ರಿಷಭ್ ಪಂತ್‌ 
ಕ್ರಿಕೆಟ್

ಭಾರತ vs ಇಂಗ್ಲೆಂಡ್ ಮೊದಲನೇ ಟೆಸ್ಟ್‌ಗೂ ಮುನ್ನ ಟೀಂ ಇಂಡಿಯಾಗೆ ಹಿನ್ನಡೆ; ರಿಷಭ್ ಪಂತ್‌ಗೆ ಗಾಯ

ಭಾನುವಾರ ಬೆಕೆನ್‌ಹ್ಯಾಮ್‌ನಲ್ಲಿ ಟೀಮ್ ಇಂಡಿಯಾ ಅಭ್ಯಾಸ ನಡೆಸುತ್ತಿದ್ದಾಗ ಈ ಘಟನೆ ಸಂಭವಿಸಿದ್ದು, ನಾಯಕ ಗಿಲ್ ಮತ್ತು ಮುಖ್ಯ ಕೋಚ್ ಗೌತಮ್ ಗಂಭೀರ್ ತರಬೇತಿಯ ನೇತೃತ್ವ ವಹಿಸಿದ್ದರು.

ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೂ ಮುನ್ನ ಭಾರತ ಕ್ರಿಕೆಟ್ ತಂಡದ ಉಪನಾಯಕ ರಿಷಭ್ ಪಂತ್ ಗಾಯದಿಂದ ಬಳಲುತ್ತಿದ್ದಾರೆ. ಭಾನುವಾರ ಅಭ್ಯಾಸದ ಸಮಯದಲ್ಲಿ ಅವರ ಎಡಗೈಗೆ ಪೆಟ್ಟು ಬಿದ್ದಿದ್ದು, ಆತಂಕಕ್ಕೆ ಕಾರಣವಾಗಿತ್ತು. ಜೂನ್ 20ರಿಂದ ಪ್ರಾರಂಭವಾಗಲಿರುವ ಐದು ಪಂದ್ಯಗಳ ಸರಣಿಯಲ್ಲಿ ಶುಭ್ಮನ್ ಗಿಲ್ ನಾಯಕತ್ವದಲ್ಲಿ ಟೀಂ ಇಂಡಿಯಾ ಸೆಣಸಲಿದೆ.

ಭಾನುವಾರ ಬೆಕೆನ್‌ಹ್ಯಾಮ್‌ನಲ್ಲಿ ಟೀಮ್ ಇಂಡಿಯಾ ಅಭ್ಯಾಸ ನಡೆಸುತ್ತಿದ್ದಾಗ ಈ ಘಟನೆ ಸಂಭವಿಸಿದ್ದು, ನಾಯಕ ಗಿಲ್ ಮತ್ತು ಮುಖ್ಯ ಕೋಚ್ ಗೌತಮ್ ಗಂಭೀರ್ ತರಬೇತಿಯ ನೇತೃತ್ವ ವಹಿಸಿದ್ದರು. ರೆವ್‌ಸ್ಪೋರ್ಟ್ಸ್ ಪ್ರಕಾರ, ಪಂತ್ ನೆಟ್ಸ್‌ನಲ್ಲಿ ಬ್ಯಾಟಿಂಗ್ ಮಾಡುವಾಗ ಎಡಗೈಗೆ ಪೆಟ್ಟು ಬಿದ್ದಿದೆ. ಅವರು ಗಂಭೀರ ನೋವಿನ ಬಗ್ಗೆ ದೂರು ನೀಡಿದ್ದು, ತಂಡದ ವೈದ್ಯರು ಐಸ್ ಪ್ಯಾಕ್ ಹಚ್ಚಿ ಚಿಕಿತ್ಸೆ ನೀಡಿದ್ದಾರೆ ಎಂದು ವರದಿಯಾಗಿದೆ.

ಇದಲ್ಲದೆ, ಪಂತ್ ತಮ್ಮ ತೋಳಿಗೆ ಬ್ಯಾಂಡೇಜ್ ಹಾಕಿಕೊಂಡಿದ್ದು, ಚೇತರಿಸಿಕೊಳ್ಳಲು ಉಳಿದ ನೆಟ್ ಸೆಷನ್ ಇಂದ ದೂರ ಉಳಿದರು ಎನ್ನಲಾಗಿದೆ.

ಐಪಿಎಲ್ 2025ರ ಆವೃತ್ತಿಯಲ್ಲಿ ಪಂತ್ ಅಷ್ಟೇನು ಉತ್ತಮ ಪ್ರದರ್ಶನ ನೀಡಿಲ್ಲ. ಪಂದ್ಯಾವಳಿಯಲ್ಲಿ ಒಂದು ಶತಕ ಮತ್ತು ಅರ್ಧಶತಕವನ್ನು ಮಾತ್ರ ಗಳಿಸುವಲ್ಲಿ ಯಶಸ್ವಿಯಾದರು. ಪಂತ್ ಅವರನ್ನು 27 ಕೋಟಿ ರೂಪಾಯಿ ನೀಡಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಖರೀದಿಸಿತ್ತು.

ಅವರು ಕೊನೆಯ ಬಾರಿಗೆ ಆಸ್ಟ್ರೇಲಿಯಾದಲ್ಲಿ ನಡೆದ ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಯಲ್ಲಿ ಭಾಗವಹಿಸಿದ್ದರು. ಅಲ್ಲಿಯೂ ಸಹ, ಅವರು ಕಳಪೆ ಫಾರ್ಮ್‌ನಿಂದ ಬಳಲುತ್ತಿದ್ದರು. ಒಂದಂಕಿಗೆ ವಿಕೆಟ್ ನೀಡಿ ನಿರ್ಗಮಿಸಿದ್ದರು.

ಈಮಧ್ಯೆ, ಭಾರತದ ಬ್ಯಾಕ್-ಅಪ್ ಕೀಪರ್ ಧ್ರುವ್ ಜುರೆಲ್ ಇಂಗ್ಲೆಂಡ್ ಲಯನ್ಸ್ ವಿರುದ್ಧ ನಡೆದ ಟೆಸ್ಟ್ ಪಂದ್ಯದಲ್ಲಿ ಭಾರತ ಎ ತಂಡದ ಪರವಾಗಿ ಅತ್ಯಂತ ಸ್ಥಿರವಾಗಿ ಕಾರ್ಯನಿರ್ವಹಿಸಿದ್ದಾರೆ. ಗಾಯದಿಂದಾಗಿ ಪಂತ್ ಆಡಲು ಸಾಧ್ಯವಾಗದಿದ್ದರೆ, ಜುರೆಲ್ ಅವರಿಗೆ ತಂಡದಲ್ಲಿ ಅವಕಾಶ ಸಿಗುವ ಸಾಧ್ಯತೆ ಇದೆ.

ಜೂನ್ 13ರಿಂದ ಲೀಡ್ಸ್‌ನಲ್ಲಿ ನಡೆಯುವ ಮೊದಲ ಟೆಸ್ಟ್‌ಗೆ ಸ್ವಲ್ಪ ಮೊದಲು ಭಾರತ 'ಎ' ತಂಡದ ವಿರುದ್ಧ ಇಂಟ್ರಾ-ಸ್ಕ್ವಾಡ್ ಪಂದ್ಯವನ್ನು ಆಡಲಿದೆ. ಆ ಹೊತ್ತಿಗೆ ಪಂತ್ ಚೇತರಿಸಿಕೊಳ್ಳುವ ನಿರೀಕ್ಷೆಯಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT