ಎಸ್ ಶ್ರೀಶಾಂತ್ 
ಕ್ರಿಕೆಟ್

ಕೇರಳ ಕ್ರಿಕೆಟ್ ಸಂಸ್ಥೆ ವಿರುದ್ಧ ಹೇಳಿಕೆ: ಮಾಜಿ ಕ್ರಿಕೆಟಿಗ ಎಸ್ ಶ್ರೀಶಾಂತ್ 3 ವರ್ಷ ಅಮಾನತು

ವಿವಾದಾತ್ಮಕ ಹೇಳಿಕೆಗಳಿಗೆ ಸಂಬಂಧಿಸಿದಂತೆ ಈ ಹಿಂದೆ, ಶ್ರೀಶಾಂತ್ ಮತ್ತು ಫ್ರಾಂಚೈಸಿ ತಂಡಗಳಾದ ಕೊಲ್ಲಂ ಏರೀಸ್, ಅಲಪ್ಪುಳ ಟೀಮ್ ಲೀಡ್ ಮತ್ತು ಅಲಪ್ಪುಳ ರಿಪ್ಪಲ್ಸ್‌ಗೆ ಶೋಕಾಸ್ ನೋಟಿಸ್ ನೀಡಲಾಗಿತ್ತು.

ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡದಿಂದ ಸಂಜು ಸ್ಯಾಮ್ಸನ್ ಅವರನ್ನು ಹೊರಗಿಟ್ಟಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇರಳ ಕ್ರಿಕೆಟ್ ಸಂಸ್ಥೆ (ಕೆಸಿಎ) ತನ್ನ ವಿರುದ್ಧ ಸುಳ್ಳು ಮತ್ತು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಟೀಂ ಇಂಡಿಯಾದ ಮಾಜಿ ವೇಗಿ ಎಸ್ ಶ್ರೀಶಾಂತ್ ಅವರನ್ನು ಮೂರು ವರ್ಷಗಳ ಕಾಲ ಅಮಾನತುಗೊಳಿಸಿದೆ.

ಏಪ್ರಿಲ್ 30 ರಂದು ಕೊಚ್ಚಿಯಲ್ಲಿ ನಡೆದ ವಿಶೇಷ ಜನರಲ್ ಬಾಡಿ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಕೆಸಿಎ ಹೇಳಿಕೆಯಲ್ಲಿ ತಿಳಿಸಿದೆ. ಶ್ರೀಶಾಂತ್ ಸದ್ಯ ಕೇರಳ ಕ್ರಿಕೆಟ್ ಲೀಗ್‌ನಲ್ಲಿನ ಫ್ರಾಂಚೈಸಿ ಕೊಲ್ಲಂ ಏರೀಸ್‌ನ ಸಹ-ಮಾಲೀಕರಾಗಿದ್ದಾರೆ.

ವಿವಾದಾತ್ಮಕ ಹೇಳಿಕೆಗಳಿಗೆ ಸಂಬಂಧಿಸಿದಂತೆ ಈ ಹಿಂದೆ, ಶ್ರೀಶಾಂತ್ ಮತ್ತು ಫ್ರಾಂಚೈಸಿ ತಂಡಗಳಾದ ಕೊಲ್ಲಂ ಏರೀಸ್, ಅಲಪ್ಪುಳ ಟೀಮ್ ಲೀಡ್ ಮತ್ತು ಅಲಪ್ಪುಳ ರಿಪ್ಪಲ್ಸ್‌ಗೆ ಶೋಕಾಸ್ ನೋಟಿಸ್ ನೀಡಲಾಗಿತ್ತು.

'ನೋಟಿಸ್‌ಗಳಿಗೆ ಫ್ರಾಂಚೈಸಿ ತಂಡಗಳು ತೃಪ್ತಿಕರ ಪ್ರತಿಕ್ರಿಯೆಯನ್ನು ನೀಡಿರುವುದರಿಂದ ಅವರ ವಿರುದ್ಧ ಯಾವುದೇ ಮುಂದಿನ ಕ್ರಮ ಕೈಗೊಳ್ಳಲಾಗುವುದಿಲ್ಲ. ಆದರೆ, ತಂಡದ ನಿರ್ವಹಣೆಗೆ ಸದಸ್ಯರನ್ನು ನೇಮಿಸುವಾಗ ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಸೂಚಿಸಲು ಸಭೆ ನಿರ್ಧರಿಸಿತು' ಎಂದು ಹೇಳಿಕೆ ತಿಳಿಸಿದೆ.

ಸಂಜು ಸ್ಯಾಮ್ಸನ್ ಅವರ ಹೆಸರನ್ನು ಬಳಸಿಕೊಂಡು ಆಧಾರರಹಿತ ಆರೋಪಗಳನ್ನು ಮಾಡಿದ್ದಕ್ಕಾಗಿ ಅವರ ತಂದೆ ಸ್ಯಾಮ್ಸನ್ ವಿಶ್ವನಾಥ್ ಮತ್ತು ಇತರ ಇಬ್ಬರ ವಿರುದ್ಧ ಕಾನೂನಿನ ಮೂಲಕ ಪರಿಹಾರ ಪಡೆಯಲು ಸಾಮಾನ್ಯ ಸಭೆ ನಿರ್ಧರಿಸಿದೆ ಎಂದು ಅದು ಹೇಳಿದೆ.

ಮಲಯಾಳಂ ಟೆಲಿವಿಷನ್ ಚಾನೆಲ್‌ನಲ್ಲಿ ನಡೆದ ಪ್ಯಾನೆಲ್ ಚರ್ಚೆಯಲ್ಲಿ ರಾಜ್ಯ ಕ್ರಿಕೆಟ್ ಸಂಸ್ಥೆ ಮತ್ತು ಸ್ಯಾಮ್ಸನ್‌ರನ್ನು ಕುರಿತು ನೀಡಿದ ಹೇಳಿಕೆಗಾಗಿ ಎರಡು ವಿಶ್ವಕಪ್ ಪ್ರಶಸ್ತಿಗಳನ್ನು ಗೆದ್ದ ಭಾರತ ತಂಡದ ಭಾಗವಾಗಿದ್ದ ಶ್ರೀಶಾಂತ್‌ಗೆ ಕೆಸಿಎ ಶೋಕಾಸ್ ನೋಟಿಸ್ ನೀಡಿತ್ತು.

ಸ್ಯಾಮ್ಸನ್ ಅವರನ್ನು ಬೆಂಬಲಿಸಿದ್ದಕ್ಕಾಗಿ ನೋಟಿಸ್ ನೀಡಲಾಗಿಲ್ಲ ಆದರೆ, ಅಸೋಸಿಯೇಷನ್ ವಿರುದ್ಧ ತಪ್ಪುದಾರಿಗೆಳೆಯುವ ಮತ್ತು ಅವಹೇಳನಕಾರಿ ಕಾಮೆಂಟ್‌ಗಳಿಗಾಗಿ ನೋಟಿಸ್ ಜಾರಿಮಾಡಲಾಗಿತ್ತು ಎಂದು ಕೆಸಿಎ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದೆ.

ದೂರದರ್ಶನದ ಚರ್ಚೆಯ ಸಮಯದಲ್ಲಿ ಶ್ರೀಶಾಂತ್ ಅವರು ಸ್ಯಾಮ್ಸನ್‌ಗೆ ತಮ್ಮ ಬೆಂಬಲ ವ್ಯಕ್ತಪಡಿಸಿದ್ದರು. ಸ್ಯಾಮ್ಸನ್ ಮತ್ತು ಇತರ ಕೇರಳ ಆಟಗಾರರನ್ನು ರಕ್ಷಿಸುವುದಾಗಿ ಪ್ರತಿಜ್ಞೆ ಮಾಡಿದರು. ಕೆಸಿಎ ವಿರುದ್ಧ ಆರೋಪಗಳನ್ನು ಮಾಡಿದ್ದರು.

ವಿಜಯ್ ಹಜಾರೆ ಟ್ರೋಫಿಗಾಗಿ ಕೇರಳ ತಂಡದಿಂದ ಸ್ಯಾಮ್ಸನ್ ಅವರನ್ನು ಕೈಬಿಟ್ಟಿದ್ದು ಭಾರತದ ಚಾಂಪಿಯನ್ಸ್ ಟ್ರೋಫಿ ತಂಡಕ್ಕೆ ಆಯ್ಕೆಯಾಗುವ ಸಾಧ್ಯತೆಯ ಮೇಲೆ ಪರಿಣಾಮ ಬೀರಿದೆ ಎನ್ನಲಾಗಿದ್ದು, KCA ವಿರುದ್ಧ ಟೀಕೆಗಳು ಕೇಳಿಬಂದಿದ್ದವು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT