ಬಿಸಿಸಿಐ  online desk
ಕ್ರಿಕೆಟ್

'ಸುಮ್ಮನಿರಲು ಸಾಧ್ಯವಿಲ್ಲ': RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತದ ಬಳಿಕ ಕಠಿಣ ಕ್ರಮಕ್ಕೆ BCCI ಮುಂದು!

ಇದಕ್ಕೂ ಮೊದಲು, ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್, ವಿಜಯದ ನಂತರ ರೋಡ್ ಶೋಗಳನ್ನು ನಡೆಸಬಾರದು ಎಂದು ಹೇಳಿದರು.

18 ವರ್ಷಗಳ ನಂತರ ಮೊದಲ ಬಾರಿಗೆ ಐಪಿಎಲ್ ಪ್ರಶಸ್ತಿ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಬೆಂಗಳೂರಿನಲ್ಲಿ ಭರ್ಜರಿ ಸ್ವಾಗತ ದೊರೆಯಿತು. ಆದರೆ, ಆ ಸಂಭ್ರಮ ಹೆಚ್ಚು ಹೊತ್ತು ಉಳಿಯಲಿಲ್ಲ. ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಪ್ರಾಣ ಕಳೆದುಕೊಂಡಿದ್ದು, 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ಸಂಬಂಧ ನಾಲ್ವರನ್ನು ಬಂಧಿಸಲಾಗಿದೆ. ಆರ್‌ಸಿಬಿಯ ಮಾರ್ಕೆಟಿಂಗ್ ಅಧಿಕಾರಿ ನಿಖಿಲ್ ಸೋಸಲೆ ಬಂಧಿತರಲ್ಲಿ ಒಬ್ಬರು.

ಐಪಿಎಲ್ ಟ್ರೋಫಿ ಗೆದ್ದ ಬಳಿಕ ಸಂಭ್ರಮಾಚರಣೆಗಾಗಿ ಮಾರ್ಗಸೂಚಿಗಳನ್ನು ಪರಿಚಯಿಸಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಈಗ ಯೋಚಿಸುತ್ತಿದೆ. 'ಕೆಲವು ಹಂತದಲ್ಲಿ ಬಿಸಿಸಿಐ ಏನನ್ನಾದರೂ ಮಾಡಬೇಕಾಗುತ್ತದೆ. ನಾವು ಮೂಕ ಪ್ರೇಕ್ಷಕರಾಗಿರಲು ಸಾಧ್ಯವಿಲ್ಲ' ಎಂದು ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಕ್ರಿಕ್‌ಬಜ್‌ಗೆ ತಿಳಿಸಿದ್ದಾರೆ.

'ಇದು ಆರ್‌ಸಿಬಿಯ ಖಾಸಗಿ ವ್ಯವಹಾರವಾಗಿತ್ತು. ಆದರೆ, ಬಿಸಿಸಿಐನಲ್ಲಿ ನಾವು ಭಾರತದಲ್ಲಿ ಕ್ರಿಕೆಟ್‌ಗೆ ಜವಾಬ್ದಾರರಾಗಿದ್ದೇವೆ ಮತ್ತು ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಲು ಪ್ರಯತ್ನಿಸುತ್ತೇವೆ' ಎಂದಿದ್ದಾರೆ.

ಇದಕ್ಕೂ ಮೊದಲು, ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್, ವಿಜಯದ ನಂತರ ರೋಡ್ ಶೋಗಳನ್ನು ನಡೆಸಬಾರದು ಎಂದು ಹೇಳಿದರು.

'ಜನರ ಜೀವಗಳು ಹೆಚ್ಚು ಮುಖ್ಯವೆಂದು ನಾನು ಭಾವಿಸುತ್ತೇನೆ ಮತ್ತು ನಾನು ಹೇಳುತ್ತಲೇ ಇರುತ್ತೇನೆ. ಈ ರೀತಿಯ ರೋಡ್‌ಶೋಗಳನ್ನು ನಡೆಸದಂತೆ ನಾವು ಸ್ವಲ್ಪ ಜಾಗರೂಕರಾಗಿರಬಹುದು. ಇದರ ಬದಲಿಗೆ ಕ್ರೀಡಾಂಗಣದಲ್ಲಿ ಇಂತಹ ಕಾರ್ಯಕ್ರಮಗಳನ್ನು ನಡೆಸುವುದು ಉತ್ತಮ' ಎಂದು ಹೇಳಿದರು.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬುಧವಾರ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಸಾವಿಗೀಡಾಗಿದ್ದಕ್ಕೆ ಭಾರತದ ಸ್ಟಾರ್ ಬ್ಯಾಟರ್ ಸ್ಮೃತಿ ಮಂಧಾನ ಕೂಡ ದುಃಖ ವ್ಯಕ್ತಪಡಿಸಿದ್ದಾರೆ.

'ಬೆಂಗಳೂರಿನಲ್ಲಿ ಸಾವಿಗೀಡಾಗಿದ್ದು ಹೃದಯ ವಿದ್ರಾವಕವಾಗಿದೆ. ನನ್ನ ಆಲೋಚನೆಗಳು ಮತ್ತು ಪ್ರಾರ್ಥನೆಗಳು ಸಂತ್ರಸ್ತರ ಕುಟುಂಬಗಳು ಮತ್ತು ಪ್ರೀತಿಪಾತ್ರರೊಂದಿಗೆ ಇವೆ. ದಯವಿಟ್ಟು ಎಲ್ಲರೂ ಸುರಕ್ಷಿತವಾಗಿರಿ' ಎಂದು ಮಂಧಾನ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಾತುಕತೆಗೆ ವ್ಯಾನ್ಸ್ ನೇತೃತ್ವದ ಅಮೆರಿಕಾ ತಂಡ ಇಸ್ಲಾಮಾಬಾದ್ ಗೆ ಆಗಮನ, ಲೆಬನಾನ್ ಕದನ ವಿರಾಮ, ಆಸ್ತಿ ಬಿಡುಗಡೆ ಪ್ರಮುಖ ಅಜೆಂಡಾ-Video

ಇರಾನ್‌ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಮುಖ ವಿರೂಪಗೊಂಡಿದೆ, ಕಾಲುಗಳಿಗೆ ತೀವ್ರ ಗಾಯವಾಗಿದೆ: ವರದಿ

ತೀವ್ರ ಕುತೂಹಲ ಘಟ್ಟಕ್ಕೆ ತಲುಪಿದ ಪಶ್ಚಿಮ ಏಷ್ಯಾ ಸಂಘರ್ಷ: ಇಂದು ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಇರಾನ್-ಅಮೆರಿಕ ನಡುವೆ ಸಂಧಾನ ಮಾತುಕತೆ-Video

PSL ನಲ್ಲಿ ಮತ್ತೊಂದು ಹೈಡ್ರಾಮಾ: ಇದ್ಯಾವ್ ಸೀಮೆ ಬೌಲಿಂಗ್?.. ಮೈದಾನದಲ್ಲೇ Daryl Mitchell vs Usman Tariq ಜಟಾಪಟಿ, ಇಷ್ಟಕ್ಕೂ ಆಗಿದ್ದೇನು?

5 ದಶಕಗಳ ಬಳಿಕ ದಾಖಲೆ ನಿರ್ಮಿಸಿದ ಚಂದ್ರಯಾನ: ಯಶಸ್ವಿಯಾಗಿ ಭೂಮಿಗೆ ಮರಳಿದ Artemis II ಗಗನ ಯಾತ್ರಿಗಳು-Video

SCROLL FOR NEXT