ಇಶಾನ್ ಕಿಶನ್ ಶತಕ 
ಕ್ರಿಕೆಟ್

IPL 2025: ಸೆಂಟ್ರಲ್ ಕಾಂಟ್ರಾಕ್ಟ್ ರದ್ದತಿಗೆ Ishan Kishan ತಿರುಗೇಟು; ಸ್ಫೋಟಕ ಬ್ಯಾಟಿಂಗ್, ಐಪಿಎಲ್ ಇತಿಹಾಸದಲ್ಲೇ ಮೊದಲ ಭಾರತೀಯ!

ಸನ್ ರೈಸರ್ಸ್ ಹೈದರಾಬಾದ್ ಪರ ಸ್ಫೋಟಕ ಬ್ಯಾಟಿಂಗ್ ನಿರ್ವಹಿಸಿದ ಇಶಾನ್ ಕಿಶನ್ ಕೇವಲ 47 ಎಸೆತಗಳಲ್ಲಿ 6 ಸಿಕ್ಸರ್ ಮತ್ತು 11 ಬೌಂಡರಿಗಳ ನೆರವಿನಿಂದ ಅಜೇಯ 106 ರನ್ ಪೇರಿಸಿದರು.

ಹೈದರಾಬಾದ್: ಐಪಿಎಲ್ 2025 ಟೂರ್ನಿಯಲ್ಲಿ ಸನ್ ರೈಸರ್ಸ್ ಹೈದರಾಬಾದ್ ಬ್ಯಾಟರ್ ಇಶಾನ್ ಕಿಶನ್ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ಐಪಿಎಲ್ ಇತಿಹಾಸದ ಅಪರೂಪದ ದಾಖಲೆ ನಿರ್ಮಿಸಿದ್ದಾರೆ.

ಹೌದು.. ಹೈದರಾಬಾದ್ ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಇಂದಿನ ಮೊದಲ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಪರ ಸ್ಫೋಟಕ ಬ್ಯಾಟಿಂಗ್ ನಿರ್ವಹಿಸಿದ ಇಶಾನ್ ಕಿಶನ್ ಕೇವಲ 47 ಎಸೆತಗಳಲ್ಲಿ 6 ಸಿಕ್ಸರ್ ಮತ್ತು 11 ಬೌಂಡರಿಗಳ ನೆರವಿನಿಂದ ಅಜೇಯ 106 ರನ್ ಪೇರಿಸಿದರು.

ಈ ಮೂಲಕ ಇಶಾನ್ ಕಿಶನ್ ಐಪಿಎಲ್ 2025 ರ ತಮ್ಮ ಮೊದಲ ಪಂದ್ಯದಲ್ಲೇ ಭರ್ಜರಿ ಶತಕ ಗಳಿಸಿದ್ದಾರೆ. ಐಪಿಎಲ್ 2025 ರ ಮೊದಲ ಹಾಗೂ ಅವರ ಐಪಿಎಲ್ ವೃತ್ತಿಜೀವನದ ಮೊದಲ ಶತಕವನ್ನು ಪೂರ್ಣಗೊಳಿಸಿದರು. ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಕೊನೆಯವರೆಗೂ ಅಜೇಯರಾಗಿ ಉಳಿದ ಕಿಶನ್ 47 ಎಸೆತಗಳಲ್ಲಿ 11 ಬೌಂಡರಿ ಹಾಗೂ 6 ಸಿಕ್ಸರ್‌ಗಳ ಸಹಿತ 106 ರನ್ ಕಲೆಹಾಕಿದರು.

ಐಪಿಎಲ್ ಇತಿಹಾಸದಲ್ಲೇ ಮೊದಲ ಭಾರತೀಯ

ಅಂತೆಯೇ ಸನ್ ರೈಸರ್ಸ್ ಹೈದರಾಬಾದ್ ತಂಡದಲ್ಲಿ ಶತಕ ಸಿಡಿಸಿದ ಮೊದಲ ಭಾರತೀಯ ಆಟಗಾರ ಎಂಬ ಕೀರ್ತಿಗೂ ಇಶಾನ್ ಕಿಶನ್ ಪಾತ್ರರಾಗಿದ್ದಾರೆ. ಈ ಹಿಂದೆ ಸನ್ ರೈಸರ್ಸ್ ಹೈದರಾಬಾದ್ ತಂಡದಿಂದ ಶತಕಗಳು ಬಂದಿತ್ತಾದರೂ ಅವೆಲ್ಲವೂ ವಿದೇಶಿ ಆಟಗಾರರದ್ದಾಗಿತ್ತು. ಇದೀಗ ಇಶಾನ್ ಕಿಶನ್ ಶತಕ ಸಿಡಿಸಿ ಆ ದಾಖಲೆಯ ಪಟ್ಟಿಯಲ್ಲಿ ತಮ್ಮ ಹೆಸರು ಸೇರಿಸಿದ್ದಾರೆ.

ಸೆಂಟ್ರಲ್ ಕಾಂಟ್ರಾಕ್ಟ್ ರದ್ದತಿಗೆ ತಿರುಗೇಟು

ಇನ್ನು ಕಳೆದ ಒಂದು ವರ್ಷದಿಂದ ಟೀಂ ಇಂಡಿಯಾದಿಂದ ಇಶಾನ್ ಕಿಶನ್ ದೂರವಿದ್ದರು. ಅಲ್ಲದೆ ಬಿಸಿಸಿಐ ಇಶಾನ್ ಕಿಶನ್ ರ ಸೆಂಟ್ರಲ್ ಕಾಂಟ್ರಾಕ್ಟ್ ನವೀಕರಿಸಿರಲಿಲ್ಲ. ಹೀಗಾಗಿ ಇಶಾನ್ ಕಿಶನ್ ಅಕ್ಷರಶಃ ತಂಡದಿಂದ ದೂರ ಉಳಿದಿದ್ದರು. ದೇಶೀಯ ಕ್ರಿಕೆಟ್ ನಲ್ಲಿ ಪಾಲ್ಗೊಳ್ಳುತ್ತಿಲ್ಲ ಎಂದು ಇಶಾನ್ ಕಿಶನ್ ರ ಸೆಂಟ್ರಲ್ ಕಾಂಟ್ರಾಕ್ಟ್ ಅನ್ನು ಬಿಸಿಸಿಐ ನವೀಕರಿಸಿರಲಿಲ್ಲ. ಆದರೆ ಬಳಿಕ ದೇಶೀಯ ಟೂರ್ನಿಗಳಲ್ಲಿ ಪಾಲ್ಗೊಂಡು ಇಶಾನ್ ಕಿಶನ್ ತಮ್ಮ ಸಾಮರ್ಥ್ಯ ತೋರಿದ್ದರು. ಇದೀಗ ಐಪಿಎಲ್ ನಲ್ಲಿ ಶತಕ ಸಿಡಿಸಿ ಭಾರತ ಕ್ರಿಕೆಟ್ ತಂಡದ ಆಯ್ಕೆ ಸಮಿತಿಗೆ ಭರ್ಜರಿ ಸಂದೇಶ ರವಾನಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT