ಕರುಣ್ ನಾಯರ್ 
ಕ್ರಿಕೆಟ್

ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಕರುಣ್ ನಾಯರ್ ಆಡುತ್ತಾರಾ? ಕುತೂಹಲ ಮೂಡಿಸಿದ BCCI ಪೋಸ್ಟ್

ಬ್ಯಾಟಿಂಗ್ ದಿಗ್ಗಜರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರು ಟೆಸ್ಟ್‌ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿರುವುದು ಕರುಣ್ ನಾಯರ್ ಅವರು ತಂಡಕ್ಕೆ ಮರಳುವಿಕೆಗೆ ಅವಕಾಶ ನೀಡಿದೆ.

ಭಾರತ ತಂಡದಲ್ಲಿ ಸ್ಥಾನ ಪಡೆದಿರುವ ಕನ್ನಡಿಗ ಕರುಣ್ ನಾಯರ್ ಅವರ ಕನಸು ನನಸಾಗಿದೆ. ಶುಕ್ರವಾರ ಹೆಡಿಂಗ್ಲಿಯಲ್ಲಿ ಆರಂಭವಾಗಲಿರುವ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಗೆ ಅವರು 'ಸಿದ್ಧ' ಎಂದು ಅವರು ಘೋಷಿಸಿದ್ದಾರೆ. 33 ವರ್ಷದ ಅವರು 2016ರಲ್ಲಿ ಮೊಹಾಲಿಯಲ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದರು ಮತ್ತು ಚೆನ್ನೈನಲ್ಲಿ ನಡೆದ ಮೂರನೇ ಟೆಸ್ಟ್‌ನಲ್ಲಿ ಅಜೇಯ 303 ರನ್ ಗಳಿಸಿ ಎಲ್ಲರ ಗಮನ ಸೆಳೆದರು. ಆ ಐತಿಹಾಸಿಕ ಬ್ಯಾಟಿಂಗ್ ನಂತರ 2017ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಕೇವಲ ಮೂರು ಪಂದ್ಯಗಳನ್ನು ಆಡಿದರು ಮತ್ತು ನಂತರ ಅವರನ್ನು ತಂಡದಿಂದ ಕೈಬಿಡಲಾಯಿತು.

ನಂತರ ಕರುಣ್ ಅವರು ದೇಶೀಯ ಕ್ರಿಕೆಟ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದರು. ಕಳೆದ ರಣಜಿ ಟ್ರೋಫಿಯಲ್ಲಿ ಅದ್ಭುತ ಪ್ರದರ್ಶನ ನೀಡಿದರು. ಕರುಣ್ ಏಳು ವರ್ಷಗಳ ನಂತರ ಇಂಗ್ಲೆಂಡ್ ಪ್ರವಾಸಕ್ಕಾಗಿ ತಂಡಕ್ಕೆ ಮರಳಿದ್ದಾರೆ. ಅದೇ ಸ್ಥಳದಿಂದಲೇ ಅವರು ತಂಡದಿಂದ ನಿರ್ಗಮಿಸಿದ್ದರು. ಬ್ಯಾಟಿಂಗ್ ದಿಗ್ಗಜರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರು ಟೆಸ್ಟ್‌ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿರುವುದು ಕರುಣ್ ನಾಯರ್ ಅವರು ತಂಡಕ್ಕೆ ಮರಳುವಿಕೆಗೆ ಅವಕಾಶ ನೀಡಿದೆ. 2002ರ ನಂತರ ಶುಭಮನ್ ಗಿಲ್ ಅವರ ಹೊಸ ನಾಯಕತ್ವದಲ್ಲಿ ಹೆಡಿಂಗ್ಲಿಯಲ್ಲಿ ಭಾರತ ತನ್ನ ಮೊದಲ ಟೆಸ್ಟ್ ಗೆಲುವಿನ ನಿರೀಕ್ಷೆಯಲ್ಲಿದೆ.

ಈ ಕುರಿತು ಬಿಸಿಸಿಐ ಪೋಸ್ಟ್ ಹಂಚಿಕೊಂಡಿದ್ದು, ಇದು ಕರುಣ್ ನಾಯರ್. ಅವರು ಹೋಗಲು ಸಿದ್ಧ ಎಂದು ಬರೆದಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಅಭಿಮಾನಿಗಳು ಕರುಣ್ ನಾಯರ್ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಆಡುವ 11ರ ಬಳಗದಲ್ಲಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ.

'ಜೀವನವು ಪೂರ್ಣ ವೃತ್ತಕ್ಕೆ ಬಂದಿದೆ. ನಾನು ಇಂಗ್ಲೆಂಡ್‌ನಲ್ಲಿ ತಂಡದಿಂದ ಹೊರಬಂದೆ, ಮತ್ತು ಈಗ ನಾನು ಇಂಗ್ಲೆಂಡ್‌ನಲ್ಲಿ ತಂಡಕ್ಕೆ ಮರಳುತ್ತಿದ್ದೇನೆ. ಇದಾಗಿ ಸ್ವಲ್ಪ ಸಮಯ ಕಳೆದಿದೆ ಮತ್ತು ಇದೀಗ ಸಿಕ್ಕಿರುವ ಅವಕಾಶವನ್ನು ಬಳಸಿಕೊಳ್ಳಲು ಪ್ರಯತ್ನಿಸುತ್ತಿದ್ದೇನೆ' ಎಂದು 33 ವರ್ಷದ ಬ್ಯಾಟ್ಸ್‌ಮನ್ ಬಿಸಿಸಿಐ ಪೋಸ್ಟ್ ಮಾಡಿದ ವಿಡಿಯೋದಲ್ಲಿ ಹೇಳಿದ್ದಾರೆ.

ತಂಡದಿಂದ ಹೊರಬಿದ್ದ ಬಳಿಕ ಕರುಣ್ ಎಂದಿಗೂ ನಂಬಿಕೆ ಕಳೆದುಕೊಳ್ಳಲಿಲ್ಲ. ತನ್ನ ಹಸಿವನ್ನು ಹಾಗೆಯೇ ಉಳಿಸಿಕೊಂಡಿದ್ದರು ಮತ್ತು ಅಂತಿಮವಾಗಿ ತಂಡಕ್ಕೆ ಮರಳಿದರು. ತಂಡದಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಳ್ಳಲು ಮತ್ತೊಂದು ಅವಕಾಶಕ್ಕಾಗಿ ತಯಾರಿ ನಡೆಸುತ್ತಿರುವಾಗ, ಕರುಣ್ ಮತ್ತೆ ಭಾರತದ ಜೆರ್ಸಿಯನ್ನು ಧರಿಸಲು ಮುಂದಾಗಿದ್ದಾರೆ.

'ನಾನು ಎಚ್ಚರಗೊಂಡಾಗ ನನ್ನ ಮೊದಲ ಆಲೋಚನೆ ಟೆಸ್ಟ್ ಕ್ರಿಕೆಟ್ ಆಡಬೇಕು, ಭಾರತಕ್ಕಾಗಿ ಮತ್ತೆ ಆಡಬೇಕು ಎಂಬುದಾಗಿತ್ತು. ಅದು ಬಹುಶಃ ನನ್ನನ್ನು ಮುಂದುವರಿಸಿಕೊಂಡು ಹೋಗಲು ಮತ್ತು ಹಸಿವಿನಿಂದ ಇರಿಸಲು ಕಾರಣವಾಗಿತ್ತು. ತಯಾರಿ ಮಾಡಿಕೊಳ್ಳಲು ಮತ್ತು ಪ್ರತಿದಿನ ಅಭ್ಯಾಸಕ್ಕೆ ಹೋಗಲು ಪ್ರೇರಕ ಶಕ್ತಿಯಾಗಿತ್ತು. ಆ ನಂಬಿಕೆಯನ್ನು ಎಂದಿಗೂ ಕಳೆದುಕೊಳ್ಳದಿರುವುದು ಗುರಿಯನ್ನು ತಲುಪಲು ನನಗೆ ಸಹಾಯ ಮಾಡಿತು. ಈ ಜೆರ್ಸಿಯನ್ನು ಧರಿಸಲು ಮತ್ತು ನನ್ನ ದೇಶವನ್ನು ಪ್ರತಿನಿಧಿಸಲು ಹೆಮ್ಮೆಯಾಗುತ್ತಿದೆ' ಎಂದು ಅವರು ಹೇಳಿದರು.

'ನಾನು ಎಲ್ಲರನ್ನೂ ಮೊದಲ ಬಾರಿಗೆ ನೋಡಿದಾಗ, ನಾನು ಅಂತಿಮವಾಗಿ ತಂಡಕ್ಕೆ ಸೇರಿದ್ದೇನೆ ಎಂದು ನನಗೆ ನಿಜವಾಗಿಯೂ ಅನಿಸಿತು. ಅಲ್ಲಿಯವರೆಗೆ, ನನಗೆ ನಂಬರು ಸಾಧ್ಯವಾಗಿರಲಿಲ್ಲ. ಪರಿಪೂರ್ಣತೆಯನ್ನು ಬೆನ್ನಟ್ಟಬೇಡಿ; ದೊಡ್ಡ ಕನಸು ಕಾಣಲು ಪ್ರಯತ್ನಿಸಿ. ಯಾವುದೇ ಸಮಯದಲ್ಲಿ ಏನು ಬೇಕಾದರೂ ಆಗಬಹುದು ಎಂಬ ನಂಬಿಕೆಯನ್ನು ನಿಮ್ಮಲ್ಲಿ ಇಟ್ಟುಕೊಳ್ಳಿ. ಹಾಯ್, ಇದು ಕರುಣ್ ನಾಯರ್ ಮತ್ತು ನಾನು ಹೋಗಲು ಸಿದ್ಧನಿದ್ದೇನೆ' ಎಂದು ಅವರು ಹೇಳಿದರು.

ಭಾರತ ತಂಡ: ಶುಭಮನ್ ಗಿಲ್ (ನಾಯಕ), ರಿಷಭ್ ಪಂತ್ (ಉಪನಾಯಕ ಮತ್ತು ವಿಕೆಟ್ ಕೀಪರ್), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ಅಭಿಮನ್ಯು ಈಶ್ವರನ್, ಕರುಣ್ ನಾಯರ್, ನಿತೀಶ್ ರೆಡ್ಡಿ, ರವೀಂದ್ರ ಜಡೇಜಾ, ಧ್ರುವ್ ಜುರೆಲ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್, ಅರ್ಶದೀಪ್ ಸಿಂಗ್, ಕುಲದೀಪ್ ಯಾದವ್.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT