ಬೆಂಗಳೂರಿನಲ್ಲಿ ಮುಗಿಲು ಮುಟ್ಟಿದ ಸಂಭ್ರಮ 
ಕ್ರಿಕೆಟ್

IPL 2025 Final: RCB ಚಾಂಪಿಯನ್; ಬೆಂಗಳೂರಿನಲ್ಲಿ ಮುಗಿಲು ಮುಟ್ಟಿದ ಸಂಭ್ರಮ, Video

ಅತ್ತ ಆರ್ ಸಿಬಿ ಗೆಲುವು ಸಾಧಿಸುತ್ತಿದ್ದಂತೆಯೇ ಇತ್ತ ಬೆಂಗಳೂರಿನಲ್ಲಿ ಸಂಭ್ರಮಾಚರಣೆ ಆರಂಭವಾಗಿತ್ತು. ಬೆಂಗಳೂರಿನಾದ್ಯಂತ ಆರ್ ಸಿಬಿ ಅಭಿಮಾನಿಗಳು ಬೀದಿಗಳಿದು ಸಂಭ್ರಮಿಸಿದರು.

ಅಹ್ಮದಾಬಾದ್: ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೊದಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದ್ದು, ಇಡೀ ಬೆಂಗಳೂರಿನಲ್ಲಿ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.

ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು 6 ರನ್ ಗಳ ಅಂತರದಲ್ಲಿ ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 18 ವರ್ಷಗಳ ಬಳಿಕ ಮೊದಲ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದೆ. ಮೊದಲು ಬ್ಯಾಟಿಂಗ್ ಮಾಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 190 ರನ್ ಕಲೆಹಾಕಿತ್ತು.

ಅಂತೆಯೇ ಪಂಜಾಬ್ ಗೆ ಗೆಲ್ಲಲು 191 ರನ್ ಗುರಿ ನೀಡಿತ್ತು. ಈ ಗುರಿಯನ್ನು ಬೆನ್ನು ಹತ್ತಿದ ಪಂಜಾಬ್ ತಂಡ 20 ಓವರ್ ನಲ್ಲಿ 7 ವಿಕೆಟ್ ನಷ್ಟಕ್ಕೆ 184 ರನ್ ಗಳಿಸಲಷ್ಟೇ ಶಕ್ತವಾಯಿತು. ಆ ಮೂಲಕ ಕೇವಲ 6 ರನ್ ಅಂತರದಲ್ಲಿ ವಿರೋಚಿತ ಗೆಲುವು ಕಂಡಿತು.

ಮುಗಿಲು ಮುಟ್ಟಿದ ಸಂಭ್ರಮ

ಇನ್ನು ಅತ್ತ ಆರ್ ಸಿಬಿ ಗೆಲುವು ಸಾಧಿಸುತ್ತಿದ್ದಂತೆಯೇ ಇತ್ತ ಬೆಂಗಳೂರಿನಲ್ಲಿ ಸಂಭ್ರಮಾಚರಣೆ ಆರಂಭವಾಗಿತ್ತು. ಬೆಂಗಳೂರಿನಾದ್ಯಂತ ಆರ್ ಸಿಬಿ ಅಭಿಮಾನಿಗಳು ಬೀದಿಗಳಿದು ಸಂಭ್ರಮಿಸಿದರು. ರಸ್ತೆಗಳ ತುಂಬೆಲ್ಲಾ ಜನ ಕಿಕ್ಕಿರಿದು ತುಂಬಿ ಆರ್ ಸಿಬಿ ಪರ ಘೋಷಣೆಗಳನ್ನು ಕೂಗಿದರು.

ಪ್ರಮುಖವಾಗಿ ನಗರದ ಕ್ವೀನ್ಸ್ ರಸ್ತೆ, ಚಿನ್ನಸ್ವಾಮಿ ಕ್ರೀಡಾಂಗಣ, ಚಾಮರಾಜಪೇಟೆ, ವಿಜಯನಗರ, ಎಂಜಿ ರಸ್ತೆ, ಬ್ರಿಗೇಟ್ ರಸ್ತೆಗಳಲ್ಲಿ ಜನ ಬೀದಿಗಿಳಿದು ಸಂಭ್ರಮಿಸಿದರು.

ರಾಜ್ಯಾದ್ಯಂತ ಸಂಭ್ರಮ

ಆರ್​ಸಿಬಿ ಗೆಲ್ಲುತ್ತಿದ್ದಂತೆ ಬೆಂಗಳೂರು, ತಮಕೂರು, ಹಾಸನ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಂಭ್ರಮಾಚರಣೆ ಜೋರಾಗಿದೆ. ಬೆಂಗಳೂರಿನ MG ರೋಡ್​, ಚರ್ಚ್​​ಸ್ಟ್ರೀಟ್​, ವಿಜಯನಗರ ಸೇರಿದಂತೆ ಹಲವು ಏರಿಯಾಗಳಲ್ಲಿ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. ಚರ್ಚ್​ಸ್ಟ್ರೀಟ್​ನಲ್ಲಿ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಇನ್ನು, ಪಬ್ ಮತ್ತು ಹೋಟೆಲ್​ಗಳಲ್ಲಿ ಡಿಜೆ ಸಾಂಗ್​ಗೆ ಅಭಿಮಾನಿಗಳು ಸಕತ್​ ಸ್ಟೆಪ್​​ ಹಾಕುತ್ತಿದ್ದಾರೆ. ಈ ಸಲ ಕಪ್​ ನಮ್ದು, ಜೈ ಆರ್​ಸಿಬಿ ಎಂದು ಘೋಷಣೆಗಳನ್ನು ಹಾಕುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಮೋದಿಯವರು ಅವಮಾನ ಸಹಿಸುವುದಿಲ್ಲ, ಅವರು ಬುದ್ಧಿವಂತ ನಾಯಕ, ತಲೆಬಾಗಿಕೊಂಡು ಹೋಗುವವರಲ್ಲ': US tariffs ಮಧ್ಯೆ ಪುಟಿನ್ ಪ್ರಶಂಸೆ ಮಾತು!

ಲಡಾಖ್: ಪತಿಯ ಬಿಡುಗಡೆ ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋದ ವಾಂಗ್ಚುಕ್ ಪತ್ನಿ ಗೀತಾಂಜಲಿ

ರಾಜ್ಯಕ್ಕೆ 3,705 ಕೋಟಿ ರೂ. ತೆರಿಗೆ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ..!

ಪೇಸ್‌ಮೇಕರ್‌ ಅಳವಡಿಕೆ ಯಶಸ್ವಿ: ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ಸ್ಥಿರ, ಆಸ್ಪತ್ರೆಯಿಂದ ಡಿಸ್‌ಚಾರ್ಜ್

Karur stampede: ನಟ ಮತ್ತು ಟಿವಿಕೆ ಅಧ್ಯಕ್ಷ ವಿಜಯ್ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯ

SCROLL FOR NEXT