ವಿರಾಟ್ ಕೊಹ್ಲಿ - ಅನುಷ್ಕಾ ಶರ್ಮಾ 
ಕ್ರಿಕೆಟ್

Champions Trophy 2025: ಆಸ್ಟ್ರೇಲಿಯಾ ವಿರುದ್ಧ ಗೆಲುವು; ಅನುಷ್ಕಾ ಶರ್ಮಾ ಜೊತೆ ವಿರಾಟ್ ಕೊಹ್ಲಿ ಸಂಭ್ರಮ!

ಅತ್ಯುತ್ತಮ ಇನಿಂಗ್ಸ್ ಆಡಿದ ವಿರಾಟ್ ಕೊಹ್ಲಿ ಮತ್ತೊಮ್ಮೆ ಚೇಸ್ ಕಿಂಗ್ ಎನಿಸಿಕೊಂಡಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಭಾರತ ಸೋತ ನಂತರ ವಿರಾಟ್ ಕೊಹ್ಲಿ ಫಾರ್ಮ್ ಬಗ್ಗೆ ವ್ಯಾಪಕ ಚರ್ಚೆಗಳು ನಡೆದಿದ್ದವು. ಚಾಂಪಿಯನ್ಸ್ ಟ್ರೋಫಿ 2025 ರಲ್ಲಿ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಶತಕ ಗಳಿಸಿ ನಾಟೌಟ್ ಆಗಿ ಉಳಿಯುವ ಮೂಲಕ ವಿರಾಟ್ ಕೊಹ್ಲಿ ಟೀಕಾಕಾರರ ಬಾಯಿ ಮುಚ್ಚಿಸಿದ್ದರು. ಇದೀಗ ಆಸ್ಟ್ರೇಲಿಯಾ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿಯೂ 98 ಎಸೆತಗಳಲ್ಲಿ 84 ರನ್ ಗಳಿಸಿ ತಂಡದ ಗೆಲುವಿಗೆ ನೆರವಾದರು. ವಿರಾಟ್ ಕೊಹ್ಲಿ ಅವರ ಇನಿಂಗ್ಸ್ ಕೇವಲ ಐದು ಬೌಂಡರಿಗಳನ್ನು ಒಳಗೊಂಡಿತ್ತು ಮತ್ತು ಯಾವುದೇ ಸಿಕ್ಸರ್ ಸಿಡಿಸಿಲ್ಲ. ವಿರಾಟ್ ಕೊಹ್ಲಿ ಅವರ ಸ್ಟ್ರೈಕ್-ರೇಟ್ 85.71 ಆಗಿತ್ತು. ಇದು ವಿರಾಟ್ ಕೊಹ್ಲಿ ಅವರು ಎಷ್ಟು ಫಿಟ್ ಆಗಿದ್ದಾರೆ ಎಂಬುದನ್ನು ತೋರಿಸಿದೆ.

ಚಾಂಪಿಯನ್ಸ್ ಟ್ರೋಫಿ 2025ರ ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ನೀಡಿದ್ದ 265 ರನ್ ಗುರಿ ಬೆನ್ನತ್ತಿದ ಭಾರತ ನಾಲ್ಕು ವಿಕೆಟ್‌ಗಳ ಗೆಲುವು ಸಾಧಿಸಿದೆ. ಅತ್ಯುತ್ತಮ ಇನಿಂಗ್ಸ್ ಆಡಿದ ವಿರಾಟ್ ಕೊಹ್ಲಿ ಮತ್ತೊಮ್ಮೆ ಚೇಸ್ ಕಿಂಗ್ ಎನಿಸಿಕೊಂಡರು. ವಿರಾಟ್ ಕೊಹ್ಲಿ ಅವರ ಪತ್ನಿ ಮತ್ತು ನಟಿ ಅನುಷ್ಕಾ ಶರ್ಮಾ ಕೂಡ ಪಂದ್ಯ ವೀಕ್ಷಿಸಲು ಸ್ಟ್ಯಾಂಡ್‌ನಲ್ಲಿದ್ದರು. ಆಸ್ಟ್ರೇಲಿಯಾ ವಿರುದ್ಧ ಭಾರತ ಗೆದ್ದ ನಂತರ, ದಂಪತಿ ವಿಶೇಷ ಕ್ಷಣವನ್ನು ಹಂಚಿಕೊಂಡರು. ಈ ಘಟನೆಯ ವಿಡಿಯೋ ವೈರಲ್ ಆಗಿದೆ.

ಈಮಧ್ಯೆ, ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್‌ನಲ್ಲಿ ಭಾರತದ ವಿರುದ್ಧ ನಾಲ್ಕು ವಿಕೆಟ್‌ಗಳ ಸೋಲು ಕಂಡಿರುವ ಆಸ್ಟ್ರೇಲಿಯಾದ ನಾಯಕ ಸ್ಟೀವ್ ಸ್ಮಿತ್, 280ಕ್ಕಿಂತ ಹೆಚ್ಚು ರನ್ ಗುರಿ ನೀಡಿದ್ದರೆ ಫಲಿತಾಂಶವು ವಿಭಿನ್ನವಾಗಿರುತ್ತಿತ್ತು ಎಂದಿದ್ದಾರೆ.

ವಿರಾಟ್ ಕೊಹ್ಲಿ ಅವರು 84 ರನ್‌ ಗಳಿಸಿದರೆ, ಕೆಎಲ್ ರಾಹುಲ್ ಔಟಾಗದೆ 42 ರನ್ ಗಳಿಸಿದರು ಮತ್ತು ಹಾರ್ದಿಕ್ ಪಾಂಡ್ಯ 24 ಎಸೆತಗಳಲ್ಲಿ 28 ರನ್ ಗಳಿಸಿ ತಂಡಕ್ಕೆ ನೆರವಾದರು. ಫೈನಲ್‌ಗೆ ತಲುಪಲು ಭಾರತ ತಂಡಕ್ಕೆ 265 ರನ್‌ಗಳ ಚೇಸ್‌ಗೆ ಅಂತಿಮ ಸ್ಪರ್ಶ ನೀಡಿದರು.

ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ ಸ್ಮಿತ್ 73 ರನ್ ಗಳಿಸಿದರೆ, ಮಾರ್ನಸ್ ಲ್ಯಾಬುಸ್ಚಾಗ್ನೆ 61 ರನ್ ಗಳಿಸಿದರು. ಭಾರತೀಯ ಬೌಲರ್‌ಗಳು ಆಸ್ಟ್ರೇಲಿಯಾವನ್ನು 49.3 ಓವರ್‌ಗಳಲ್ಲಿ 264 ಕ್ಕೆ ಆಲೌಟ್ ಮಾಡಿದರು. ಮೊಹಮ್ಮದ್ ಶಮಿ ಮೂರು ವಿಕೆಟ್ ಪಡೆದರೆ, ರವೀಂದ್ರ ಜಡೇಜಾ ಮತ್ತು ವರುಣ್ ಚಕ್ರವರ್ತಿ ತಲಾ ಎರಡು ವಿಕೆಟ್ ಪಡೆದು ಮಿಂಚಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

SCROLL FOR NEXT