ಹಾರ್ದಿಕ್ ಪಾಂಡ್ಯ 
ಕ್ರಿಕೆಟ್

IPL 2025: MI ಸತತ ಆರನೇ ಗೆಲುವು; ಶಾಟ್ ಗಳ ಕುರಿತು ಹಾರ್ದಿಕ್ ಪಾಂಡ್ಯ ಹೇಳಿದ್ದು ಹೀಗೆ...

ಶಾಟ್ ಗಳ ಮಹತ್ವವನ್ನು ಪ್ರಸ್ತಾಪಿಸಿದ ಹಾರ್ದಿಕ್ ಪಾಂಡ್ಯ, ಬೌಂಡರಿಗಳನ್ನು ಗುರಿಯಾಗಿಸಿಕೊಂಡು ಪರಿಣಾಮಕಾರಿ ಬ್ಯಾಟಿಂಗ್ ಮಾಡಿದ ರೋಹಿತ್ ಶರ್ಮಾ ಹಾಗೂ ರಿಯಾನ್ ಅವರನ್ನು ಕೊಂಡಾಡಿದರು.

ಜೈಪುರ: ರಾಜಸ್ಥಾನ ರಾಯಲ್ಸ್ ವಿರುದ್ಧದ 100 ರನ್ ಗಳ ಅಂತರದಿಂದ ಗೆಲುವು ಸಾಧಿಸಿದ ಬಳಿಕ ಮುಂಬೈ ಇಂಡಿಯನ್ಸ್ (MI) ನಾಯಕ ಹಾರ್ದಿಕ್ ಪಾಂಡ್ಯ ತಮ್ಮ ತಂಡದ ಬ್ಯಾಟಿಂಗ್ ಪ್ರದರ್ಶನವನ್ನು ಶ್ಲಾಘಿಸಿದ್ದಾರೆ.

ಶಾಟ್ ಗಳ ಮಹತ್ವವನ್ನು ಪ್ರಸ್ತಾಪಿಸಿದ ಹಾರ್ದಿಕ್ ಪಾಂಡ್ಯ, ಬೌಂಡರಿಗಳನ್ನು ಗುರಿಯಾಗಿಸಿಕೊಂಡು ಪರಿಣಾಮಕಾರಿ ಬ್ಯಾಟಿಂಗ್ ಮಾಡಿದ ರೋಹಿತ್ ಶರ್ಮಾ ಹಾಗೂ ರಿಯಾನ್ ಅವರನ್ನು ಕೊಂಡಾಡಿದರು.

ಹೌದು. ಪಂದ್ಯ ಮುಗಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಾರ್ದಿಕ್ ಪಾಂಡ್ಯ, ನಾವು ಇನ್ನೂ 15 ರನ್ ಗಳಿಸಬಹುದಿತ್ತು. ಅದನ್ನು ತಪ್ಪಿಸಿಕೊಂಡಿದ್ದೇವೆ. ಹೆಚ್ಚಿನ ಶಾಟ್ ಹೊಡೆಯುವ ಬಗ್ಗೆ ನಾವು ಪರಸ್ಪರ ಮಾತನಾಡುತ್ತಿದ್ದೇವು. ಗ್ಯಾಪ್ ನೋಡಿ ಶಾಟ್ ಹೊಡೆದರೆ ಅದಕ್ಕೆ ಬೆಲೆ ಇರುತ್ತದೆ ಎಂದರು.

ರೋಹಿತ್ ಶರ್ಮಾ ಮತ್ತು ರಿಯಾನ್ ಅದೇ ರೀತಿಯಲ್ಲಿ ಬ್ಯಾಟಿಂಗ್ ಮಾಡಿದರು. ರಿಯಾನ್ ಬೌಂಡರಿಗಳನ್ನು ಗುರಿಯಾಗಿಸಿಕೊಂಡು ಹೊಡೆದ ಶಾಟ್ ಗಳು ಅದ್ಬುತವಾಗಿತ್ತು ಎಂದು ಕೊಂಡಾಡಿದರು.

ಬ್ಯಾಟ್ ಮನ್ ಶಿಪ್ ಮತ್ತು ಬೌಲಿಂಗ್ ದಾಳಿ ಬಗ್ಗೆಯೂ ಮಾತನಾಡಿದ ಹಾರ್ದಿಕ್ ಪಾಂಡ್ಯ, ಪರಿಸ್ಥಿತಿಗೆ ತಕ್ಕಂತೆ ಆಟವಾಡಬೇಕು. ಬ್ಯಾಟ್ ಮನ್ ಶಿಪ್ ತುಂಬಾ ಚೆನ್ನಾಗಿತ್ತು. ಎಲ್ಲಾ ಬೌಲರ್ ಗಳ ಗುರಿ ಸ್ಪಷ್ಪವಾಗಿತ್ತು. ನಮ್ಮಗಾಗಿ ಆಟವಾಡುತ್ತಿದ್ದು, ಆದೇ ರೀತಿಯಲ್ಲಿ ಮುಂದುವರೆಯುತ್ತೇವೆ. ಅತ್ಯಂತ ಶಿಸ್ತುಬದ್ಧವಾಗಿ ಗಮನವನ್ನು ಕೇಂದ್ರೀಕರಿಸಲು ಬಯಸುತ್ತೇವೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT