ನ್ಯೂಜಿಲೆಂಡ್ ವಿರುದ್ಧ ಪಂದ್ಯ ಗೆದ್ದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಟ್ರೋಫಿ ಮರೆತು ಎದ್ದ ರೋಹಿತ್ ಶರ್ಮಾ 
ಕ್ರಿಕೆಟ್

Champions Trophy 2025: ಫೋನ್, ಪಾಸ್‌ಪೋರ್ಟ್ ಅಷ್ಟೇ ಅಲ್ಲ.. ಈ ಬಾರಿ ಟ್ರೋಫಿಯನ್ನೇ ಮರೆತು ಹೊರಟ ರೋಹಿತ್ ಶರ್ಮಾ!

ಮರೆವಿನ ಸ್ವಭಾವದವರಾಗಿರುವ ರೋಹಿತ್ ಕೆಲವೊಮ್ಮೆ ತನ್ನ ಪಾಸ್‌ಪೋರ್ಟ್ ಮತ್ತು ಫೋನ್‌ ಅನ್ನು ತಂಡದ ಬಸ್ ಮತ್ತು ಹೋಟೆಲ್‌ಗಳಲ್ಲಿಯೇ ಬಿಟ್ಟು ಹೊರಡುತ್ತಾರೆ.

ರೋಹಿತ್ ಶರ್ಮಾ ತಮ್ಮ ಪಾಸ್‌ಪೋರ್ಟ್, ಫೋನ್‌ ಮತ್ತು ಇತರ ವಸ್ತುಗಳನ್ನು ಆಗ್ಗಾಗ್ಗೆ ಮರೆತು ಬರುತ್ತಿರುತ್ತಾರೆ. ಆದರೆ, ಭಾನುವಾರ ದುಬೈನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಫೈನಲ್ ನಂತರದ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದ ವೇಳೆ ಮಾಧ್ಯಮ ಕೋಣೆಯಲ್ಲಿಯೇ ಟ್ರೋಫಿಯನ್ನು ಮರೆತಿದ್ದು ವರದಿಯಾಗಿದೆ. ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್‌ನಲ್ಲಿ ನ್ಯೂಜಿಲೆಂಡ್ ಅನ್ನು ಸೋಲಿಸಿದ ನಂತರ ರೋಹಿತ್ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದರು. ಅವರ ನಿವೃತ್ತಿ ಸೇರಿದಂತೆ ಕೆಲವು ಕುತೂಹಲಕಾರಿ ವಿಷಯಗಳನ್ನು ಮಾಧ್ಯಮಗಳೊಂದಿಗೆ ಹಂಚಿಕೊಂಡರು. ಆದರೆ, ಪತ್ರಿಕಾಗೋಷ್ಠಿ ಮುಗಿದ ನಂತರ, ರೋಹಿತ್ ತಮ್ಮೊಂದಿಗೆ ಟ್ರೋಫಿಯನ್ನು ತರಲು ಮರೆತರು. ಸಹಾಯಕ ಸಿಬ್ಬಂದಿಯ ಸದಸ್ಯರೊಬ್ಬರು ಟ್ರೋಫಿಯನ್ನು ಎತ್ತಿಕೊಂಡರು ಮತ್ತು ತಾವು ಬಿಟ್ಟುಹೋಗುತ್ತಿರುವ ಕುರಿತು ರೋಹಿತ್‌ಗೆ ನೆನಪಿಸಿದ್ದಾರೆ.

ಮರೆವಿನ ಸ್ವಭಾವದವರಾಗಿರುವ ರೋಹಿತ್ ಕೆಲವೊಮ್ಮೆ ತನ್ನ ಪಾಸ್‌ಪೋರ್ಟ್ ಮತ್ತು ಫೋನ್‌ ಅನ್ನು ತಂಡದ ಬಸ್ ಮತ್ತು ಹೋಟೆಲ್‌ಗಳಲ್ಲಿಯೇ ಬಿಟ್ಟು ಹೊರಡುತ್ತಾರೆ. ಆದರೆ, ತಂಡ ಗೆದ್ದ ಪ್ರತಿಷ್ಠಿತ ಚಾಂಪಿಯನ್ಸ್ ಟ್ರೋಫಿಯನ್ನು ಸಹ ಮರೆಯುತ್ತಾರೆಂದು ಅಭಿಮಾನಿಗಳು ನಿರೀಕ್ಷಿಸಿರಲಿಲ್ಲ.

ಭಾರತದ ಮುಂದಿನ ಪ್ರಮುಖ ಏಕದಿನ ಪಂದ್ಯಾವಳಿ 2027ರ ಏಕದಿನ ವಿಶ್ವಕಪ್ ಆಗಿರುವುದರಿಂದ, ರೋಹಿತ್ ನಿವೃತ್ತಿ ಘೋಷಿಸಬಹುದು ಎಂಬ ವದಂತಿಗಳು ಹಬ್ಬಿದ್ದವು. ಈ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ನಾನು ಈ ಸ್ವರೂಪದಿಂದ ನಿವೃತ್ತಿ ಹೊಂದುವುದಿಲ್ಲ. ಮುಂದೆ ದಯವಿಟ್ಟು ಈ ಬಗ್ಗೆ ಯಾವುದೇ ವದಂತಿಗಳನ್ನು ಹರಡಬೇಡಿ. ಭವಿಷ್ಯದ ಬಗ್ಗೆ ಯಾವುದೇ ಯೋಜನೆ ಇಲ್ಲ, ಏನು ನಡೆಯುತ್ತಿದೆಯೋ ಅದು ಹಾಗೆಯೇ ಮುಂದುವರಿಯುತ್ತದೆ' ಎಂದು ರೋಹಿತ್ ಹೇಳಿದ್ದಾರೆ

ಪವರ್ ಪ್ಲೇನಲ್ಲಿ ಆಕ್ರಮಣಕಾರಿಯಾಗಿ ಆಡುವ ನಿರ್ಧಾರವನ್ನು ನಿರ್ದಿಷ್ಟ ಗುರಿಯನ್ನು ಗಮನದಲ್ಲಿಟ್ಟುಕೊಂಡು ತೆಗೆದುಕೊಳ್ಳಲಾಯಿತು ಎಂದು ರೋಹಿತ್ ಹೇಳಿದರು.

ಮೊದಲ 10 ಓವರ್‌ಗಳಲ್ಲಿ 49 ರನ್ ಗಳಿಸಿ ಅಂತಿಮವಾಗಿ 83 ಎಸೆತಗಳಲ್ಲಿ 76 ರನ್ ಗಳಿಸಿ ರೋಹಿತ್ ಔಟಾದರು. ಈ ಮೂಲಕ ತಂಡಕ್ಕೆ ಸ್ಫೋಟಕ ಆರಂಭ ನೀಡಿದರು.

ನಾನು ವಿಭಿನ್ನವಾಗಿ ಏನನ್ನೂ ಮಾಡಿಲ್ಲ. ಕಳೆದ 3-4 ಪಂದ್ಯಗಳಲ್ಲಿ ಮಾಡಿದಂತೆಯೇ ಮಾಡಿದ್ದೇನೆ. ಪವರ್ ಪ್ಲೇನಲ್ಲಿ ರನ್ ಗಳಿಸುವುದು ಎಷ್ಟು ಮುಖ್ಯ ಎಂದು ನನಗೆ ತಿಳಿದಿದೆ. ಏಕೆಂದರೆ, 10 ಓವರ್‌ಗಳ ನಂತರ, ಸ್ಪಿನ್ನರ್‌ಗಳು ಬಂದಾಗ ತುಂಬಾ ಕಷ್ಟವಾಗುತ್ತದೆ. ದುಬೈ ಪಿಚ್‌ನ ಸ್ವರೂಪವೂ ತಾನು ಬ್ಯಾಟಿಂಗ್‌ಗೆ ಅಗತ್ಯವಾದ ವಿಧಾನವನ್ನು ಅಳವಡಿಸಿಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

SCROLL FOR NEXT