ಸುನಿಲ್ ಗವಾಸ್ಕರ್ - ರೋಹಿತ್ ಶರ್ಮಾ 
ಕ್ರಿಕೆಟ್

'25-30 ರನ್ ಗಳಿಸಿದ್ದಕ್ಕೆ ನೀವು ಸಂತೋಷಪಡಬಾರದು': ರೋಹಿತ್ ಶರ್ಮಾ ಸಮರ್ಥನೆಗೆ ಸುನೀಲ್ ಗವಾಸ್ಕರ್ ಕಿಡಿ

2025ರ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಜಯಗಳಿಸಿದ ನಂತರ, ಮುಖ್ಯ ಕೋಚ್ ಗೌತಮ್ ಗಂಭೀರ್, ರೋಹಿತ್ ಅವರ ಬ್ಯಾಟಿಂಗ್ ವೈಖರಿಯನ್ನು ಸಮರ್ಥಿಸಿಕೊಂಡರು.

ಐಸಿಸಿ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್‌ನಲ್ಲಿ ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು ಸೋಲಿಸಿ ಫೈನಲ್‌ಗೆ ಲಗ್ಗೆ ಇಟ್ಟಿರುವ ಭಾರತ ಮಾರ್ಚ್ 9ರಂದು ನಡೆಯಲಿರುವ ಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಸೆಣಸಲಿದೆ. ಆಡಿರುವ ಎಲ್ಲ ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೂ ಕೆಲ ಆಟಗಾರರು ರನ್ ಗಳಿಸಲು ಹೆಣಗಾಡುತ್ತಿರುವುದು ಇದೀಗ ಚರ್ಚೆಗೆ ಗ್ರಾಸವಾಗಿದೆ. ಟೀಂ ಇಂಡಿಯಾದ ಮಾಜಿ ಆಟಗಾರ ಸುನೀಲ್ ಗವಾಸ್ಕರ್, ರೋಹಿತ್ ಶರ್ಮಾ ಅವರು ತಂಡಕ್ಕೆ ತ್ವರಿತ ಆರಂಭ ನೀಡುವತ್ತ ಗಮನಹರಿಸುವ ಬದಲು ಹೆಚ್ಚು ಸಮಯ ಬ್ಯಾಟಿಂಗ್ ಮಾಡಬೇಕು ಎಂದು ಸಲಹೆ ನೀಡಿದ್ದಾರೆ.

2025ರ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಜಯಗಳಿಸಿದ ನಂತರ, ಮುಖ್ಯ ಕೋಚ್ ಗೌತಮ್ ಗಂಭೀರ್, ರೋಹಿತ್ ಅವರ ಬ್ಯಾಟಿಂಗ್ ವೈಖರಿಯನ್ನು ಸಮರ್ಥಿಸಿಕೊಂಡರು. ಸ್ಟಾರ್ ಬ್ಯಾಟರ್ ಅನ್ನು ಅವರು ಗಳಿಸುವ ರನ್ ಮೇಲೆ ಅಳೆಯಲು ಆಗುವುದಿಲ್ಲ, ಅವರು ಆಟದ ಮೇಲೆ ಬೀರುವ ಇಂಪ್ಯಾಕ್ಟ್ ಮೇಲೆ ನಿರ್ಣಯಿಸಲಾಗುತ್ತದೆ ಎಂದಿದ್ದರು. ರೋಹಿತ್‌ನಂತಹ ಬ್ಯಾಟ್ಸ್‌ಮನ್ 25 ರಿಂದ 30 ಓವರ್‌ಗಳ ಕಾಲ ಕ್ರೀಸ್‌ನಲ್ಲಿ ಇದ್ದರೆ, ಅವರು ಎದುರಾಳಿಗಳಿಂದ ಪಂದ್ಯವನ್ನು ಕಸಿದುಕೊಳ್ಳುತ್ತಾರೆ. ಇದನ್ನು ಪ್ರತಿಯೊಬ್ಬ ಆಟಗಾರರು ತಮ್ಮ ಆಟದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸುನೀಲ್ ಗವಾಸ್ಕರ್ ತಿಳಿಸಿದ್ದಾರೆ.

'ಕಳೆದ ಎರಡು ವರ್ಷಗಳಿಂದ ಅವರು ಇದೇ ವಿಧಾನವನ್ನು ಅನುಸರಿಸುತ್ತಿದ್ದು, ಭಾರತದಲ್ಲಿ ನಡೆದ ವಿಶ್ವಕಪ್ ವೇಳೆ ಇದು ಪ್ರಾರಂಭವಾಯಿತು. ಅವರು ಆ ಸೂತ್ರಕ್ಕೆ ಬದ್ಧರಾಗಿದ್ದಾರೆ. ಅವರು ಸ್ವಲ್ಪ ಯಶಸ್ಸನ್ನು ಕಂಡಿದ್ದಾರೆ. ಆದರೂ, ಇದು ಅವರ ಪ್ರತಿಭೆಗೆ ಸೂಕ್ತವಾದುದಲ್ಲ. ಅವರು ಆಟದಲ್ಲಿ ಇತರ ಅನೇಕರು ಹೊಂದಿರದ ಭರ್ಜರಿ ಬ್ಯಾಟಿಂಗ್ ಮಾಡುವ ಅರ್ಹತೆಯನ್ನು ಹೊಂದಿದ್ದಾರೆ. ಅವರು ಪ್ರತಿಭಾನ್ವಿತ ಆಟಗಾರ' ಎಂದು ಗವಾಸ್ಕರ್ ಇಂಡಿಯಾ ಟುಡೇಗೆ ತಿಳಿಸಿದ್ದಾರೆ.

'ಆದ್ದರಿಂದ, ನಾನು ಪ್ರೇಕ್ಷಕರನ್ನು ಮೆಚ್ಚಿಸುವ ದೃಷ್ಟಿಕೋನದಿಂದ ಅಥವಾ ತಂಡದ ದೃಷ್ಟಿಕೋನದಿಂದ ಮಾತ್ರ ಮಾತನಾಡುತ್ತಿಲ್ಲ. ಅವರು 25 ಓವರ್‌ಗಳಾದರೂ ಬ್ಯಾಟಿಂಗ್ ಮಾಡಿದರೆ ಭಾರತ ಸುಮಾರು 180-200 ರನ್ ಗಳಿಸುತ್ತದೆ. ಆ ಹೊತ್ತಿಗೆ ಅವರು ಕೇವಲ ಒಂದೆರಡು ವಿಕೆಟ್‌ಗಳನ್ನು ಕಳೆದುಕೊಂಡಿದ್ದರೆ ಊಹಿಸಿ; ಅವರು ಏನು ಮಾಡಬಹುದು ಎಂದು ಯೋಚಿಸಿ. ಟೀಂ ಇಂಡಿಯಾ 350 ಅಥವಾ ಅದಕ್ಕಿಂತ ಹೆಚ್ಚಿನ ರನ್ ಗಳಿಸಬಹುದು' ಎಂದರು.

ರೋಹಿತ್ ಶರ್ಮಾ ಅವರು ಕೇವಲ 25-30 ರನ್ ಗಳಿಸಿದ್ದಕ್ಕೆ ಸಂತೋಷಪಡಬಾರದು. ಅವರಿಂದ ತಂಡಕ್ಕೆ ಪ್ರಭಾವವು ಇನ್ನೂ ಹೆಚ್ಚಾಗಿರಬೇಕು. ಅವರು ಸ್ವಲ್ಪ ಯೋಚಿಸಬೇಕು. ಆಕ್ರಮಣಕಾರಿಯಾಗಿ ಬ್ಯಾಟಿಂಗ್ ಮಾಡುವುದು ಉತ್ತಮ ವಿಷಯ. ಆದರೆ, 25-30 ಓವರ್‌ಗಳವರೆಗೆ ಬ್ಯಾಟಿಂಗ್ ಮಾಡುವತ್ತ ಗಮನಹರಿಸಬೇಕು. ಅವರು ಹಾಗೆ ಮಾಡಿದರೆ, ಅವರು ಎದುರಾಳಿಗಳಿಂದ ಪಂದ್ಯವನ್ನು ಕಸಿದುಕೊಳ್ಳುತ್ತಾರೆ ಎಂದು ಗವಾಸ್ಕರ್ ಹೇಳಿದರು.

'ಆ ರೀತಿಯ ಆಟವು ಪಂದ್ಯ ಗೆಲ್ಲಲು ಸಹಕಾರಿಯಾಗಿರುತ್ತದೆ. ಒಬ್ಬ ಬ್ಯಾಟ್ಸ್‌ಮನ್ ಆಗಿ, ನೀವು 25-30 ರನ್ ಗಳಿಸಿದ್ದಕ್ಕೆ ಸಂತೋಷವಾಗಿದ್ದೀರಾ? ನೀವು ಸಂತೋಷಪಡಬಾರದು! ಹಾಗಾಗಿ ನಾನು ಅವರಿಗೆ ಹೇಳುವುದು ಅದನ್ನೇ: ನೀವು ಕೇವಲ ಏಳು, ಎಂಟು ಅಥವಾ ಒಂಬತ್ತು ಓವರ್‌ಗಳ ಬದಲಿಗೆ 25 ಓವರ್‌ಗಳಿಗೆ ಬ್ಯಾಟಿಂಗ್ ಮಾಡಿದರೆ ತಂಡದ ಮೇಲೆ ನಿಮ್ಮ ಪ್ರಭಾವ ಇನ್ನೂ ಹೆಚ್ಚಾಗುತ್ತದೆ' ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT