ಈಡನ್ ಗಾರ್ಡನ್ಸ್ ಮೈದಾನ 
ಕ್ರಿಕೆಟ್

IPL 2025: ಉದ್ಘಾಟನೆಗೆ ಕ್ಷಣಗಣನೆ, KKR-RCB ನಡುವಿನ ಮೊದಲ ಪಂದ್ಯಕ್ಕೆ ವರುಣನ ಭೀತಿ?

ಇಂದು ಸಂಜೆ 6 ಗಂಟೆಗೆ ಉದ್ಘಾಟನಾ ಕಾರ್ಯಕ್ರಮ ಶುರುವಾಗಲಿದ್ದು, ಶ್ರೇಯ ಘೋಷಲ್ ಹಾಗೂ ದಿಶಾ ಪಟಾನಿ ಅವರಿಂದ ಮನರಂಜನಾ ಕಾರ್ಯಕ್ರಮದೊಂದಿಗೆ ಈ ಬಾರಿಯ ಐಪಿಎಲ್ ಗ್ರ್ಯಾಂಡ್ ಓಪನಿಂಗ್ ಆಗಲಿದೆ. ಆದರೆ ಈ ಕಾರ್ಯಕ್ರಮಕ್ಕೂ ವರುಣನ ಭಯ ಶುರುವಾಗಿದೆ.

ಕೊಲ್ಕತ್ತಾ: ದಕ್ಷಿಣ ಭಾರತದ ಕ್ರಿಕೆಟ್ ಕಾಶಿ ಎಂದೇ ಹೆಸರಾದ ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಇಂದು ಕೆಕೆಆರ್ -ಆರ್ ಸಿಬಿ ನಡುವಿನ ಉದ್ಘಾಟನಾ ಪಂದ್ಯ ಆರಂಭವಾಗಲಿದೆ. ಸಂಜೆ 7-00 ಗಂಟೆ ಟಾಸ್ ನಿರ್ಧಾರದೊಂದಿಗೆ ಸಂಜೆ 7-30 ಕ್ಕೆ ಪಂದ್ಯ ನಿಗದಿಯಾಗಿದೆ. ಆದರೆ ಪಂದ್ಯಕ್ಕೆ ವರುಣನ ಭೀತಿ ಶುರುವಾಗಿದೆ.

ಇಂದು ಸಂಜೆ 6 ಗಂಟೆಗೆ ಉದ್ಘಾಟನಾ ಕಾರ್ಯಕ್ರಮ ಶುರುವಾಗಲಿದ್ದು, ಶ್ರೇಯ ಘೋಷಲ್ ಹಾಗೂ ದಿಶಾ ಪಟಾನಿ ಅವರಿಂದ ಮನರಂಜನಾ ಕಾರ್ಯಕ್ರಮದೊಂದಿಗೆ ಈ ಬಾರಿಯ ಐಪಿಎಲ್ ಗ್ರ್ಯಾಂಡ್ ಓಪನಿಂಗ್ ಆಗಲಿದೆ. ಆದರೆ ಈ ಕಾರ್ಯಕ್ರಮಕ್ಕೂ ವರುಣನ ಭಯ ಶುರುವಾಗಿದೆ.

ನಿನ್ನೆ ಸಂಜೆ ಕೆಕೆಆರ್ ಹಾಗೂ ಆರ್ ಸಿಬಿ ಅಭ್ಯಾಸದ ವೇಳೆಯಲ್ಲಿ ತುಂತುರು ಮಳೆ ಸುರಿದ ಹಿನ್ನೆಲೆಯಲ್ಲಿ ಬೇಗನೆ ಅಭ್ಯಾಸವನ್ನು ಮುಕ್ತಾಯಗೊಳಿಸಲಾಯಿತು. ಉಭಯ ತಂಡಗಳು ಸಂಜೆ 5 ಗಂಟೆಗೆ ಅಭ್ಯಾಸ ಆರಂಭಿಸಿದ್ದವು. ಆದರೆ 6 ಗಂಟೆ ವೇಳೆಗೆ ಮಳೆ ಬಂತು. ತಕ್ಷಣ ಕಾರ್ಯಪ್ರವೃತ್ತರಾದ ಸಿಬ್ಬಂದಿ ಮೈದಾನವನ್ನು ಟಾರ್ಪಲಿನ್ ನೊಂದಿಗೆ ಮುಚ್ಚಿದರು.

ಆಟಗಾರರು ಕೂಡಾ ತಮ್ಮ ಸಿದ್ದತಾ ಕಾರ್ಯಗಳನ್ನು ಅಲ್ಲಿಗೆ ಪೂರ್ಣಗೊಳಿಸಿದರು. ಹವಾಮಾನ ಇಲಾಖೆ ಇಂದು ಕೂಡಾ ಆರೆಂಜ್ ಆಲರ್ಟ್ ಘೋಷಿಸಿದ್ದು, ಗುಡುಗು ಸಹಿತ ಮಳೆಯ ಮುನ್ಸೂಚನೆ ನೀಡಿದೆ. ಒಂದು ವೇಳೆ ಮಳೆ ಬಂದರೆ ಪಂದ್ಯ ರದ್ದಾಗುವ ಸಾಧ್ಯತೆಯೂ ಇದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

SCROLL FOR NEXT