ವಿರಾಟ್ ಕೊಹ್ಲಿ ದಾಖಲೆ 
ಕ್ರಿಕೆಟ್

ICC Champions Trophy 2025: ದ್ರಾವಿಡ್, ಪಾಂಟಿಂಗ್ ದಾಖಲೆ ಮುರಿದ Virat Kohli

ಇಂದು ದುಬೈನ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಈ ಸಾಧನೆ ಮಾಡಿದ್ದಾರೆ.

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ಭಾರತದ ರನ್ ಮೆಷಿನ್ ವಿರಾಟ್ ಕೊಹ್ಲಿ ಐತಿಹಾಸಿಕ ದಾಖಲೆ ನಿರ್ಮಿಸಿದ್ದಾರೆ.

ಹೌದು... ಇಂದು ದುಬೈನ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಈ ಸಾಧನೆ ಮಾಡಿದ್ದಾರೆ. ಇಂದಿನ ಪಂದ್ಯದಲ್ಲಿ ಆಸ್ಟ್ರೇಲಿಯಾದ ಜೋಶ್ ಇಂಗ್ಲಿಸ್ ರ ಕ್ಯಾಚ್ ಪಡೆಯುವ ಮೂಲಕ ಕೊಹ್ಲಿ ಭಾರತದ ಪರ ಅತೀ ಹೆಚ್ಚು ಕ್ಯಾಚ್ ಪಡೆದ ಸಾಧನೆ ಮಾಡಿದ್ದಾರೆ.

ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಇದು ಅವರ 335ನೇ ಕ್ಯಾಚ್ ಆಗಿದ್ದು, ಆ ಮೂಲಕ ಭಾರತದ ಪರ ಅತೀ ಹೆಚ್ಚು ಕ್ಯಾಚ್ ಹಿಡಿದ ಆಟಗಾರ ಎಂಬ ಕೀರ್ತಿಗೆ ಕೊಹ್ಲಿ ಭಾಜನರಾಗಿದ್ದಾರೆ.

ದ್ರಾವಿಡ್ ದಾಖಲೆ ಪತನ

ಇನ್ನು ಈ ಕ್ಯಾಚ್ ಮೂಲಕ ಕೊಹ್ಲಿ ಭಾರತದ ಮಾಜಿ ಆಟಗಾರ ಕ್ರಿಕೆಟ್ ದಂತಕಥೆ ರಾಹುಲ್ ದ್ರಾವಿಡ್ ಅವರ ದಾಖಲೆಯನ್ನು ಹಿಂದಿಕ್ಕಿದ್ದಾರೆ. ದ್ರಾವಿಡ್ ಒಟ್ಟು 333 ಕ್ಯಾಚ್ ಗಳನ್ನು ಪಡೆದಿದ್ದು, 261 ಕ್ಯಾಚ್ ಗಳನ್ನು ಪಡೆದಿರುವ ಮಹಮದ್ ಅಜರುದ್ದೀನ್ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದ್ದಾರೆ. ಭಾರತದ ಸವ್ಯಸಾಚಿ ಸಚಿನ್ ತೆಂಡೂಲ್ಕರ್ 256 ಕ್ಯಾಚ್ ಗಳೊಂದಿಗೆ 4ನೇ ಸ್ಥಾನದಲ್ಲಿದ್ದಾರೆ. ಭಾರತ ತಂಡದ ನಾಯಕ ರೋಹಿತ್ ಶರ್ಮಾ 229 ಕ್ಯಾಚ್ ಗಳೊಂದಿಗೆ 5ನೇ ಸ್ಥಾನದಲ್ಲಿದ್ದಾರೆ.

ಪಾಂಟಿಂಗ್ ದಾಖಲೆಯೂ ಪತನ

ಇದೇ ವೇಳೆ ಕೊಹ್ಲಿ ಏಕದಿನ ಕ್ರಿಕೆಟ್ ನಲ್ಲಿ ಓರ್ವ ಫೀಲ್ಡರ್ ಆಗಿ ಒಟ್ಟು 161 ಕ್ಯಾಚ್ ಪಡೆದಿದ್ದು, ಈ ಪಟ್ಟಿಯಲ್ಲಿ ರಿಕ್ಕಿ ಪಾಂಟಿಂಗ್ ದಾಖಲೆಯನ್ನು ಹಿಂದಿಕ್ಕಿದ್ದಾರೆ. ಪಾಂಟಿಂಗ್ ಒಟ್ಟು 160 ಕ್ಯಾಚ್ ಪಡೆದಿದ್ದು, ಕೊಹ್ಲಿ 161 ಕ್ಯಾಚ್ ಪಡೆದು ಈ ದಾಖಲೆ ಹಿಂದಿಕ್ಕಿದ್ದಾರೆ. ಈ ಪಟ್ಟಿಯಲ್ಲಿ ಶ್ರೀಲಂಕಾದ ಮಾಜಿ ಆಟಗಾರ ಮಹೇಲಾ ಜಯವರ್ಧನೆ ಅಗ್ರಸ್ಥಾನದಲ್ಲಿದ್ದು, ಅವರು ಒಟ್ಟು 218 ಕ್ಯಾಚ್ ಪಡೆದಿದ್ದಾರೆ.

Most catches as a fielder in ODIs

  • 218 - Mahela Jayawardene

  • 161 - Virat Kohli

  • 160 - Ricky Ponting

  • 156 - Mohammad Azharuddin

  • 142 - Ross Taylor

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ