ವಿಘ್ನೇಶ್ ಪುತ್ತೂರು 
ಕ್ರಿಕೆಟ್

IPL 2025: ಚೊಚ್ಚಲ ಪಂದ್ಯದಲ್ಲೇ 3 ವಿಕೆಟ್ ಪಡೆದು ಮಿಂಚಿದ್ದ ವಿಘ್ನೇಶ್ ಪುತ್ತೂರು ಟೂರ್ನಿಯಿಂದಲೇ ಔಟ್!

ಮುಂಬೈ ಇಂಡಿಯನ್ಸ್ ವೈದ್ಯಕೀಯ ಮತ್ತು ಎಸ್ & ಸಿ ತಂಡದೊಂದಿಗೆ ಚೇತರಿಕೆ ಮತ್ತು ಪುನರ್ವಸತಿ ಬಗ್ಗೆ ಗಮನಹರಿಸಲು ವಿಘ್ನೇಶ್ ತಂಡದೊಂದಿಗೆ ಮುಂದುವರಿಯುತ್ತಾರೆ ಎಂದು ಫ್ರಾಂಚೈಸಿ ತಿಳಿಸಿದೆ.

ಮುಂಬೈ ಇಂಡಿಯನ್ಸ್ (MI) ಬೌಲರ್ ವಿಘ್ನೇಶ್ ಪುತ್ತೂರು ಗಾಯದ ಕಾರಣದಿಂದಾಗಿ ಐಪಿಎಲ್ 2025ರ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧದ ಆರಂಭಿಕ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಪರ ಐಪಿಎಲ್‌ಗೆ ಪದಾರ್ಪಣೆ ಮಾಡಿದ್ದರು. ವಿಘ್ನೇಶ್ ಪುತ್ತೂರು ಇಲ್ಲಿಯವರೆಗೆ 5 ಪಂದ್ಯಗಳನ್ನು ಆಡಿದ್ದು, ಹಲವು ವಿಕೆಟ್‌ಗಳನ್ನು ಪಡೆದಿದ್ದಾರೆ.

ಪತ್ರಿಕಾ ಪ್ರಕಟಣೆಯ ಪ್ರಕಾರ, ಎರಡೂ ಮೊಣಕಾಲುಗಳಲ್ಲಿ ಮೂಳೆ ಒತ್ತಡದಿಂದಾಗಿ ಪುತ್ತೂರು ಅವರನ್ನು ಉಳಿದ ಪಂದ್ಯಗಳಿಂದ ಹೊರಗಿಡಲಾಗಿದೆ. ಮುಂಬೈ ಇಂಡಿಯನ್ಸ್ ತಂಡವು ರಘು ಶರ್ಮಾ ಅವರಿಗೆ ವಿಘ್ನೇಶ್ ಪುತ್ತೂರು ಅವರ ಬದಲಿಗೆ ಅವಕಾಶ ನೀಡಿದೆ. ಮುಂಬೈ ಇಂಡಿಯನ್ಸ್ ವೈದ್ಯಕೀಯ ಮತ್ತು ಎಸ್ & ಸಿ ತಂಡದೊಂದಿಗೆ ಚೇತರಿಕೆ ಮತ್ತು ಪುನರ್ವಸತಿ ಬಗ್ಗೆ ಗಮನಹರಿಸಲು ವಿಘ್ನೇಶ್ ತಂಡದೊಂದಿಗೆ ಮುಂದುವರಿಯುತ್ತಾರೆ' ಎಂದು ತಿಳಿಸಿದೆ.

ರಘು ಶರ್ಮಾ ಅವರು ಪಂಜಾಬ್ ಮತ್ತು ಪಾಂಡಿಚೇರಿ ಪರ 11 ಪ್ರಥಮ ದರ್ಜೆ, 9 ಲಿಸ್ಟ್ ಎ ಮತ್ತು 3 ಟಿ20 ಪಂದ್ಯಗಳನ್ನು ಆಡಿದ್ದಾರೆ. ಅವರು ಇದುವರೆಗೆ ತಮ್ಮ ಪ್ರಥಮ ದರ್ಜೆ ವೃತ್ತಿಜೀವನದಲ್ಲಿ ಐದು 5 ವಿಕೆಟ್ ಗೊಂಚಲು ಮತ್ತು ಮೂರು 10 ವಿಕೆಟ್ ಗೊಂಚಲುಗಳನ್ನು ಗಳಿಸಿದ್ದಾರೆ. 2024-25ರ ವಿಜಯ್ ಹಜಾರೆ ಟ್ರೋಫಿಯಲ್ಲಿ ಪಂಜಾಬ್ ಪರ ರಘು ಉತ್ತಮ ಪ್ರದರ್ಶನ ನೀಡಿದ್ದರು. 9 ಪಂದ್ಯಗಳಲ್ಲಿ 14 ವಿಕೆಟ್‌ಗಳನ್ನು ಕಬಳಿಸಿದ್ದರು.

ಮುಂಬೈ ಇಂಡಿಯನ್ಸ್ ತಂಡ

ರಿಯಾನ್ ರಿಕೆಲ್ಟನ್(ವಿಕೆಟ್ ಕೀಪರ್), ರೋಹಿತ್ ಶರ್ಮಾ, ವಿಲ್ ಜಾಕ್ಸ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ(ನಾಯಕ), ನಮನ್ ಧೀರ್, ಕಾರ್ಬಿನ್ ಬಾಷ್, ಟ್ರೆಂಟ್ ಬೌಲ್ಟ್, ದೀಪಕ್ ಚಾಹರ್, ಕರ್ಣ್ ಶರ್ಮಾ, ಜಸ್ಪ್ರೀತ್ ಬುಮ್ರಾ, ರಾಜ್ ಬಾವಾ, ಸತ್ಯನಾರಾಯಣ ರಾಜು, ರಾಬಿನ್ ಮಿಂಜ್, ರೀಸ್ ಟೋಪ್ಲಿ, ರಾಘು ಶರ್ಮಾ, ಮಿಚೆಲ್ ಸ್ಯಾಂಟ್ನರ್, ಅಶ್ವಿನಿ ಕುಮಾರ್, ಮುಜೀಬ್ ಉರ್ ರೆಹಮಾನ್, ಅರ್ಜುನ್ ತೆಂಡುಲ್ಕರ್, ಬೇವನ್ ಜಾಕೋಬ್ಸ್, ಕೃಷ್ಣನ್ ಶ್ರೀಜಿತ್.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT