RCB ಅನ್‌ಬಾಕ್ಸ್ ಕಾರ್ಯಕ್ರಮ 2025  
ಕ್ರಿಕೆಟ್

IPL 2025: ಮಾರ್ಚ್ 17ರಂದು RCB ಅನ್‌ಬಾಕ್ಸ್ ಈವೆಂಟ್; ಹೊಸ ಜೆರ್ಸಿ ಬಿಡುಗಡೆ ಸಾಧ್ಯತೆ!

ಅಭಿಮಾನಿಗಳ ನೆಚ್ಚಿನ ಆರ್‌ಸಿಬಿ ಇದೀಗ ಐಪಿಎಲ್ ಆರಂಭಕ್ಕೂ ಮುನ್ನ ಅದ್ಧೂರಿಯಾಗಿ ಕಾರ್ಯಕ್ರಮವನ್ನು ಆಯೋಜಿಸಲು ಮುಂದಾಗಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಬಹು ನಿರೀಕ್ಷಿತ RCB ಅನ್‌ಬಾಕ್ಸ್ 2025 ಈವೆಂಟ್ ಅನ್ನು ಆಯೋಜಿಸಲು ಸಜ್ಜಾಗಿದೆ. ಪ್ರತಿವರ್ಷ ಸಂಪ್ರದಾಯವಾಗಿ ಮಾರ್ಪಟ್ಟಿರುವ ಈ ಈವೆಂಟ್, ಅಭಿಮಾನಿಗಳು ಮತ್ತು ಆಟಗಾರರ ನಡುವೆ ಸೇತುವೆಯಾಗಿ ಕೆಲಸ ಮಾಡುತ್ತದೆ. ವಿಶೇಷ ಆಟಗಾರರ ಪರಿಚಯಗಳು, ಜೆರ್ಸಿ ಬಿಡುಗಡೆ ಮತ್ತು ವಿಶೇಷ ಪ್ರದರ್ಶನಗಳನ್ನು ಒಳಗೊಂಡಿರುತ್ತದೆ.

ಅನ್‌ಬಾಕ್ಸ್ ಈವೆಂಟ್ ಐಪಿಎಲ್‌ನಲ್ಲಿ ಅತ್ಯಂತ ಆಕರ್ಷಕವಾದ ಆಫ್-ಫೀಲ್ಡ್ ಕಾರ್ಯಕ್ರಮಗಳಲ್ಲಿ ಒಂದಾಗಿ ಬೆಳೆದಿದೆ. RCB ಅನ್‌ಬಾಕ್ಸ್ 2025 ಈವೆಂಟ್ ಮಾರ್ಚ್ 17 ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.

ಕಾರ್ಯಕ್ರಮದ ಅಧಿಕೃತ ಆರಂಭದ ಸಮಯವನ್ನು ಇನ್ನೂ ದೃಢಪಡಿಸಿಲ್ಲ. ಆದರೆ, ಹಿಂದಿನ ಕಾರ್ಯಕ್ರಮಗಳ ಪ್ರಕಾರ ಸಂಜೆ 4 ಗಂಟೆಯ ನಂತರ ಪ್ರಾರಂಭವಾಗುವ ನಿರೀಕ್ಷೆಯಿದೆ. ಅಭಿಮಾನಿಗಳ ನೆಚ್ಚಿನ ಆರ್‌ಸಿಬಿ ಇದೀಗ ಐಪಿಎಲ್ ಆರಂಭಕ್ಕೂ ಮುನ್ನ ಅದ್ಧೂರಿಯಾಗಿ ಕಾರ್ಯಕ್ರಮವನ್ನು ಆಯೋಜಿಸಲು ಮುಂದಾಗಿದೆ.

ಮಾರ್ಚ್ 22 ರಿಂದ ಐಪಿಎಲ್ 2025 ಆರಂಭವಾಗಲಿದ್ದು, ಅನ್‌ಬಾಕ್ಸ್ ಕಾರ್ಯಕ್ರಮವು ಹೊಸ ಆವೃತ್ತಿಗೆ ನಾಂದಿ ಹಾಡಲಿದೆ.

ಈ ಈವೆಂಟ್‌ನ ನೇರಪ್ರಸಾರ ವೀಕ್ಷಿಸಲು ಅಭಿಮಾನಿಗಳು ಅಧಿಕೃತ RCB ವೆಬ್‌ಸೈಟ್ ಮತ್ತು ಮೊಬೈಲ್ ಅಪ್ಲಿಕೇಶನ್ ಮೂಲಕ ಟಿಕೆಟ್‌ಗಳನ್ನು ಖರೀದಿಸಬಹುದು. ಕಳೆದ ವರ್ಷ ಟಿಕೆಟ್ ಬೆಲೆಯು 800 ರಿಂದ 4000 ರೂಪಾಯಿವರೆಗೆ ಇತ್ತು. ಪ್ರತಿ ಬಳಕೆದಾರರು ಆರು ಟಿಕೆಟ್‌ಗಳನ್ನು ಖರೀದಿಸಬಹುದಾಗಿದೆ.

ಈ ಬಾರಿ ಆರ್‌ಸಿಬಿ ತಂಡದಲ್ಲಿ ಹೆಚ್ಚಿನ ಬದಲಾವಣೆ ಮಾಡಿದ್ದು, ಫಾಫ್ ಡುಪ್ಲೆಸಿಸ್ ಅವರನ್ನು ತಂಡದಿಂದ ಕೈಬಿಟ್ಟ ಬಳಿಕ ರಜತ್ ಪಾಟೀದಾರ್ ಅವರಿಗೆ ತಂಡವನ್ನು ಮುನ್ನಡೆಸುವ ಜವಾಬ್ದಾರಿಯನ್ನು ನೀಡಲಾಗಿದೆ. ಅಲ್ಲದೆ, ಹೊಸ ಹೊಸ ಆಟಗಾರರು ತಂಡಕ್ಕೆ ಬಂದಿದ್ದು, ಈ ಬಾರಿ ಬೇಡಿಕೆ ಹೆಚ್ಚಾಗಿರುತ್ತದೆ ಎಂದು ನಿರೀಕ್ಷಿಸಲಾಗಿದೆ.

ಆರ್‌ಸಿಬಿ ಅನ್‌ಬಾಕ್ಸ್ 2025 ಕಾರ್ಯಕ್ರಮದಲ್ಲಿ ಹೊಸ ಜೆರ್ಸಿಯ ಅನಾವರಣ ಮಾಡುವ ನಿರೀಕ್ಷೆಯಿದೆ. ಆರ್‌ಸಿಬಿ ತಮ್ಮ ಹಿಂದಿನ ಕಪ್ಪು-ಕೆಂಪು ಬಣ್ಣದ ವಿನ್ಯಾಸದ ಜೆರ್ಸಿಗೆ ಮರಳುತ್ತಿದೆ ಎಂದು ವರದಿಗಳು ಸೂಚಿಸಿವೆ. ವಿರಾಟ್ ಕೊಹ್ಲಿ ಆರ್‌ಸಿಬಿ ಜೆರ್ಸಿಯಲ್ಲಿರುವ ಫೋಟೊ ವೈರಲ್ ಆಗಿದ್ದು, ಈ ಬಾರಿ ಅದೇ ಜೆರ್ಸಿ ಅನಾವರಣಗೊಳ್ಳಲಿದೆ ಎನ್ನಲಾಗಿದೆ.

ಆರ್‌ಸಿಬಿ ಆಟಗಾರರು: ವಿರಾಟ್ ಕೊಹ್ಲಿ, ರಜತ್ ಪಾಟಿದಾರ್ (ನಾಯಕ), ಯಶ್ ದಯಾಳ್, ಲಿಯಾಮ್ ಲಿವಿಂಗ್‌ಸ್ಟೋನ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಜೋಶ್ ಹೇಜಲ್‌ವುಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ದೇವದತ್ ಪಡಿಕ್ಕಲ್, ಲುಂಗಿ ಎನ್‌ಗಿಡಿ ಸೇರಿದಂತೆ ಇತರರು ಇದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT