ಶುಭ್ ಮನ್ ಗಿಲ್  
ಕ್ರಿಕೆಟ್

IND VS ENG ಟೆಸ್ಟ್ ಸರಣಿ: ನಾಳೆಯಿಂದ ಆರಂಭ, SENA ದೇಶಗಳಲ್ಲಿ ಟೆಸ್ಟ್ ಸರಣಿ ಗೆಲುವು IPL ಪ್ರಶಸ್ತಿಗಿಂತ ದೊಡ್ಡದು: ಶುಭ್ ಮನ್ ಗಿಲ್

ಐಪಿಎಲ್ ಟೂರ್ನಿಯು ಪ್ರತಿ ವರ್ಷವೂ ಬರುತ್ತದೆ. ಆದರೆ ದಕ್ಷಿಣ ಆಫ್ರಿಕಾ, ಇಂಗ್ಲೆಂಡ್, ನ್ಯೂಜಿಲೆಂಡ್ , ಆಸ್ಟ್ರೇಲಿಯಾದಲ್ಲಿ ದೇಶಗಳಲ್ಲಿ ಟೆಸ್ಟ್ ಸರಣಿ ಗೆಲ್ಲುವುದು ಮಹತ್ತರವಾದದ್ದು ಎಂದರು.

ಲೀಡ್ಸ್: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಮೊದಲ ಪಂದ್ಯ ಶುಕ್ರವಾರ ಲೀಡ್ಸ್ ನಲ್ಲಿ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಭಾರತ ತಂಡದ ನಾಯಕ ಶುಭ್ ಮನ್ ಗಿಲ್, ದಕ್ಷಿಣ ಆಫ್ರಿಕಾ, ಇಂಗ್ಲೆಂಡ್, ನ್ಯೂಜಿಲೆಂಡ್ , ಆಸ್ಟ್ರೇಲಿಯಾ (SENA)ದೇಶಗಳಲ್ಲಿ ಟೆಸ್ಟ್ ಸರಣಿ ಗೆಲುವು ಐಪಿಎಲ್ ಪ್ರಶಸ್ತಿಗಿಂತ ದೊಡ್ಡದು ಎಂದು ಹೇಳಿದರು.

ಐಪಿಎಲ್ ಟೂರ್ನಿಯು ಪ್ರತಿ ವರ್ಷವೂ ಬರುತ್ತದೆ. ಆದರೆ ದಕ್ಷಿಣ ಆಫ್ರಿಕಾ, ಇಂಗ್ಲೆಂಡ್, ನ್ಯೂಜಿಲೆಂಡ್ , ಆಸ್ಟ್ರೇಲಿಯಾದಲ್ಲಿ ದೇಶಗಳಲ್ಲಿ ಟೆಸ್ಟ್ ಸರಣಿ ಗೆಲ್ಲುವುದು ಮಹತ್ತರವಾದದ್ದು ಎಂದರು.

ಗಿಲ್ ನೇತೃತ್ವದ ತಂಡ ಇಂಗ್ಲೆಂಡ್‌ನಲ್ಲಿ ಕ್ರಿಕೆಟ್ ಆಡಿದ ಅನುಭವಿಗಳ ಕೊರತೆ ಹೊಂದಿದೆ ಎಂಬ ಪ್ರಶ್ನೆಗೆ ಅವರು ವಿಚಲಿತರಾಗಲಿಲ್ಲ. ಬಹಳಷ್ಟು ಮಂದಿ ಅನನುಭವಿ ತಂಡ ಎಂದು ಹೇಳುತ್ತಾರೆ. ಆದರೆ, ಅನೇಕ ಸಕಾರಾತ್ಮಕ ಅಂಶಗಳಿದ್ದು, ನಮ್ಮ ಮೇಲೆ ಯಾವುದೇ ಒತ್ತಡ ಇಲ್ಲ. ಏಕೆಂದರೆ ಎಲ್ಲಾ ಆಟಗಾರರು ನಿಜವಾಗಿಯೂ ಇಂಗ್ಲೆಂಡ್ ಪ್ರವಾಸ ಕೈಗೊಂಡಿಲ್ಲ ಎಂದರು.

ವಿರಾಟ್ ಕೊಹ್ಲಿ ನಿವೃತ್ತಿ ಬಳಿಕ ನಾನು ಸಹ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಇಚ್ಚಿಸಿದ್ದು, ಈ ಸಂಬಂಧ ಕೋಚ್ ಗೌತಮ್ ಗಂಬೀರ್ ಅವರೊಂದಿಗೆ ಮಾತುಕತೆ ನಡೆಸಿರುವುದಾಗಿ ತಿಳಿಸಿದರು.

ಐಪಿಎಲ್ ಟೂರ್ನಿ ವೇಳೆಯಲ್ಲಿ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರನ್ನು ಭೇಟಿಯಾಗಿದ್ದು, ವಿಶೇಷವಾಗಿ ಇಂಗ್ಲೆಂಡ್‌ನಲ್ಲಿ ನಾವು ಎದುರಿಸಬಹುದಾದ ಕೆಲವು ಸವಾಲುಗಳ ಬಗ್ಗೆ ಅವರಿಂದ ಮಾಹಿತಿ ಪಡೆದಿರುವುದಾಗಿ ಹೇಳಿದರು.

ತಂಡದಲ್ಲಿ ಸುರಕ್ಷಿತ" ವಾತಾವರಣವನ್ನು ಸೃಷ್ಟಿಸಲು ಪ್ರಯತ್ನಿಸುತ್ತೇನೆ. ಹಾಗೇ ಆದಲ್ಲಿ ನಮ್ಮ ಟೆಸ್ಟ್ ಸರಣಿ ಮತ್ತು ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಯಶಸ್ಸನ್ನು ಮುಂದುವರೆಸುವಂತಾಗಲಿದೆ ಎಂದು ಭಾವಿಸುವುದಾಗಿ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಿರಿಯ ನಾಯಕರೊಂದಿಗಿನ ಚರ್ಚೆ ಬಳಿಕ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ: ದೆಹಲಿಗೆ ತೆರಳುವ ಮುನ್ನ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ

ತಮಿಳುನಾಡು-ಆಂಧ್ರ ತೀರಕ್ಕೆ ದಿತ್ವಾ ಚಂಡಮಾರುತ: ಬೆಂಗಳೂರು ಸೇರಿ ಕರ್ನಾಟಕದಲ್ಲಿ 4 ದಿನ ಭಾರೀ ಮಳೆ ಸಾಧ್ಯತೆ; IMD ಎಚ್ಚರಿಕೆ

ಗಲ್ಲು ಶಿಕ್ಷೆ ಬೆನ್ನಲ್ಲೇ ಬಾಂಗ್ಲಾದೇಶ ಪದಚ್ಯುತ ಪ್ರಧಾನಿ ಶೇಖ್ ಹಸೀನಾಗೆ 21 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್

ರಾಜಕೀಯ ಅಂದ್ರೆ ಅದು.... ಸಿಎಂ ಕುರ್ಚಿ ಗುದ್ದಾಟದ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಮಾಜಿ ಸಂಸದೆ ರಮ್ಯಾ

ಡಿಕೆಶಿ ಪರ ಒಕ್ಕಲಿಗ ಸ್ವಾಮೀಜಿ ಬ್ಯಾಟಿಂಗ್, ಸಿದ್ದರಾಮಯ್ಯ ಪರ ಅಖಾಡಕ್ಕಿಳಿದ 'ಕಾಗಿನೆಲೆ' ಸ್ವಾಮೀಜಿ!

SCROLL FOR NEXT