ಚಾಂಪಿಯನ್ ಆರ್ ಸಿಬಿ ಆಟಗಾರರು 
ಕ್ರಿಕೆಟ್

IPL 2025 Winners: ವಿನ್ನರ್, ರನ್ನರ್ ಅಪ್ ಸೇರಿದಂತೆ ಪ್ರಶಸ್ತಿ ಪುರಸ್ಕೃತರಿಗೆ ಸಿಕ್ಕ ನಗದು ಬಹುಮಾನವೆಷ್ಟು?

ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಆರು ರನ್ ಗಳ ಅಂತರದಿಂದ ಸೋಲಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೊದಲ ಬಾರಿಗೆ ಟ್ರೋಫಿ ಮುಡಿಗೇರಿಸಿಕೊಂಡಿತು.

ಅಹಮದಾಬಾದ್: ಐಪಿಎಲ್ 2025ರ 18ನೇ ಆವೃತ್ತಿಯ ಚಾಂಪಿಯನ್ ಆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ರೂ. 20 ಕೋಟಿ ನಗದು ಬಹುಮಾನ ದೊರೆತರೆ, ರನ್ನರ್ ಅಪ್ ಪಂಜಾಬ್ ಕಿಂಗ್ಸ್ ರೂ. 13 ಕೋಟಿ ಹಣವನ್ನು ಪಡೆಯಿತು.

ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಆರು ರನ್ ಗಳ ಅಂತರದಿಂದ ಸೋಲಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೊದಲ ಬಾರಿಗೆ ಟ್ರೋಫಿ ಮುಡಿಗೇರಿಸಿಕೊಂಡಿತು.

ವಿಶ್ವದ ಅತಿದೊಡ್ಡ ಐಪಿಎಲ್ 2025 18 ನೇ ಆವೃತ್ತಿಯ ಸಮಾರೋಪ ಸಮಾರಂಭದಲ್ಲಿ ಮುಂಬೈ ಇಂಡಿಯನ್ಸ್ ತಂಡದ ಡೈನಾಮಿಕ ಬ್ಯಾಟರ್ ಸೂರ್ಯ ಕುಮಾರ್ ಯಾದವ್ ಈ ಬಾರಿಯ ಅತ್ಯಂತ ಮೌಲ್ಯಯುತ ಆಟಗಾರ (Most Valuable Player) ಪ್ರಶಸ್ತಿಗೆ ಭಾಜನರಾದರೆ, ಗುಜರಾತ್ ಟೈಟನ್ಸ್ ತಂಡದ ಸ್ಟಾರ್ ಬ್ಯಾಟರ್ ಸಾಯಿ ಸುದರ್ಶನ್ ಉದಯೋನ್ಮುಖ ಆಟಗಾರ (Emerging Player) ನಾಗಿ ಹೊರಹೊಮ್ಮಿದರು.

ಫೈನಲ್ ಪಂದ್ಯ ಮುಗಿದ ನಂತರ ಟೀಂ ಇಂಡಿಯಾ ಟಿ-20 ನಾಯಕ ಸೂರ್ಯ ಕುಮಾರ್ ಯಾದವ್ ಅತ್ಯಂತ ಮೌಲ್ಯಯುತ ಆಟಗಾರ ಪ್ರಶಸ್ತಿ ಸ್ವೀಕರಿಸಿದರು. ಈ ಬಾರಿಯ ಟೂರ್ನಿಯಲ್ಲಿ ಅವರು 65.18 ರ ಸರಾಸರಿಯಲ್ಲಿ ಐದು ಅರ್ಧ ಶತಕಗಳೊಂದಿಗೆ 717 ರನ್ ಗಳಿಸಿದ್ದಾರೆ. ಐಪಿಎಲ್ ನಲ್ಲಿ ಇದೇ ಮೊದಲ ಬಾರಿಗೆ ಆರಂಭಿಕರಲ್ಲದ ಆಟಗಾರನಾಗಿ 700 ರನ್ ಗಳಿಸಿದ ಹೆಗ್ಗಳಿಕೆಗೆ ಅವರು ಪಾತ್ರರಾದರು.

ಈ ಮಧ್ಯೆ ಸಾಯಿ ಸುದರ್ಶನ್ ಅತಿ ಹೆಚ್ಚು 759 ರನ್ ಗಳಿಸುವ ಮೂಲಕ ಆರಂಜ್ ಕ್ಯಾಪ್ ಮುಡಿಗೇರಿಸಿಕೊಂಡರೆ, ಪ್ರಸಿದ್ಧ್ ಕೃಷ್ಣ ಅತಿ ಹೆಚ್ಚು 25 ವಿಕೆಟ್ ಪಡೆಯುವ ಮೂಲಕ ಪರ್ಪಲ್ ಕ್ಯಾಪ್ ಪಡೆದರು.

ಪ್ರಶಸ್ತಿ ವಿಜೇತರ ಸಂಪೂರ್ಣ ಪಟ್ಟಿ:

ಈ ಬಾರಿಯ ಮೌಲ್ಯಯುತ ಆಟಗಾರ: ಸೂರ್ಯಕುಮಾರ್ ಯಾದವ್

ಆರೆಂಜ್ ಕ್ಯಾಪ್ ವಿಜೇತ: ಸಾಯಿ ಸುದರ್ಶನ್ (759 ರನ್)

ಅತ್ಯಂತ ಹೆಚ್ಚಿನ ಕ್ಯಾಚ್ ಪಡೆದ ಆಟಗಾರ: ಕಮಿಂದು ಮೆಂಡಿಸ್

ಪರ್ಪಲ್ ಕ್ಯಾಪ್ ವಿಜೇತ: ಪ್ರಸಿದ್ಧ್ ಕೃಷ್ಣ (25 ವಿಕೆಟ್)

ಫೇರ್‌ಪ್ಲೇ ಪ್ರಶಸ್ತಿ: ಚೆನ್ನೈ ಸೂಪರ್ ಕಿಂಗ್ಸ್

ಈ ಬಾರಿಯ ಉದಯೋನ್ಮುಖ ಆಟಗಾರ: ಸಾಯಿ ಸುದರ್ಶನ್

ಸಾಯಿ ಸುದರ್ಶನ್ ಅವರು ಉದಯೋನ್ಮುಖ ಆಟಗಾರ, ಹೆಚ್ಚು ಬೌಂಡರಿ ಬಾರಿಸಿದ ಆಟಗಾರ ಮತ್ತಿತರ ಪ್ರಶಸ್ತಿಗೆ ಭಾಜನರಾದರು. ಇವರೆಲ್ಲರೂ ತಲಾ ರೂ. 10 ಲಕ್ಷ ನಗದು ಬಹುಮಾನ ಸ್ವೀಕರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT