ಕ್ರಿಕೆಟ್

ಇಂಗ್ಲೆಂಡ್ ಲಯನ್ಸ್ ವಿರುದ್ಧ ಕೆಎಲ್ ರಾಹುಲ್ ಶತಕ; ಭಾರತದ ಪರ ಆರಂಭಿಕರಾಗಿ ಕಣಕ್ಕಿಳಿಯುವ ಸಾಧ್ಯತೆ!

ನಾರ್ಥಾಂಪ್ಟನ್‌ನಲ್ಲಿ ನಡೆದ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಜೊತೆ ಆರಂಭಿಕರಾಗಿ ಕಣಕ್ಕಿಳಿದ ಕೆ.ಎಲ್. ರಾಹುಲ್, 116 ರನ್ ಗಳಿಸಿದರು.

ಲಂಡನ್: ಇಂಗ್ಲೆಂಡ್ ಲಯನ್ಸ್ ವಿರುದ್ಧ ನಡೆಯುತ್ತಿರುವ ಎರಡನೇ ಅನಧಿಕೃತ ಟೆಸ್ಟ್‌ನಲ್ಲಿ ಕೆಎಲ್ ರಾಹುಲ್ ಶತಕ ಸಿಡಿಸಿದ್ದಾರೆ. ಇಂಗ್ಲೆಂಡ್‌ನಲ್ಲಿ ನಡೆಯಲಿರುವ ಐದು ಟೆಸ್ಟ್‌ಗಳ ಸರಣಿಗೆ ಮುನ್ನ ಟೆಸ್ಟ್ ಆಟಕ್ಕೆ ರಾಹುಲ್ ಒಗ್ಗಿಕೊಂಡಿರುವುದು ಟೀಮ್ ಮ್ಯಾನೇಜ್ ಮೆಂಟ್ ಗೆ ಸಮಾಧಾನ ತಂದಿದೆ.

ನಾರ್ಥಾಂಪ್ಟನ್‌ನಲ್ಲಿ ನಡೆದ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಜೊತೆ ಆರಂಭಿಕರಾಗಿ ಕಣಕ್ಕಿಳಿದ ಕೆ.ಎಲ್. ರಾಹುಲ್, 116 ರನ್ ಗಳಿಸಿದರು.

ಆರಂಭಿಕ ಆಟಗಾರ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಕಳೆದ ತಿಂಗಳು ಟೆಸ್ಟ್ ಕ್ರಿಕೆಟ್ ಗೆ ವಿದಾಯ ಹೇಳಿದ ನಂತರ ಶುಭಮನ್ ಗಿಲ್ ನೇತೃತ್ವದ ಟೀಂ ಇಂಡಿಯಾದಲ್ಲಿ ಅಗ್ರ ಕ್ರಮಾಂಕದಲ್ಲಿ ಆಡುವವರು ಯಾರು ಎಂಬುದು ದೊಡ್ಡ ಸಮಸ್ಯೆಯಾಗಿತ್ತು. ಯಾವುದೇ ಕ್ರಮಾಂಕದಲ್ಲೂ ಬ್ಯಾಟಿಂಗ ಮಾಡಬಲ್ಲಾ ಕೆ.ಎಲ್. ರಾಹುಲ್, ಇದೀಗ ಯಶಸ್ವಿ ಜೈಸ್ವಾಲ್ ಜೊತೆಗೆ ಆರಂಭಿಕರಾಗಿ ಆಡುವ ಸಾಧ್ಯತೆಯಿದೆ.

ನಂಬರ್ 4 ಕ್ರಮಾಂಕದಲ್ಲಿ ಶುಭ್ ಮನ್ ಗಿಲ್ ಅಥವಾ ಕರುಣ್ ನಾಯರ್ ಆಡುವ ಮೂಲಕ ಕೊಹ್ಲಿ ಸ್ಥಾನವನ್ನು ತುಂಬುವ ಸಾಧ್ಯತೆಯಿದೆ.

ಕರುಣ್ ನಾಯರ್ ಕೊನೆಯದಾಗಿ 2017ರಲ್ಲಿ ಟೆಸ್ಟ್ ಆಡಿದ್ದರು. ಕ್ಯಾಂಟರ್ಬರಿಯಲ್ಲಿ ನಡೆದ ಮೊದಲ ಅನಧಿಕೃತ ಟೆಸ್ಟ್‌ನಲ್ಲಿ ದ್ವಿಶತಕ ಸಿಡಿಸಿದ್ದರು. ನಾವೀನೂ ಬ್ಯಾಟಿಂಗ್ ಕ್ರಮಾಂಕದ ಬಗ್ಗೆ ನಿರ್ಧರಿಸಿಲ್ಲ. ನಮಗೆ ಇನ್ನೂ ಸ್ವಲ್ಪ ಸಮಯಾವಕಾಶವಿದೆ ಎಂದು ಗಿಲ್ ಮುಂಬೈಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಲಂಡನ್‌ನಲ್ಲಿ 10 ದಿನಗಳ ಅಭ್ಯಾಸದಲ್ಲಿ ಪಾಲ್ಗೊಳ್ಳುತ್ತೇವೆ. ಆದ್ದರಿಂದ ನಮಗೆ ಇನ್ನೂ ಸ್ವಲ್ಪ ಸಮಯವಿದ್ದು, ಅಲ್ಲಿಗೆ ಹೋದ ನಂತರ ಬ್ಯಾಟಿಂಗ್ ಕ್ರಮಾಂಕವನ್ನು ನಿರ್ಧರಿಸಬಹುದು ಎಂದು ಭಾವಿಸುತ್ತೇನೆ ಎಂದು ಗಿಲ್ ಹೇಳಿದರು. ಇಂಗ್ಲೆಂಡ್ ವಿರುದ್ಧದ ಐದು ಟೆಸ್ಟ್‌ ಸರಣಿಯು ಜೂನ್ 20 ರಂದು ಲೀಡ್ಸ್‌ನಲ್ಲಿ ಪ್ರಾರಂಭವಾಗುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT