ಪ್ರಶಸ್ತಿ ಗೆದ್ದ ಭಾರತ ತಂಡ 
ಕ್ರಿಕೆಟ್

Champions Trophy 2025 'ಪ್ರಶಸ್ತಿ ಪ್ರದಾನದಲ್ಲೂ ನಮಗೆ ಅಪಮಾನ, CEO ಇದ್ದರೂ ಕರೆದಿಲ್ಲ': PCB ಅಳಲು, ICC ಸ್ಪಷ್ಟನೆ ಹೊರತಾಗಿಯೂ ದೂರು!

ಇಷ್ಟು ದಿನ ಭಾರತ ತಂಡಕ್ಕೆ ಒಂದೇ ಮೈದಾನದಲ್ಲಿ ಆಡುವ ಅಡ್ವಾಂಟೇಜ್ ಸಿಗುತ್ತಿದೆ ಎಂದು ಕ್ಯಾತೆ ತೆಗೆಯುತ್ತಿದ್ದ ಪಾಕಿಸ್ತಾನ ಇದೀಗ ಐಸಿಸಿ ಚಾಂಪಿಯನ್ಸ್ ಟ್ರೋಫಿ ಪ್ರಶಸ್ತಿ ಸಮಾರಂಭದ ಕುರಿತು ಅಸಮಾಧಾನ ಹೊರಹಾಕಿದೆ.

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿ ಮುಕ್ತಾಯವಾಗಿ 48 ಗಂಟೆಗಳೇ ಕಳೆದರೂ ಅದರ ಕುರಿತಾದ ಪಾಕಿಸ್ತಾನ ಕ್ರಿಕೆಟ್ ಬೋರ್ಡ್ ಅಳಲು ಮಾತ್ರ ಇನ್ನೂ ನಿಲ್ಲುವಂತೆ ಕಾಣುತ್ತಿಲ್ಲ.

ಇಷ್ಟು ದಿನ ಭಾರತ ತಂಡಕ್ಕೆ ಒಂದೇ ಮೈದಾನದಲ್ಲಿ ಆಡುವ ಅಡ್ವಾಂಟೇಜ್ ಸಿಗುತ್ತಿದೆ ಎಂದು ಕ್ಯಾತೆ ತೆಗೆಯುತ್ತಿದ್ದ ಪಾಕಿಸ್ತಾನ ಇದೀಗ ಐಸಿಸಿ ಚಾಂಪಿಯನ್ಸ್ ಟ್ರೋಫಿ ಪ್ರಶಸ್ತಿ ಸಮಾರಂಭದ ಕುರಿತು ಅಸಮಾಧಾನ ಹೊರಹಾಕಿದೆ.

ಚಾಂಪಿಯನ್ಸ್ ಟ್ರೋಫಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹೋಸ್ಟ್ ಆಗಿದ್ದರೂ ಪಾಕಿಸ್ತಾನ ಒಬ್ಬೇ ಒಬ್ಬ ಪ್ರತಿನಿಧಿಯೂ ವೇದಿಕೆಯಲ್ಲಿ ಭಾಗಿಯಾಗಿರಲಿಲ್ಲ. ಐಸಿಸಿ ಅಧ್ಯಕ್ಷ ಜಯ್ ಶಾ, ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ, ಕಾರ್ಯದರ್ಶಿ ದೇವಜಿತ್ ಸೈಕಿಯಾ ಆಟಗಾರರಿಗೆ ಪದಕ, ಟ್ರೋಫಿ ಮತ್ತು ಜಾಕೆಟ್‌ಗಳನ್ನು ಹಸ್ತಾಂತರಿಸಿದರು.

ಸಿಇಒ ಇದ್ದರೂ ವೇದಿಕೆ ಮೇಲೆ ಕರೆದಿಲ್ಲ..

ಇನ್ನು ಇದೇ ವಿಚಾರವಾಗಿ ಪಿಸಿಪಿ ಕ್ಯಾತೆ ತೆಗೆದಿದ್ದು, ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯ ನಿರ್ದೇಶಕರೂ ಆಗಿದ್ದ ಪಾಕ್‌ ಕ್ರಿಕೆಟ್‌ ಮಂಡಳಿಯ ಸಿಇಒ ಸುಮೈರ್ ಅಹ್ಮದ್ ಫೈನಲ್‌ ಪಂದ್ಯದ ಸಂದರ್ಭದಲ್ಲಿದ್ದರೂ, ಅವರನ್ನು ಪ್ರಶಸ್ತಿ ವಿತರಣಾ ಸಮಾರಂಭಕ್ಕೆ ಆಹ್ವಾನಿಸಿರಲಿಲ್ಲ ಎಂದು ಪಿಸಿಬಿ ಆರೋಪಿಸಿದೆ. ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಕ್ವಿ ಫೆಡರಲ್ ಸಚಿವರಾಗಿರುವುದರಿಂದ ಬೇರೆ ಕೆಲಸಗಳಿಂದಾಗಿ ದುಬೈಗೆ ಹೋಗಿರಲಿಲ್ಲ. ಆದರೆ ಸಿಇಒ ಸುಮೈರ್‌ ಅಹ್ಮದ್ ಪಾಕಿಸ್ತಾನದ ಪ್ರತಿನಿಧಿಯಾಗಿ ಫೈನಲ್ ಪಂದ್ಯದಲ್ಲಿ ಹಾಜರಿದ್ದರು. ಹೀಗಿದ್ದರೂ ವೇದಿಕೆಗೆ ಯಾಕೆ ಆಹ್ವಾನಿಸಿಲ್ಲ ಎಂದು ಪಿಸಿಬಿ ಪ್ರಶ್ನಿಸಿದೆ.

ಪಿಸಿಬಿ ದೂರು

ಚಾಂಪಿಯನ್ಸ್ ಟ್ರೋಫಿ ಪ್ರಶಸ್ತಿ ವಿತರಣಾ ವೇದಿಕೆಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ)ಯ ಪ್ರತಿನಿಧಿಗಳಿಗೆ ಐಸಿಸಿ ಆಹ್ವಾನ ನೀಡಿಲ್ಲ ಎಂದು ಆತಿಥೇಯ ಪಾಕಿಸ್ತಾನ ಅಸಮಾಧಾನ ಹೊರಹಾಕಿದೆ. ಸಮಾರೋಪ ಕಾರ್ಯಕ್ರಮ ನಿರ್ವಹಣೆಯ ಜವಾಬ್ದಾರಿ ಹೊತ್ತಿದ್ದ ಐಸಿಸಿ ಪ್ರತಿನಿಧಿಗಳೊಂದಿಗೆ ಪಿಸಿಬಿ ಸಿಇಒ ಸುಮೈರ್ ಅಹ್ಮದ್ ಅವರಿಗೆ ಸಮರ್ಪಕವಾಗಿ ಸಂವಹನ ನಡೆಸಲು ಅಸಾಧ್ಯವಾಗಿರಬಹುದು. ಹೀಗಾಗಿ ಸಮಾರಂಭದಲ್ಲಿ ಭಾಗವಹಿಸುವ ಅವಕಾಶ ತಪ್ಪಿರಬಹುದು ಎಂದು ಅಂದಾಜಿಸಲಾಗಿದೆ. ಈ ಕುರಿತು ಅಂತಾರಾಷ್ಟ್ರೀಯ ಕ್ರಿಕೆಟ್‌ ಮಂಡಳಿಯನ್ನು ಪ್ರಶ್ನಿಸಲು ಮತ್ತು ದೂರು ನೀಡಲು ಪಿಸಿಬಿ ಮುಂದಾಗಿದೆ ಎನ್ನಲಾಗಿದೆ.

ಅಂದಹಾಗೆ 1996ರ ವಿಶ್ವಕಪ್‌ ಬಳಿಕ ಪಾಕಿಸ್ತಾನಕ್ಕೆ ಇದೇ ಮೊದಲ ಬಾರಿಗೆ ಐಸಿಸಿ ಟೂರ್ನಿ ಆಯೋಜಿಸುವ ಅವಕಾಶ ಸಿಕ್ಕಿತ್ತು. ಆದರೆ ಭದ್ರತೆಯ ಕಾರಣ ಮುಂದಿಟ್ಟು ಟೀಂ ಇಂಡಿಯಾ ಪಾಕಿಸ್ತಾನ ಪ್ರವೇಶಿಸಲು ಒಪ್ಪಿರಲಿಲ್ಲ. ಹೀಗಾಗಿ ಭಾರತದ ಪಂದ್ಯಗಗಳು ದುಬೈನಲ್ಲಿ ಆಯೋಜನೆಗೊಂಡಿದ್ದವು.

ಭಾರತ ಫೈನಲ್ ಪ್ರವೇಶಿಸಿದ್ದರಿಂದ ಅಂತಿಮವಾಗಿ, ಫೈನಲ್‌ ಪಂದ್ಯವೂ ದುಬೈನಲ್ಲೇ ನಡೆಯಿತು. ಇದು ಪಾಕ್‌ ಕ್ರಿಕೆಟ್‌ ಮಂಡಳಿಗೆ ಬಹುದೊಡ್ಡ ಹಿನ್ನಡೆಯಾಗಿ ಪರಿಣಮಿಸಿತು. ಫೈನಲ್‌ ಪಂದ್ಯದಲ್ಲಿ ನ್ಯೂಜಿಲೆಂಡ್‌ ತಂಡವನ್ನು ಮಣಿಸುವ ಮೂಲಕ ಭಾರತ 9ನೇ ಆವೃತ್ತಿಯ ಚಾಂಪಿಯನ್ಸ್‌ ಟ್ರೋಫಿ ಗೆದ್ದುಕೊಂಡಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT