ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತ ತಂಡ 
ಕ್ರಿಕೆಟ್

Champions Trophy 2025 ಗೆದ್ದ ಭಾರತ ತಂಡಕ್ಕೆ BCCI ಭರ್ಜರಿ ಗಿಫ್ಟ್!

ಕಳೆದ ವರ್ಷ ಬಾರ್ಬಡೋಸ್‌ನಲ್ಲಿ ನಡೆದ ಟಿ20 ವಿಶ್ವಕಪ್ ಗೆಲುವಿನ ನಂತರ, ರೋಹಿತ್ ಶರ್ಮಾ ತಂಡಕ್ಕೂ ಭಾರತೀಯ ಮಂಡಳಿಯಿಂದ ಬಂಪರ್ ನಗದು ಬಹುಮಾನ ಹೆಚ್ಚಳದೊಂದಿಗೆ ಸನ್ಮಾನಿಸಲಾಯಿತು.

ಮುಂಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ಟ್ರೋಫಿ ಗೆದ್ದ ಭಾರತ ತಂಡo ಆಟಗಾರರಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಭರ್ಜರಿ ಗಿಫ್ಟ್ ಘೋಷಣೆ ಮಾಡಿದೆ.

ಹೌದು.. 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಜಯಗಳಿಸಿದ ನಂತರ, ರೋಹಿತ್ ಶರ್ಮಾ ನೇತೃತ್ವದ ಭಾರತೀಯ ತಂಡಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಗುರುವಾರ 58 ಕೋಟಿ ರೂಪಾಯಿಗಳ ಬೃಹತ್ ನಗದು ಬಹುಮಾನ ಘೋಷಿಸಿದೆ.

ಈ ಕುರಿತು ಬಿಸಿಸಿಐ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, 'ನಾಯಕ ರೋಹಿತ್ ಶರ್ಮಾ ಅವರ ಸಮರ್ಥ ಮತ್ತು ಚಾಣಾಕ್ಷ ನಾಯಕತ್ವದಲ್ಲಿ, ಭಾರತವು ಪಂದ್ಯಾವಳಿಯಲ್ಲಿ ಪ್ರಾಬಲ್ಯ ಸಾಧಿಸಿತು. ಫೈನಲ್‌ಗೆ ತಲುಪುವ ಹಾದಿಯಲ್ಲಿ ನಾಲ್ಕು ಅದ್ಭುತ ಗೆಲುವುಗಳನ್ನು ದಾಖಲಿಸಿತು.

ತಂಡವು ಬಾಂಗ್ಲಾದೇಶ ವಿರುದ್ಧ ಆರು ವಿಕೆಟ್‌ಗಳ ಘನ ಗೆಲುವಿನೊಂದಿಗೆ ತನ್ನ ಅಭಿಯಾನವನ್ನು ಪ್ರಾರಂಭಿಸಿತು, ನಂತರ ಪಾಕಿಸ್ತಾನ ವಿರುದ್ಧ ಆರು ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು. ಅವರು ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾವನ್ನು ನಾಲ್ಕು ವಿಕೆಟ್‌ಗಳಿಂದ ಸೋಲಿಸುವ ಮೊದಲು ನ್ಯೂಜಿಲೆಂಡ್ ವಿರುದ್ಧ 44 ರನ್‌ಗಳ ಜಯದೊಂದಿಗೆ ತಮ್ಮ ಆವೇಗವನ್ನು ಮುಂದುವರಿಸಿದರು," ಎಂದು ಬಿಸಿಸಿಐ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಅಂತೆಯೇ ಮಾರ್ಚ್ 9 ರಂದು ದುಬೈನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಭಾರತ ತಂಡವು ನ್ಯೂಜಿಲೆಂಡ್ ತಂಡವನ್ನು ನಾಲ್ಕು ವಿಕೆಟ್‌ಗಳಿಂದ ಸೋಲಿಸಿತು, ನಾಯಕ ಶರ್ಮಾ 76 ರನ್ ಗಳಿಸಿ ಫೈನಲ್ ನಲ್ಲಿ ಭಾರತದ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದರು. ಈ ಟೂರ್ನಿಯಲ್ಲಿ ಐಸಿಸಿ ವತಿಯಿಂದ ಭಾರತ ತಂಡ ಸುಮಾರು 20 ಕೋಟಿ ರೂ. ($2.24 ಮಿಲಿಯನ್) ಅಧಿಕೃತ ಬಹುಮಾನವನ್ನು ಪಡೆದುಕೊಂಡಿತು, ರನ್ನರ್ ಅಪ್ ನ್ಯೂಜಿಲೆಂಡ್ $1.12 ಮಿಲಿಯನ್ (ರೂ. 9.72 ಕೋಟಿ) ಗಳಿಸಿತು.

ಇದೀಗ ಚಾಂಪಿಯನ್ಸ್ ಟ್ರೋಫಿ ಜಯಿಸಿದ ಭಾರತ ತಂಡಕ್ಕೆ ಗೆಲುವಿನ ಉಡುಗೊರೆಯಾಗಿ ಬಿಸಿಸಿಐ ನಗದು ಬಹುಮಾನ ಘೋಷಣೆ ಮಾಡಿದೆ.

ಕಳೆದ ವರ್ಷ ಬಾರ್ಬಡೋಸ್‌ನಲ್ಲಿ ನಡೆದ ಟಿ20 ವಿಶ್ವಕಪ್ ಗೆಲುವಿನ ನಂತರ, ರೋಹಿತ್ ಶರ್ಮಾ ತಂಡಕ್ಕೂ ಭಾರತೀಯ ಮಂಡಳಿಯಿಂದ ಬಂಪರ್ ನಗದು ಬಹುಮಾನ ಹೆಚ್ಚಳದೊಂದಿಗೆ ಸನ್ಮಾನಿಸಲಾಯಿತು. ನಂತರ ಬಿಸಿಸಿಐ ಇಡೀ ತಂಡಕ್ಕೆ 125 ಕೋಟಿ ರೂ.ಗಳನ್ನು ನೀಡುವುದಾಗಿ ಭರವಸೆ ನೀಡಿತ್ತು, ಇದು ಮಾಜಿ ನಾಯಕ ಎಂಎಸ್ ಧೋನಿ ನೇತೃತ್ವದ 2011 ರ ಏಕದಿನ ವಿಶ್ವಕಪ್ ವಿಜೇತ ತಂಡಕ್ಕೆ ಘೋಷಿಸಲಾದ ಬಹುಮಾನ ಬಹುಮಾನದ ಮೂರು ಪಟ್ಟು ಹೆಚ್ಚಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT