ಸಾಂದರ್ಭಿಕ ಚಿತ್ರ 
ಕ್ರಿಕೆಟ್

ಪಾಕಿಸ್ತಾನ ಮೂಲದ ಕ್ರಿಕೆಟಿಗ Junaid Jaffer Khan ಮೈದಾನದಲ್ಲೇ ಕುಸಿದು ಸಾವು!

ಅಡಿಲೇಡ್’ ನ ಕಾಂಕಾರ್ಡಿಯಾ ಕಾಲೇಜಿನಲ್ಲಿ ಪ್ರತಿಸ್ಪರ್ಧಿ ಪ್ರಿನ್ಸ್ ಆಲ್ಫ್ರೆಡ್ ಓಲ್ಡ್ ಕೊಲಿಜಿಯನ್ಸ್ ವಿರುದ್ಧ 40 ಓವರ್ಗಳಲ್ಲಿ ಫೀಲ್ಡಿಂಗ್ ಮಾಡಿದ್ದ ಓಲ್ಡ್ ಕಾಂಕಾರ್ಡಿಯನ್ಸ್ ಕ್ರಿಕೆಟ್ ಕ್ಲಬ್ ಆಟಗಾರ ಜುನೈದ್ ಅಜೇಯ 16 ರನ್ ಗಳಿಸಿದ್ದರು.

ಅಡಿಲೇಡ್‌: ಕ್ರಿಕೆಟ್ ಮೈದಾನದಲ್ಲೇ ಪಾಕಿಸ್ತಾನ ಮೂಲದ ಆಟಗಾರನೋರ್ವ ಕುಸಿದು ಸಾವನ್ನಪ್ಪಿರುವ ಘಟನೆ ಆಸ್ಟ್ರೇಲಿಯಾದಲ್ಲಿ ನಡೆದಿದೆ.

ಪಂದ್ಯದ ವೇಳೆ ಪಾಕಿಸ್ತಾನ ಮೂಲದ ಕ್ರಿಕೆಟಿಗ 40 ವರ್ಷದ ಜುನೈದ್ ಜಾಫರ್ ಖಾನ್ (Junaid Jaffer Khan) ಆಸ್ಟ್ರೇಲಿಯಾದ ಅಡಿಲೇಡ್‌ನಲ್ಲಿರುವ (Adiled) ಕಾನ್ಕಾರ್ಡಿಯಾ ಕಾಲೇಜು ಓವಲ್‌ ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಆಟಗಾರ ಕುಸಿಯುತ್ತಲೇ ತಕ್ಷಣವೇ ಆಂಬ್ಯುಲೆನ್ಸ್‌ಗೆ ಕರೆ ಮಾಡಲಾಯಿತು ಮತ್ತು ವೈದ್ಯಕೀಯ ಸಿಬ್ಬಂದಿ ಸಿಪಿಆರ್ ಮಾಡಿದರು, ಆದರೆ ಜುನೈದ್ ಅವರನ್ನು ರಕ್ಷಿಸಲು ಸಾಧ್ಯವಾಗಿಲ್ಲ ಎಂದು ಹೇಳಲಾಗಿದೆ.

ಹೀಟ್ ಸ್ಟ್ರೋಕ್ ಕಾರಣ?

ಅಡಿಲೇಡ್’ ನ ಕಾಂಕಾರ್ಡಿಯಾ ಕಾಲೇಜಿನಲ್ಲಿ ಪ್ರತಿಸ್ಪರ್ಧಿ ಪ್ರಿನ್ಸ್ ಆಲ್ಫ್ರೆಡ್ ಓಲ್ಡ್ ಕೊಲಿಜಿಯನ್ಸ್ ವಿರುದ್ಧ 40 ಓವರ್ಗಳಲ್ಲಿ ಫೀಲ್ಡಿಂಗ್ ಮಾಡಿದ್ದ ಓಲ್ಡ್ ಕಾಂಕಾರ್ಡಿಯನ್ಸ್ ಕ್ರಿಕೆಟ್ ಕ್ಲಬ್ ಆಟಗಾರ ಜುನೈದ್ ಅಜೇಯ 16 ರನ್ ಗಳಿಸಿದ್ದರು. ಜುನೈದ್ ಜಾಫರ್ ಖಾನ್ ಮೊದಲ 40 ಓವರ್‌ಗಳು ಫೀಲ್ಡಿಂಗ್ ಮಾಡಿದ್ದರು ಮತ್ತು 7 ಓವರ್‌ ಬ್ಯಾಟಿಂಗ್ ಮಾಡಿದ್ದರು.

ಪಂದ್ಯದ ವೇಳೆ ಮೈದಾನದಲ್ಲಿ ತಾಪಮಾನ 41.7 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿತ್ತು. ಇದೇ ಸಂದರ್ಭದಲ್ಲಿ ಅವರು ಮೈದಾನದಲ್ಲೇ ಕುಸಿದು ಬಿದ್ದಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಅಂತೆಯೇ ಕ್ಲಬ್ ತಮ್ಮ ಆಟಗಾರನ ನಷ್ಟಕ್ಕೆ ದುಃಖ ವ್ಯಕ್ತಪಡಿಸಿ, ಅರೆವೈದ್ಯರ ಪ್ರಯತ್ನಗಳನ್ನು ಶ್ಲಾಘಿಸಿ ಹೇಳಿಕೆಯನ್ನು ಬಿಡುಗಡೆ ಮಾಡಿದೆ.

ರಂಜಾನ್ ಉಪವಾಸ ಮಾಡುತ್ತಿದ್ದ ಜುನೈದ್

ಅಂದಹಾಗೆ ಕ್ರಿಕೆಟಿಗ ಜುನೈದ್ ಅವರ ಸ್ನೇಹಿತರೊಬ್ಬರು ರಂಜಾನ್ ಉಪವಾಸದ ಕುರಿತು ಮಾಹಿತಿ ನೀಡಿದ್ದು, ಜುನೈದ್ ಅವರು ರಂಜಾನ್ ಉಪವಾಸ ಆಚರಿಸುತ್ತಿದ್ದರು. ಪಂದ್ಯದ ಸಂದರ್ಭದಲ್ಲಿ ಅವರು ನೀರು ಮಾತ್ರ ಕುಡಿಯುತ್ತಿದ್ದರು ಎಂದು ಹೇಳಿದ್ದಾರೆ.

ಇಸ್ಲಾಮಿಕ್ ಸೊಸೈಟಿಯ ಅಧ್ಯಕ್ಷರು ಜುನೈದ್ ಜಾಫರ್ ಖಾನ್ ಅವರ ಸಾವಿಗೆ ಯಾವುದೇ ಅಧಿಕೃತ ಕಾರಣವನ್ನು ನಿರ್ಧರಿಸಲಾಗಿಲ್ಲ ಮತ್ತು ವೈದ್ಯಕೀಯ ಘಟನೆಗೆ ಉಪವಾಸ ಕಾರಣ ಎಂದು ಹೇಳಲು ಯಾವುದೇ ಪುರಾವೆಗಳಿಲ್ಲ ಎಂದು ಉಲ್ಲೇಖಿಸಿದ್ದಾರೆ.

ಕ್ರಿಕೆಟ್ ನಿಯಮ ಏನು?

ಅಡಿಲೇಡ್ ಟರ್ಫ್ ಕ್ರಿಕೆಟ್ ಅಸೋಸಿಯೇಷನ್‌ನ ನಿಯಮಗಳು ತಾಪಮಾನ 42 ಡಿಗ್ರಿ ಸೆಲ್ಸಿಯಸ್ ಮೀರಿದರೆ ಪಂದ್ಯಗಳನ್ನು ರದ್ದುಗೊಳಿಸಲಾಗುತ್ತದೆ ಮತ್ತು 40 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಿನ ತಾಪಮಾನಕ್ಕೆ ವಿಶೇಷ ಮುನ್ನೆಚ್ಚರಿಕೆಗಳನ್ನು ನೀಡಲಾಗುತ್ತದೆ ಎಂದು ಹೇಳುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT