ಟೀಂ ಇಂಡಿಯಾ 
ಕ್ರಿಕೆಟ್

Champions Trophy: ಭಾರತದ 'ಪ್ಲೇಯರ್ ಆಫ್ ಟೂರ್ನಮೆಂಟ್' ಕೊಹ್ಲಿ, ವರುಣ್, ರೋಹಿತ್ ಅಲ್ವೇ ಅಲ್ಲ! ಹಾಗಾದ್ರೆ ಆ Silent Hero ಯಾರು?

ಈ ಬಾರಿಯ ಟೂರ್ನಮೆಂಟ್ ನಲ್ಲಿ ರಚಿನ್ ರವೀಂದ್ರ ನಂತರ ಎರಡನೇ ಅತಿಹೆಚ್ಚು ರನ್ ಗಳಿಸಿದ ಆಟಗಾರರಾಗಿದ್ದಾರೆ. ಒತ್ತಡದ ಸಂದರ್ಭದಲ್ಲಿ ಅವರು ರನ್ ಗಳಿಸಿದ್ದಾರೆ.

ನವದೆಹಲಿ: ರೋಹಿತ್ ಶರ್ಮಾ ನೇತೃತ್ವದ ಭಾರತೀಯ ಕ್ರಿಕೆಟ್ ತಂಡ ಯಾವುದೇ ಪಂದ್ಯದಲ್ಲೂ ಸೋಲದೆ ಅಜೇಯವಾಗಿ ICC ಚಾಂಪಿಯನ್ಸ್ ಟ್ರೋಫಿ 2025 ನ್ನು ಗೆದ್ದು ದೇಶಕ್ಕೆ ಕೀರ್ತಿ ತಂದಿದೆ. ಟೂರ್ನಿಯಲ್ಲಿ ವಿರಾಟ್ ಕೊಹ್ಲಿಯಿಂದ ಸ್ಪಿನ್ನರ್ ವರುಣ್ ಚಕ್ರವರ್ತಿವರೆಗೂ ಎಲ್ಲರೂ ಟೀಂ ಇಂಡಿಯಾ ಆಟಗಾರರು ಅದ್ಬುತ ಪ್ರದರ್ಶನ ನೀಡಿದರು.

ಆದಾಗ್ಯೂ ಮಾಜಿ ವಿಕೆಟ್ ಕೀಪರ್ -ಬ್ಯಾಟರ್ ದಿನೇಶ್ ಕಾರ್ತಿಕ್ ಮಾತ್ರ ಶ್ರೇಯಸ್ ಅಯ್ಯರ್ ಮಾತ್ರ ಭಾರತೀಯ ಕ್ರಿಕೆಟ್ ತಂಡದ 'ಪ್ಲೇಯರ್ ಆಫ್ ದಿ ಟೂರ್ನಮೆಂಟ್' ಆಗಿ ಆಯ್ಕೆ ಮಾಡಿದ್ದಾರೆ. ಸ್ಥಿರ ಪ್ರದರ್ಶನದೊಂದಿಗೆ ಶ್ರೇಯಸ್ ಎಲ್ಲಾರನ್ನೂ ಆಕರ್ಷಿಸಿದ್ದಾರೆ.

ಈ ಬಾರಿಯ ಟೂರ್ನಮೆಂಟ್ ನಲ್ಲಿ ರಚಿನ್ ರವೀಂದ್ರ ನಂತರ ಎರಡನೇ ಅತಿಹೆಚ್ಚು ರನ್ ಗಳಿಸಿದ ಆಟಗಾರರಾಗಿದ್ದಾರೆ. ಒತ್ತಡದ ಸಂದರ್ಭದಲ್ಲಿ ಅವರು ರನ್ ಗಳಿಸಿದ್ದಾರೆ ಎಂದು ದಿನೇಶ್ ಕಾರ್ತಿಕ್ Cricbuzz ಗೆ ತಿಳಿಸಿದ್ದಾರೆ.

ಶ್ರೇಯಸ್ ಅಯ್ಯರ್ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ವಿರುದ್ಧದ ಲೀಗ್ ಪಂದ್ಯಗಳಲ್ಲಿ ಎರಡು ಅರ್ಧ ಶತಕ ಸೇರಿದಂತೆ ಐದು ಪಂದ್ಯಗಳಲ್ಲಿ 243 ರನ್‌ ಗಳಿಸಿದ ಭಾರತದ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿದ್ದಾರೆ. ಫೈನಲ್‌ನಲ್ಲಿ ಪ್ರಮುಖ 48 ರನ್ ಗಳಿಸಿದರು. ದುಬೈನ ನಿಧಾನಗತಿಯ ಪಿಚ್ ನಲ್ಲಿ ಭಾರತ ಸ್ಪಿನ್ ಸವಾಲು ಎದುರಿಸಿ ನಿಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದರು.

ಕೊನೆಯ ದಿನ ಪ್ರತಿಯೊಬ್ಬ ವ್ಯಕ್ತಿಯು ತಂಡಕ್ಕಾಗಿ ಆಟ ಮುಗಿಸಲು ಬಯಸುತ್ತಾನೆ. ನಾನು ಇದನ್ನು ಎಲ್ಲಾ ದಿನಗಳಲ್ಲೂ ಮಾಡುತ್ತೇನೆ. ಪ್ರತಿಯೊಬ್ಬ ವ್ಯಕ್ತಿಯು ತಂಡದ ಗೆಲುವಿಗೆ ನೀಡಿದ ಕೊಡುಗೆಯ ರೀತಿ ನನಗೆ ಸಂಸತವನ್ನುಂಟು ಮಾಡಿದೆ ಎಂದು ಶ್ರೇಯಸ್ ಅಯ್ಯರ್ ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಧಮ್ ಇದ್ರೆ ನನ್ನ ಕೊಲ್ಲಿ.. ಕನಿಷ್ಠ 1 ಸಾವಿರ ಕ್ಷಿಪಣಿಗಳು ಲೋಡ್ ಆಗಿ ನಿಂತಿವೆ': ಇರಾನ್ ಗೆ Donald Trump ಎಚ್ಚರಿಕೆ

ಭಾರತ–ನ್ಯೂಜಿಲ್ಯಾಂಡ್ ಸಂಬಂಧ ಕಾರ್ಯತಂತ್ರ ಪಾಲುದಾರಿಕೆಗೆ ಉನ್ನತಿ; 5 ವರ್ಷಗಳಲ್ಲಿ 35,000 ಕೋಟಿ ರೂ. ವ್ಯಾಪಾರದ ಗುರಿ

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಬೆಂಗಳೂರು: ತಾಯಿ, ಅಜ್ಜಿ, ಮಾವನನ್ನು ಕೊಂದು ಆರೋಪಿ ಆತ್ಮಹತ್ಯೆ!

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ