ಬಿಸಿಸಿಐ  online desk
ಕ್ರಿಕೆಟ್

'ಸುಮ್ಮನಿರಲು ಸಾಧ್ಯವಿಲ್ಲ': RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತದ ಬಳಿಕ ಕಠಿಣ ಕ್ರಮಕ್ಕೆ BCCI ಮುಂದು!

ಇದಕ್ಕೂ ಮೊದಲು, ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್, ವಿಜಯದ ನಂತರ ರೋಡ್ ಶೋಗಳನ್ನು ನಡೆಸಬಾರದು ಎಂದು ಹೇಳಿದರು.

18 ವರ್ಷಗಳ ನಂತರ ಮೊದಲ ಬಾರಿಗೆ ಐಪಿಎಲ್ ಪ್ರಶಸ್ತಿ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಬೆಂಗಳೂರಿನಲ್ಲಿ ಭರ್ಜರಿ ಸ್ವಾಗತ ದೊರೆಯಿತು. ಆದರೆ, ಆ ಸಂಭ್ರಮ ಹೆಚ್ಚು ಹೊತ್ತು ಉಳಿಯಲಿಲ್ಲ. ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಪ್ರಾಣ ಕಳೆದುಕೊಂಡಿದ್ದು, 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ಸಂಬಂಧ ನಾಲ್ವರನ್ನು ಬಂಧಿಸಲಾಗಿದೆ. ಆರ್‌ಸಿಬಿಯ ಮಾರ್ಕೆಟಿಂಗ್ ಅಧಿಕಾರಿ ನಿಖಿಲ್ ಸೋಸಲೆ ಬಂಧಿತರಲ್ಲಿ ಒಬ್ಬರು.

ಐಪಿಎಲ್ ಟ್ರೋಫಿ ಗೆದ್ದ ಬಳಿಕ ಸಂಭ್ರಮಾಚರಣೆಗಾಗಿ ಮಾರ್ಗಸೂಚಿಗಳನ್ನು ಪರಿಚಯಿಸಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಈಗ ಯೋಚಿಸುತ್ತಿದೆ. 'ಕೆಲವು ಹಂತದಲ್ಲಿ ಬಿಸಿಸಿಐ ಏನನ್ನಾದರೂ ಮಾಡಬೇಕಾಗುತ್ತದೆ. ನಾವು ಮೂಕ ಪ್ರೇಕ್ಷಕರಾಗಿರಲು ಸಾಧ್ಯವಿಲ್ಲ' ಎಂದು ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಕ್ರಿಕ್‌ಬಜ್‌ಗೆ ತಿಳಿಸಿದ್ದಾರೆ.

'ಇದು ಆರ್‌ಸಿಬಿಯ ಖಾಸಗಿ ವ್ಯವಹಾರವಾಗಿತ್ತು. ಆದರೆ, ಬಿಸಿಸಿಐನಲ್ಲಿ ನಾವು ಭಾರತದಲ್ಲಿ ಕ್ರಿಕೆಟ್‌ಗೆ ಜವಾಬ್ದಾರರಾಗಿದ್ದೇವೆ ಮತ್ತು ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಲು ಪ್ರಯತ್ನಿಸುತ್ತೇವೆ' ಎಂದಿದ್ದಾರೆ.

ಇದಕ್ಕೂ ಮೊದಲು, ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್, ವಿಜಯದ ನಂತರ ರೋಡ್ ಶೋಗಳನ್ನು ನಡೆಸಬಾರದು ಎಂದು ಹೇಳಿದರು.

'ಜನರ ಜೀವಗಳು ಹೆಚ್ಚು ಮುಖ್ಯವೆಂದು ನಾನು ಭಾವಿಸುತ್ತೇನೆ ಮತ್ತು ನಾನು ಹೇಳುತ್ತಲೇ ಇರುತ್ತೇನೆ. ಈ ರೀತಿಯ ರೋಡ್‌ಶೋಗಳನ್ನು ನಡೆಸದಂತೆ ನಾವು ಸ್ವಲ್ಪ ಜಾಗರೂಕರಾಗಿರಬಹುದು. ಇದರ ಬದಲಿಗೆ ಕ್ರೀಡಾಂಗಣದಲ್ಲಿ ಇಂತಹ ಕಾರ್ಯಕ್ರಮಗಳನ್ನು ನಡೆಸುವುದು ಉತ್ತಮ' ಎಂದು ಹೇಳಿದರು.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬುಧವಾರ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಸಾವಿಗೀಡಾಗಿದ್ದಕ್ಕೆ ಭಾರತದ ಸ್ಟಾರ್ ಬ್ಯಾಟರ್ ಸ್ಮೃತಿ ಮಂಧಾನ ಕೂಡ ದುಃಖ ವ್ಯಕ್ತಪಡಿಸಿದ್ದಾರೆ.

'ಬೆಂಗಳೂರಿನಲ್ಲಿ ಸಾವಿಗೀಡಾಗಿದ್ದು ಹೃದಯ ವಿದ್ರಾವಕವಾಗಿದೆ. ನನ್ನ ಆಲೋಚನೆಗಳು ಮತ್ತು ಪ್ರಾರ್ಥನೆಗಳು ಸಂತ್ರಸ್ತರ ಕುಟುಂಬಗಳು ಮತ್ತು ಪ್ರೀತಿಪಾತ್ರರೊಂದಿಗೆ ಇವೆ. ದಯವಿಟ್ಟು ಎಲ್ಲರೂ ಸುರಕ್ಷಿತವಾಗಿರಿ' ಎಂದು ಮಂಧಾನ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕರ್ನಾಟಕ ಜಾಗತಿಕ ನಾವೀನ್ಯತೆ ತಾಣವಾಗಿ ಪರಿವರ್ತಿಸಲು ಮೂರು ನೀತಿ ಅನಾವರಣಗೊಳಿಸಿದ ಸಿಎಂ

Ranji Trophy: ಚಂಡೀಗಢ ವಿರುದ್ಧ ಕರ್ನಾಟಕಕ್ಕೆ ಇನ್ನಿಂಗ್ಸ್ ಮತ್ತು 185 ರನ್ ಭರ್ಜರಿ ಜಯ

Ranji Trophy: ಒಂದೂ ರನ್ ನೀಡದೇ 5 ವಿಕೆಟ್.. Amit Shukla ಐತಿಹಾಸಿಕ ದಾಖಲೆ, IPL 2026 ಹರಾಜಿಗೆ ಭರ್ಜರಿ ಸಿದ್ಧತೆ!

'Glad Was In Audience': ಮತ್ತೆ ಪ್ರಧಾನಿಯನ್ನು ಹಾಡಿ ಹೊಗಳಿದ ಶಶಿ ತರೂರ್, ಗುಲಾಮ ಮನಸ್ಥಿತಿ ಕುರಿತ ಹೇಳಿಕೆ, ಕಾಂಗ್ರೆಸ್ ಕೆಂಡ!

ಟ್ರಾಫಿಕ್ ಪೊಲೀಸ್ ಆಗಿ ಕರ್ತವ್ಯ ನಿರ್ವಹಿಸಿದ ಸುರೇಶ್ ಕುಮಾರ್; ಅನುಭವ ಹಂಚಿಕೊಂಡ ಬಿಜೆಪಿ ಶಾಸಕ

SCROLL FOR NEXT