ಸಚಿನ್ ತೆಂಡೂಲ್ಕರ್  
ಕ್ರಿಕೆಟ್

ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿಯ ಬಗ್ಗೆ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ನುಡಿದ ಭವಿಷ್ಯ !

ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಇಲ್ಲದೆ ಟೀಂ ಇಂಡಿಯಾ ಇದೀಗ ಕೆಲ ಅನುಭವಿ ಮತ್ತು ಯುವ ಆಟಗಾರರ ಮೂಲಕ ಇಂಗ್ಲೆಂಡ್ ವಿರುದ್ಧ ಕಣಕ್ಕಿಳಿಯಲಿದ್ದು, ಟೆಸ್ಟ್ ಸ್ವರೂಪದಲ್ಲಿ ಭಾರತಕ್ಕೆ ಹೊಸ ಯುಗ ಆರಂಭವಾಗಿದೆ.

ಮುಂಬರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಶುಭಮನ್ ಗಿಲ್ ನೇತೃತ್ವದ ಭಾರತ ತಂಡ 3-1 ಅಂತರದ ಗೆಲುವು ಸಾಧಿಸಲಿದೆ ಎಂದು ಲೆಜೆಂಡರಿ ಬ್ಯಾಟ್ಸ್‌ಮನ್ ಸಚಿನ್ ತೆಂಡೂಲ್ಕರ್ ಭವಿಷ್ಯ ನುಡಿದಿದ್ದಾರೆ. ಸ್ಟಾರ್ ಬ್ಯಾಟ್ಸ್‌ಮನ್‌ಗಳಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಇಬ್ಬರೂ ಟೆಸ್ಟ್‌ ಕ್ರಿಕೆಟ್‌ನಿಂದ ನಿವೃತ್ತರಾಗಿದ್ದು, ಇದೀಗ ಅವರಿಲ್ಲದೆಯೇ ಭಾರತ ತಂಡ ಆಡಲಿದೆ. ಇದರ ಪರಿಣಾಮವಾಗಿ, ಗಿಲ್ ನಾಯಕತ್ವದಲ್ಲಿ ಶುಕ್ರವಾರದಿಂದ ಪ್ರಾರಂಭವಾಗುವ ಮೊದಲ ಟೆಸ್ಟ್ ಪಂದ್ಯದಲ್ಲಿ ಹೊಸ ಬ್ಯಾಟಿಂಗ್ ಘಟಕ ಕಾಣಿಸಿಕೊಳ್ಳಲಿದೆ.

ಟೆಸ್ಟ್ ಸರಣಿಯಲ್ಲಿ ಭಾರತೀಯ ಕ್ರಿಕೆಟ್ ತಂಡದ ಅವಕಾಶಗಳ ಬಗ್ಗೆ ಸಚಿನ್ ವಿಶ್ವಾಸ ಹೊಂದಿದ್ದು, 'ಭಾರತ 3-1 ಅಂತರದ ಗೆಲುವು ಸಾಧಿಸುತ್ತದೆ'. ಮುಂಬರುವ ಇಂಗ್ಲೆಂಡ್ ಪ್ರವಾಸದಲ್ಲಿ ಬಲಗೈ ಸೀಮರ್ ಜಸ್ಪ್ರೀತ್ ಬುಮ್ರಾ ಪ್ರವಾಸಿ ತಂಡಕ್ಕೆ ಸ್ಟ್ರೈಕ್ ಬೌಲರ್ ಆಗಿರುತ್ತಾರೆ ಎಂದು ಇಎಸ್‌ಪಿಎನ್ ಕ್ರಿಕ್‌ಇನ್ಫೊಗೆ ತಿಳಿಸಿದ್ದಾರೆ.

ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಇಲ್ಲದೆ ಟೀಂ ಇಂಡಿಯಾ ಇದೀಗ ಕೆಲ ಅನುಭವಿ ಮತ್ತು ಯುವ ಆಟಗಾರರ ಮೂಲಕ ಇಂಗ್ಲೆಂಡ್ ವಿರುದ್ಧ ಕಣಕ್ಕಿಳಿಯಲಿದ್ದು, ಟೆಸ್ಟ್ ಸ್ವರೂಪದಲ್ಲಿ ಭಾರತಕ್ಕೆ ಹೊಸ ಯುಗ ಆರಂಭವಾಗಿದೆ. ಭಾರತದ ಅತ್ಯಂತ ಕಿರಿಯ ಟೆಸ್ಟ್ ನಾಯಕ ಶುಭಮನ್ ಗಿಲ್, ದೇಶವನ್ನು ಯಶಸ್ಸಿನತ್ತ ಕೊಂಡೊಯ್ಯಲು ಮತ್ತು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪೈಪೋಟಿಗೆ ತಂಡವನ್ನು ಮುನ್ನಡೆಸಲು ಮುಂದಾಗಿದ್ದಾರೆ.

ಕೆಂಟ್ ತಂಡದ ಎರಡನೇ ತವರು ಸ್ಥಳವಾದ ಬೆಕೆನ್‌ಹ್ಯಾಮ್‌ನಲ್ಲಿ ಭಾರತದ ಅಭ್ಯಾಸ ಅವಧಿಯಲ್ಲಿ, ಬುಮ್ರಾ ಪೇಸ್ ಬೌಲಿಂಗ್ ಕಲೆಯಲ್ಲಿ ತಮ್ಮ ಅಪ್ರತಿಮ ಪಾಂಡಿತ್ಯವನ್ನು ಪ್ರದರ್ಶಿಸಿದರು.

ಇಂಗ್ಲೆಂಡ್ ಪ್ರವಾಸದಲ್ಲಿ ಜಸ್ಪ್ರೀತ್ ಬುಮ್ರಾ ಅವರ ಮಹತ್ವದ ಕುರಿತು ಮಾತನಾಡಿದ ಸಚಿನ್ ತೆಂಡೂಲ್ಕರ್, 'ಬೌಲಿಂಗ್ ದಾಳಿಯು ಬುಮ್ರಾ ಮತ್ತು ಇತರ ಬೌಲರ್‌ಗಳನ್ನು ಹೇಗೆ ಬೆಂಬಲಿಸುತ್ತಾರೆ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ ಎಂದು ನಾನು ಭಾವಿಸುತ್ತೇನೆ. ಬುಮ್ರಾ ನಮ್ಮ ಸ್ಟ್ರೈಕ್ ಬೌಲರ್ ಆಗಲಿದ್ದಾರೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ. ಅದರ ಜೊತೆಗೆ, ಪ್ರಸಿದ್ಧ್ ಕೃಷ್ಣ ಕೂಡ ಉತ್ತಮ ಫಾರ್ಮ್‌ನಲ್ಲಿದ್ದಾರೆ. ಅರ್ಶದೀಪ್ ಸಿಂಗ್, ಶಾರ್ದೂಲ್ ಠಾಕೂರ್ ಮತ್ತು ನಿತೀಶ್ ರೆಡ್ಡಿ ಉತ್ತಮ ಬೌಲರ್‌ಗಳಾಗಿರುತ್ತಾರೆ. ಹರ್ಷಿತ್ ರಾಣಾ, ರವೀಂದ್ರ ಜಡೇಜಾ, ಕುಲದೀಪ್ ಯಾದವ್ ಸೇರಿದಂತೆ ಕೆಲವು ಹೆಸರುಗಳನ್ನು ಕೈಬಿಟ್ಟಿರಬಹುದು. ಬೌಲಿಂಗ್ ಸಮತೋಲಿತವಾಗಿದೆ. ನಾವು ಏನಾದರೂ ಒಳ್ಳೆಯದನ್ನು ಮಾಡುತ್ತೇವೆ ಎಂದು ನಾನು ಭಾವಿಸುತ್ತೇನೆ' ಎಂದರು.

ಇಂಗ್ಲೆಂಡ್‌ನಲ್ಲಿ ನಡೆಯಲಿರುವ ಐದು ಟೆಸ್ಟ್‌ ಪಂದ್ಯಗಳಲ್ಲಿಯೂ ಬುಮ್ರಾ ಲಭ್ಯರಿರುವುದಿಲ್ಲ. ಮುಖ್ಯ ಆಯ್ಕೆದಾರ ಅಜಿತ್ ಅಗರ್ಕರ್, ಬುಮ್ರಾ ಅವರ ಕೆಲಸದ ಹೊರೆ ನಿರ್ವಹಣೆಯ ಭಾಗವಾಗಿ ಸತತ ಟೆಸ್ಟ್‌ಗಳಲ್ಲಿ ಸ್ಪರ್ಧಿಸದಂತೆ ಸೂಚಿಸಲಾಗಿದೆ ಎಂದು ದೃಢಪಡಿಸಿದರು. ಜನವರಿಯಲ್ಲಿ ಸಿಡ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ಐದನೇ ಟೆಸ್ಟ್ ಪಂದ್ಯದ ಸಮಯದಲ್ಲಿ ಬುಮ್ರಾ ಅವರು ಬೆನ್ನು ನೋವಿನಿಂದ ಬಳಲುತ್ತಿದ್ದರು. ಹೀಗಾಗಿ, ಬುಮ್ರಾ ಅವರನ್ನು ತಂಡದಲ್ಲಿ ಬಳಸಿಕೊಳ್ಳುವ ಕುರಿತು ಮುನ್ನೆಚ್ಚರಿಕೆ ವಹಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT