ರೋಹಿತ್ ಶರ್ಮಾ 
ಕ್ರಿಕೆಟ್

Champions Trophy 2025: ಧೋನಿ, ಪಾಂಟಿಂಗ್ ಇರುವ Elite group ಗೆ Rohit Sharma ಸೇರ್ಪಡೆ!

ಈ ಪಂದ್ಯದಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿ, 83 ಎಸೆತಗಳಲ್ಲಿ 3 ಸಿಕ್ಸರ್ ಮತ್ತು 7 ಬೌಂಡರಿಗಳ ನೆರವಿನಿಂದ 76 ರನ್ ಕಲೆ ಹಾಕಿದರು.

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ತಂಡದ ಗೆಲುವಿನಲ್ಲಿ ಮಹತ್ತರ ಪಾತ್ರ ವಹಿಸಿದ ನಾಯಕ ರೋಹಿತ್ ಶರ್ಮಾ ಅಪರೂಪದ ದಾಖಲೆಯ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.

ನಿನ್ನೆ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲೆಂಡ್ ತಂಡವನ್ನು 4 ವಿಕೆಟ್ ಗಳ ಅಂತರದಲ್ಲಿ ಮಣಿಸಿ 2ನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿ ಪ್ರಶಸ್ತಿಗೆ ಮುತ್ತಿಟ್ಟಿತು. ಈ ಪಂದ್ಯದಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿ, 83 ಎಸೆತಗಳಲ್ಲಿ 3 ಸಿಕ್ಸರ್ ಮತ್ತು 7 ಬೌಂಡರಿಗಳ ನೆರವಿನಿಂದ 76 ರನ್ ಕಲೆ ಹಾಕಿದರು.

ನಿಧಾನಗತಿಯ ಪಿಚ್ ನಲ್ಲಿ ಭಾರತದ ದಿಢೀರ್ ಕುಸಿತವನ್ನು ತಡೆಯಲು ಸಮಯೋಚಿತ ಬ್ಯಾಟಿಂಗ್ ನಿರ್ವಹಿಸಿ ತಂಡಕ್ಕೆ ನೆರವಾದ ಕಾರಣಕ್ಕೆ ರೋಹಿತ್ ಶರ್ಮಾ ಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ನೀಡಲಾಯಿತು.

ಅಪರೂಪದ ದಾಖಲೆ, ಎಲೈಟ್ ಗ್ರೂಪ್ ಸೇರ್ಪಡೆ

ಇನ್ನು ಪಂದ್ಯಶ್ರೇಷ್ಠ ಪ್ರಶಸ್ತಿ ಮೂಲಕ ರೋಹಿತ್ ಶರ್ಮಾ ತಮ್ಮ ಹೆಸರಿಗೆ ಅಪರೂಪದ ದಾಖಲೆ ಬರೆದುಕೊಂಡಿದ್ದು, ಐಸಿಸಿಯ ಟೂರ್ನಿಯ ಫೈನಲ್ ಪಂದ್ಯದಲ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಭಾಜನರಾದ 4ನೇ ನಾಯಕ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

ಈ ಹಿಂದೆ 1975ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ವೆಸ್ಟ್ ಇಂಡೀಸ್ ತಂಡದ ಕ್ಲೈವ್ ಲಾಯ್ಡ್, 2003 ಏಕದಿನ ವಿಶ್ವಕಪ್ ಟೂರ್ನಿಯ ಫೈನಲ್ ನಲ್ಲಿ ಆಸ್ಟ್ರೇಲಿಯಾದ ರಿಕ್ಕಿ ಪಾಂಟಿಂಗ್, 2011ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಅಂದಿನ ಭಾರತ ತಂಡದ ನಾಯಕ ಎಂಎಸ್ ಧೋನಿ ಮಾತ್ರ ಫೈನಲ್ ನಲ್ಲಿ ಪಂದ್ಯಶ್ರೇಷ್ಛ ಪ್ರಶಸ್ತಿಗೆ ಭಙಾಜನರಾಗಿದ್ದರು. ಇದೀಗ ಈ ಪಟ್ಟಿಗೆ ರೋಹಿತ್ ಶರ್ಮಾ ಪಾತ್ರರಾಗಿದ್ದಾರೆ.

Captains with POTM award in Men’s ICC tournament finals

  • Clive Lloyd (West Indies, CWC 1975)

  • Ricky Ponting (Australia, CWC 2003)

  • MS Dhoni (India, CWC 2011)

  • Rohit Sharma (India, CT 2025)

14 ವರ್ಷಗಳ ಬಳಿಕ ಧೋನಿ ದಾಖಲೆ ಸರಿಗಟ್ಟಿದ ರೋಹಿತ್ ಶರ್ಮಾ

ಇನ್ನು ಐಸಿಸಿ ಟೂರ್ನಿಯ ಫೈನಲ್ ನಲ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಗೆಲ್ಲುವ ಮೂಲಕ ರೋಹಿತ್ ಶರ್ಮಾ 14 ವರ್ಷಗಳ ಹಿಂದಿನ ಎಂಎಸ್ ಧೋನಿ ದಾಖಲೆಯನ್ನು ಸರಿಗಟ್ಟಿದ್ದಾರೆ. 2011ರಲ್ಲಿ ಮುಂಬೈನಲ್ಲಿ ನಡೆದ ಪಂದ್ಯದಲ್ಲಿ ಅಂದಿನ ಭಾರತ ತಂಡದ ನಾಯಕ ಎಂಎಸ್ ಧೋನಿ ಅಜೇಯ 91 ರನ್ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದ್ದರು. ಹೀಗಾಗಿ ಅಂದು ಧೋನಿಗೆ ಪಂದ್ಯಶ್ರೇಷ್ಠ ಪ್ರಶಸ್ತಿ ನೀಡಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT