಗಿದೆ. ಮುಂಬೈ ಇಂಡಿಯನ್ಸ್ XIನ ಉಳಿದ ಆಟಗಾರರಿಗೆ ರೂ. 12 ಲಕ್ಷ ಅಥವಾ ಪಂದ್ಯದ ಸಂಭಾವನೆಯ ಶೇಕಡಾ 50 ರಷ್ಟು ದಂಡ ವಿಧಿಸಲಾಗಿದೆ.

ಶ್ರೇಯಸ್ ಅಯ್ಯರ್ ಅವರ ಭರ್ಜರಿ ಅಜೇಯ 87 ರನ್ ಗಳ ನೆರವಿನಿಂದ ಮುಂಬೈ ಇಂಡಿಯನ್ಸ್ ತಂಡವನ್ನು ಐದು ವಿಕೆಟ್ ಗಳಿಂದ ಸೋಲಿಸಿದ ಪಂಜಾಬ್ ಕಿಂಗ್ಸ್ ಫೈನಲ್ ಪ್ರವೇಶಿಸಿದ್ದು, ಜೂನ್ 3 ರಂದು ನಡೆಯಲಿರುವ ಐಪಿಎಲ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಸೆಣಸಾಟ ನಡೆಸಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT