ಅಭ್ಯಾಸದ ವೇಳೆಯಲ್ಲಿ ರೋಹಿತ್ ಶರ್ಮಾ, ರವೀಂದ್ರ ಜಡೇಜ ಅವರೊಂದಿಗೆ ಗೌತಮ್ ಗಂಭೀರ್ 
ಕ್ರಿಕೆಟ್

ICC Champions Trophy 2025: ಭಾರತ ಇಲ್ಲಿಯವರೆಗೆ 'ಪರಿಪೂರ್ಣ ಆಟ' ಆಡಿಲ್ಲ! ಗೌತಮ್ ಗಂಭೀರ್ ಅಚ್ಚರಿ ಹೇಳಿಕೆ

ಪರಿಪೂರ್ಣ ಆಟಕ್ಕಾಗಿ ತಂಡ ಇನ್ನೂ ಹುಡುಕಾಡುತ್ತಿದ್ದು, ಭಾನುವಾರ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಅದು ಬರುವ ವಿಶ್ವಾಸವಿದೆ ಎಂದಿದ್ದಾರೆ.

ದುಬೈ: ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡಿದ ಎಲ್ಲಾ ಪಂದ್ಯಗಳನ್ನು ಗೆದ್ದು ಭಾರತ ಫೈನಲ್ ಗೆ ಲಗ್ಗೆ ಇಟ್ಟಿದ್ದರೂ ಭಾರತದ ಕೋಚ್ ಗೌತಮ್ ಗಂಭೀರ್ ಮಾತ್ರ,ಇಲ್ಲಿಯವರೆಗೂ ಪರಿಪೂರ್ಣ ಆಟ ಆಡಿಲ್ಲ ಅಂತಾ ಅಚ್ಚರಿಯ ಹೇಳಿಕೆ ನೀಡಿದ್ದಾರೆ..

ಪರಿಪೂರ್ಣ ಆಟಕ್ಕಾಗಿ ತಂಡ ಇನ್ನೂ ಹುಡುಕಾಡುತ್ತಿದ್ದು, ಭಾನುವಾರ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಅದು ಬರುವ ವಿಶ್ವಾಸವಿದೆ ಎಂದಿದ್ದಾರೆ. ಮಂಗಳವಾರ ನಡೆದ ಮೊದಲ ಸೆಮಿಪೈನಲ್ ನಲ್ಲಿ ಕೊಹ್ಲಿ ಅವರ ವೇಗದ 84 ರನ್ ಗಳ ನೆರವಿನಿಂದ ಭಾರತ ನಾಲ್ಕು ವಿಕೆಟ್ ಗಳಿಂದ ಆಸೀಸ್ ಸೋಲಿಸಿ, ಫೈನಲ್ ಗೆ ಲಗ್ಗೆ ಇಟ್ಟಿದೆ.

ಪಂದ್ಯದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗೌತಮ್ ಗಂಭೀರ್, ನೋಡಿ, ಅಂತಾರಾಷ್ಟ್ರೀಯ ಪಂದ್ಯದಲ್ಲಿ ನೀವು ಮತ್ತಷ್ಟು ಸುಧಾರಿಸಲು ಬಯಸುತ್ತೀರಿ. ಎಲ್ಲಾವನ್ನೂ ಸಾಧಿಸಿದ್ದೀರಿ ಎಂದು ಹೇಳಲಾಗದು. ನಾವು ಇನ್ನೂ ಪರಿಪೂರ್ಣ ಆಟವನ್ನು ಆಡಿಲ್ಲ. ಪ್ರದರ್ಶನದಿಂದ ನಾನು ಎಂದಿಗೂ ತೃಪ್ತನಾಗುವುದಿಲ್ಲ ಎಂದರು.

ಮಾರ್ಚ್ 9 ರಂದು ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ ಪ್ರಶಸ್ತಿ ಹಣಾಹಣಿಯಲ್ಲಿ ಭಾರತವು ಆ 'ಪರಿಪೂರ್ಣ ಆಟ' ಪ್ರದರ್ಶಿಸಬಹುದು ಎಂಬ ವಿಶ್ವಾಸವಿದೆ. ಮತ್ತಷ್ಟು ಸುಧಾರಣೆಗೆ ಬಯಸುತ್ತೇವೆ. ಅಲ್ಲದೇ ಕ್ರಿಕೆಟ್ ಮೈದಾನದಲ್ಲಿ ನಿರ್ದಯರಾಗಿರಲು ಮತ್ತು ಸಂಪೂರ್ಣವಾಗಿ ವಿನಮ್ರರಾಗಿರಲು ಬಯಸುತ್ತೇವೆ ಎಂದು ಹೇಳಿದರು.

ಕ್ರಿಕೆಟ್ ಕಂಫರ್ಟ್ ವಲಯದಿಂದ ಹೊರಗಿರಬೇಕು ಅನ್ನಿಸುತ್ತದೆ. ಒಂದು ವೇಳೆ ಎಲ್ಲರೂ ಕಂಫರ್ಟ್ ವಲಯದಲ್ಲಿದ್ದರೆ ನಂತರ ನಿಶ್ಚಲತೆ ಇರುತ್ತದೆ. ಹೀಗಾಗಿ ನಾನು ಅದನ್ನು ನಂಬುತ್ತೇನೆ. ನೀವು ಕೂಡಾ ಫಲಿತಾಂಶ ನೋಡಿದ್ದೀರಿ. ಆದರೆ ಡ್ರೆಸ್ಸಿಂಗ್ ರೂಮ್‌ನಲ್ಲಿರುವ ಎಲ್ಲರೂ ಕಂಫರ್ಟ್ ಝೋನ್‌ನಿಂದ ಹೊರಗಿದ್ದಾರೆ, ಅದು ಭಾರತೀಯ ಆಟಗಾರರಿಗೆ ಮುಖ್ಯವಾದುದು ಎಂದು ನಾವು ಭಾವಿಸುತ್ತೇವೆ ಎಂದರು .

ಫೈನಲ್ ಪಂದ್ಯದ ನಂತರ ಮುಂದಿನ ಚರ್ಚೆ: ಮುಂದಿನ ದಿನಗಳಲ್ಲಿ ಕೆಲವೊಂದು ಭವಿಷ್ಯದ ಯೋಜನೆಗಳ ಕುರಿತು ಹಿರಿಯ ಆಟಗಾರರೊಂದಿಗೆ ಮಾತುಕತೆ ನಡೆಸಬೇಕಾಗಿದೆ. ಆದರೆ, ಈಗ ತನ್ನ ಗಮನವೆಲ್ಲಾ ICC ಚಾಂಪಿಯನ್ ಟ್ರೋಫಿಯತ್ತ ನೆಟ್ಟಿದೆ ಎಂದು ಗೌತಮ್ ಗಂಭೀರ್ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT