ಧೋನಿ, ಆರ್. ಅಶ್ವಿನ್ ಮತ್ತಿತರರು 
ಕ್ರಿಕೆಟ್

IPL 2025: CSK ಯಶಸ್ಸಿನ ಪಯಣ ಕುರಿತ ಪುಸ್ತಕ ಬಿಡುಗಡೆ!

ಸಿಎಸ್‌ಕೆ ಮಾಜಿ ನಾಯಕ ಎಂಎಸ್ ಧೋನಿ, ಸಿಎಸ್‌ಕೆ ತರಬೇತುದಾರರಾದ ಸ್ಟೀಫನ್ ಫ್ಲೆಮಿಂಗ್ ಮತ್ತು ಮೈಕ್ ಹಸ್ಸಿ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಚೆನ್ನೈ: ಖ್ಯಾತ ವಕೀಲ ಮತ್ತು ತಮಿಳುನಾಡು ಕ್ರಿಕೆಟ್ ಅಸೋಸಿಯೇಷನ್ ಮಾಜಿ ಉಪಾಧ್ಯಕ್ಷ ಪಿಎಸ್ ರಾಮನ್ ಅವರ ಪುಸ್ತಕ 'ಲಿಯೋ - ದಿ ಅನ್‌ಟೋಲ್ಡ್ ಸ್ಟೋರಿ ಆಫ್ ಸಿಎಸ್‌ಕೆ' ಬಿಡುಗಡೆ ಕಾರ್ಯಕ್ರಮ ಇತ್ತೀಚಿಗೆ ನಡೆಯಿತು.

ಸಿಎಸ್‌ಕೆ ಮಾಜಿ ನಾಯಕ ಎಂಎಸ್ ಧೋನಿ, ಸಿಎಸ್‌ಕೆ ತರಬೇತುದಾರರಾದ ಸ್ಟೀಫನ್ ಫ್ಲೆಮಿಂಗ್ ಮತ್ತು ಮೈಕ್ ಹಸ್ಸಿ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಭಾರತದ ಮಾಜಿ ಆಟಗಾರ ಹಾಗೂ ತಮಿಳುನಾಡಿನ ಮಾಜಿ ನಾಯಕ ಸಿ.ಡಿ.ಗೋಪಿನಾಥ್ ಪುಸ್ತಕವನ್ನು ಬಿಡುಗಡೆ ಮಾಡಿ, ಮೊದಲ ಪ್ರತಿಯನ್ನು ಸಂಗೀತ ನಿರ್ದೇಶಕ ಅನಿರುದ್ಧ ರವಿಚಂದರ್ ಅವರಿಗೆ ನೀಡಿದರು. ಮಾಜಿ ಟೆಸ್ಟ್ ಕ್ರಿಕೆಟಿಗರಾದ ಕೆ.ಶ್ರೀಕಾಂತ್, ಬ್ರಿಜೇಶ್ ಪಟೇಲ್, ಡಬ್ಲ್ಯೂ.ವಿ.ರಾಮನ್, ಎಸ್.ಬದರಿನಾಥ್ ಮತ್ತಿತರರು ಭಾಗವಹಿಸಿದ್ದರು.

ಬಳಿಕ ಮಾತನಾಡಿದ ಗೋಪಿನಾಥ್, ಆಂಗ್ಲರು ಈ ಆಟವನ್ನು ಪರಿಚಯಿಸಿದ ಕಾಲದಿಂದ ಹೇಗೆ ಬೆಳೆದುಬಂದಿದೆ ಎಂಬುದನ್ನು ವಿವರಿಸಿದರು. ಅಲ್ಲದೇ ಈ ಬಾರಿಯ ಐಪಿಎಲ್ ನಲ್ಲಿ CSK ಗೆಲಲ್ಲಿ ಎಂದು ಶುಭ ಹಾರೈಸಿದರು ಮತ್ತು ಧೋನಿ ಮೈದಾನದ ಒಳಗೆ ಮತ್ತು ಹೊರಗೆ ಗಮನಾರ್ಹ ವ್ಯಕ್ತಿಯಾಗಿದ್ದಾರೆ ಎಂದು ಹೊಗಳಿದರು.

ಎರಡು ವರ್ಷ ಅಮಾನತುಗೊಂಡಿದ್ದಂತಹ ಸವಾಲಿನ ಅವಧಿ ಸೇರಿದಂತೆ ಸಿಎಸ್ ಕೆಯ ಹಾದಿಯನ್ನು ರಾಮನ್ ಪುಸ್ತಕ ವಿವರಿಸುತ್ತದೆ. ಅಲ್ಲದೇ ಹಿಂದೆಂದೂ ನೋಡಿರದ ಅಪರೂಪದ CSK ಫೋಟೋಗಳನ್ನು ಒಳಗೊಂಡಿದೆ

ಇದೇ ಸಂದರ್ಭದಲ್ಲಿ ಇತ್ತೀಚಿಗೆ ಕ್ರಿಕೆಟ್ ಬದುಕಿಗೆ ವಿದಾಯ ಹೇಳಿದ ಭಾರತ ಟೆಸ್ಟ್ ತಂಡದ ಎರಡನೇ ಅತಿ ಹೆಚ್ಚು ವಿಕೆಟ್ ಪಡೆದ ಹೆಗ್ಗಳಿಕೆ ಹೊಂದಿರುವ ಆರ್. ಅಶ್ವಿನ್ ಅವರನ್ನು ಸನ್ಮಾನಿಸಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT