ಮುಖ್ಯ ಕೋಚ್ ಗೌತಮ್ ಗಂಭೀರ್ 
ಕ್ರಿಕೆಟ್

'ನೆಪ ಹೇಳಲು ಸಾಧ್ಯವಿಲ್ಲ': ಸರಣಿ ಸೋತರೆ ಮುಖ್ಯ ಕೋಚ್ ಗೌತಮ್ ಗಂಭೀರ್ ಭವಿಷ್ಯ ಅಪಾಯದಲ್ಲಿ; ಆಕಾಶ್ ಚೋಪ್ರಾ

ಹೆಡಿಂಗ್ಲಿಯಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ಇಂಗ್ಲೆಂಡ್ ವಿರುದ್ಧದ ಹೀನಾಯ ಸೋಲಿನ ಹೊರತಾಗಿಯೂ, ಭಾರತದ ಕೋಚ್ ಗೌತಮ್ ಗಂಭೀರ್ ತಂಡದ ಬೌಲಿಂಗ್ ಅನ್ನು ಬೆಂಬಲಿಸಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಸರಣಿಯ ಮೊದಲ ಟೆಸ್ಟ್‌ನಲ್ಲಿ ಟೀಮ್ ಇಂಡಿಯಾ ಐದು ವಿಕೆಟ್‌ಗಳ ಸೋಲು ಕಾಣುವ ಮೂಲಕ ಇಂಗ್ಲೆಂಡ್ ಪ್ರವಾಸವನ್ನು ಆರಂಭಿಸಿದೆ. ಐದು ಶತಕಗಳನ್ನು ಒಳಗೊಂಡಂತೆ 800ಕ್ಕೂ ಹೆಚ್ಚು ರನ್‌ಗಳನ್ನು ಗಳಿಸಿದ್ದರೂ, ಭಾರತ ಸೋಲು ಕಂಡಿತು. ಈ ಫಲಿತಾಂಶವು ಭಾರತಕ್ಕೆ ಕಳೆದ ಒಂಬತ್ತು ಟೆಸ್ಟ್‌ಗಳಲ್ಲಿ ಏಳು ಸೋಲುಗಳನ್ನು ಕಂಡಿದೆ. ಇದು ಟೀಂ ಇಂಡಿಯಾದ ಮುಖ್ಯ ಕೋಚ್ ಗೌತಮ್ ಗಂಭೀರ್ ಮೇಲೆ ಬಲವಾದ ಒತ್ತಡ ಉಂಟುಮಾಡಿದೆ. ಭಾರತದ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ಕೂಡ ಗಂಭೀರ್ ಅವರು ತುಂಬಾ ಒತ್ತಡದಲ್ಲಿದ್ದಾರೆ ಎಂದರು.

'ಗೌತಮ್ ಗಂಭೀರ್ ಮೇಲೆ ಬಹಳಷ್ಟು ಒತ್ತಡವಿದೆ. ಒತ್ತಡವು ಸಂಪೂರ್ಣವಾಗಿ ಹೆಚ್ಚುತ್ತಿದೆ. ನೀವು ಟೆಸ್ಟ್ ಕ್ರಿಕೆಟ್‌ನಲ್ಲಿ ನೋಡಿದರೆ ಅವರ ಮಾರ್ಗದರ್ಶನದಲ್ಲಿ ತಂಡವು ಹೆಚ್ಚು ಪಂದ್ಯಗಳನ್ನು ಗೆದ್ದಿಲ್ಲ ಎಂದು ನೀವು ಕಂಡುಕೊಳ್ಳುತ್ತೀರಿ' ಎಂದು ಚೋಪ್ರಾ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಮಾತನಾಡುತ್ತಾ ಹೇಳಿದರು.

'ಬಾಂಗ್ಲಾದೇಶ ವಿರುದ್ಧ ಎರಡು ಪಂದ್ಯಗಳನ್ನು ಮತ್ತು ಆಸ್ಟ್ರೇಲಿಯಾ ವಿರುದ್ಧ ಒಂದು ಪಂದ್ಯವನ್ನು ಗೆದ್ದಿದ್ದಾರೆ. ಆದಾಗ್ಯೂ, ಅವರು ನ್ಯೂಜಿಲೆಂಡ್ ವಿರುದ್ಧ ಮೂರು, ಆಸ್ಟ್ರೇಲಿಯಾ ವಿರುದ್ಧ ಮೂರು ಮತ್ತು ಇಂಗ್ಲೆಂಡ್ ವಿರುದ್ಧ ಒಂದು ಪಂದ್ಯವನ್ನು ಸೋತಿದ್ದಾರೆ. ಅವರು ನಿರಂತರವಾಗಿ ಸೋಲುತ್ತಿದ್ದಾರೆ' ಎಂದು ಚೋಪ್ರಾ ಹೇಳಿದರು.

ಭಾರತ ಸರಣಿಯನ್ನು ಸೋತರೆ, ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತದ ಮುಖ್ಯ ಕೋಚ್ ಆಗಿ ಗಂಭೀರ್ ಅವರ ಭವಿಷ್ಯವು ಗಂಭೀರ ಅಪಾಯದಲ್ಲಿದೆ. ಟೆಸ್ಟ್ ಕ್ರಿಕೆಟ್ ಸಂದರ್ಭದಲ್ಲಿ ತಂಡದ ಆಯ್ಕೆ, ಆಟಗಾರರ ಪ್ರದರ್ಶನ ಸೇರಿದಂತೆ ಹಲವು ಅನಿಶ್ಚಿತತೆಗಳು ಇರುತ್ತವೆ. ಹೀಗಾಗಿ ಚರ್ಚೆಗಳು ಉದ್ಭವಿಸುವ ಸಾಧ್ಯತೆಯಿದೆ. ಈ ನಿರ್ದಿಷ್ಟ ಟೆಸ್ಟ್ ಸರಣಿ ಮೇಲೆ ಹೆಚ್ಚಿನ ಒತ್ತಡವಿದೆ ಎಂದರು.

'ಇಂಗ್ಲೆಂಡ್ ಸರಣಿ ಚೆನ್ನಾಗಿ ನಡೆಯದಿದ್ದರೆ, ಅವರು ಎಲ್ಲಿಗೆ ಹೋಗುತ್ತಿದ್ದಾರೆ ಮತ್ತು ಅವರು ಏನು ಮಾಡುತ್ತಿದ್ದಾರೆ? ಎಂಬ ಪ್ರಶ್ನೆ ಉದ್ಭವಿಸುತ್ತದೆ. ಏಕೆಂದರೆ, ತಂಡದ ಆಡಳಿತ ಮಂಡಳಿ ಏನು ಕೇಳುತ್ತಿದೆಯೋ ಅದನ್ನು ನೀಡಲಾಗುತ್ತಿದೆ ಎಂದು ಆಯ್ಕೆದಾರರು ಭಾವಿಸುತ್ತಾರೆ. ನಿಮಗೆ ನಿಮಗೆ ಬೇಕಾದ ಆಟಗಾರರ ಸಂಖ್ಯೆ ಮತ್ತು ನೀವು ಸೂಚಿಸುತ್ತಿರುವ ಆಟಗಾರನನ್ನು ನೀಡಲಾಗುತ್ತಿದೆ. ಹಾಗಿದ್ದಲ್ಲಿ, ನೀವು ಫಲಿತಾಂಶಗಳನ್ನು ಕೂಡ ನೀಡಬೇಕಾಗಿದೆ. ಹೀಗಾಗಿ, ಇಲ್ಲಿ ಯಾವುದೇ ನೆಪಗಳನ್ನು ಹೇಳಲು ಸಾಧ್ಯವಿಲ್ಲ' ಎಂದು ಚೋಪ್ರಾ ಹೇಳಿದರು.

ಈಮಧ್ಯೆ, ಹೆಡಿಂಗ್ಲಿಯಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ಇಂಗ್ಲೆಂಡ್ ವಿರುದ್ಧದ ಹೀನಾಯ ಸೋಲಿನ ಹೊರತಾಗಿಯೂ, ಭಾರತದ ಕೋಚ್ ಗೌತಮ್ ಗಂಭೀರ್ ತಂಡದ ಬೌಲಿಂಗ್ ಅನ್ನು ಬೆಂಬಲಿಸಿದ್ದಾರೆ.

ಮುಂದಿನ ವಾರ ಎಡ್ಜ್‌ಬಾಸ್ಟನ್‌ನಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ ಹೊರಗುಳಿಯುವ ಸಾಧ್ಯತೆಯಿದೆ. ಈ ಸರಣಿಯಲ್ಲಿ ಬುಮ್ರಾ ಅವರನ್ನು ಮೂರು ಪಂದ್ಯಗಳಲ್ಲಿ ಮಾತ್ರ ಆಡಿಸಲು ಯೋಜಿಸಲಾಗಿದೆ ಎಂದು ಭಾರತ ಹೇಳಿದೆ.

ಎರಡನೇ ಟೆಸ್ಟ್ ಪಂದ್ಯ ಜುಲೈ 2ರ ಬುಧವಾರ ಆರಂಭವಾಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸುಪ್ರೀಂನ ಮಧ್ಯಂತರ ಆದೇಶ ವಿದ್ಯಾರ್ಥಿಗಳ ವಿರುದ್ಧ ದುರ್ಬಳಕೆಯಾಗುವ ಸಾಧ್ಯತೆ: 'ಕಿರುಕುಳ' ಮುಂದುವರಿದರೆ ಸರಿ ಇರಲ್ಲ- ದೀಪ್ಕೆ ವಾರ್ನಿಂಗ್!

ಪ್ರಹ್ಲಾದ್ ಜೋಶಿ ಕೊಳಕು ಮನುಷ್ಯ; ಅತ್ಯಾಚಾರಿಯನ್ನು ರಕ್ಷಿಸುವವರು ನೂತನ ಶಿಕ್ಷಣ ಸಚಿವರಾಗಿದ್ದಾರೆ: ರಾಹುಲ್ ಗಂಭೀರ ಆರೋಪ, Video

Gen-Z ಗಳಿಗೆ ʻಜನರೇಷನ್‌ ಗಟರ್‌ʼಎಂದ ಕಂಗನಾ ರಣಾವತ್; ಅವರನ್ನು ಬಿಜೆಪಿಯೇ ಗಂಭೀರವಾಗಿ ಪರಿಗಣಿಸಿಲ್ಲ, ಸಿಜೆಪಿ ತಿರುಗೇಟು! Video

ದೆಹಲಿಗೆ ಬಂದು ನಾಟಕವಾಡುವ ನಿಮಗೆ KPSC ಹಗರಣ ಅನ್ಯಾಯ ಅನಿಸಲಿಲ್ಲವೇ?: ಲೋಕಸಭೆಯಲ್ಲಿ ಸಿಎಂ ಶಿವಕುಮಾರ್ ವಿರುದ್ಧ ತೇಜಸ್ವಿ ವಾಗ್ದಾಳಿ!

NEET ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ಹಿಂಪಡೆಯಲು ಮಹಾರಾಷ್ಟ್ರ ಸರ್ಕಾರ ಮುಂದು!