ಕಗಿಸೊ ರಬಾಡ 
ಕ್ರಿಕೆಟ್

IPL 2025: ಮಾದಕ ವಸ್ತು ಸೇವನೆ ಮಾಡಿ ಸಿಕ್ಕಿಬಿದ್ದ ಗುಜರಾತ್ ಟೈಟಾನ್ಸ್ ವೇಗಿ; ಕ್ರಿಕೆಟ್‌ನಿಂದ ಅಮಾನತು

ವೇಗಿ ಕಗಿಸೊ ರಬಾಡ ನಿಷೇಧಿತ ಮಾದಕ ವಸ್ತು ಸೇವನೆ ದೃಢಪಟ್ಟಿದೆ. ಈ ಘಟನೆ ವಿಷಾದನೀಯ.

ಜೋಹಾನ್ಸ್‌ಬರ್ಗ್: ಗುಜರಾತ್‌ ಟೈಟಾನ್ಸ್‌ (GT) ತಂಡದ ವೇಗದ ಬೌಲರ್ ಕಗಿಸೊ ರಬಾಡ ಐಪಿಎಲ್ 2025ರ ಆವೃತ್ತಿಯನ್ನು ಮಧ್ಯದಲ್ಲೇ ತೊರೆದು ದಕ್ಷಿಣ ಆಫ್ರಿಕಾಗೆ ಹಿಂತಿರುಗಿದ್ದರು. ಆರಂಭದಲ್ಲಿ ಕೇವಲ ಎರಡು ಪಂದ್ಯಗಳನ್ನಷ್ಟೇ ಆಡಿದ್ದ ರಬಾಡ, ವೈಯಕ್ತಿಕ ಕಾರಣಕ್ಕೆ ತವರಿಗೆ ಮರಳಿದ್ದಾರೆ ಎನ್ನಲಾಗಿತ್ತು. ಆದರೆ, ಇದೀಗ ರಬಾಡ ಅವರು ನಿಷೇಧಿತ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿದ್ದು, ತಾತ್ಕಾಲಿಕವಾಗಿ ಅಮಾನತುಗೊಂಡಿದ್ದಾರೆ.

ಏಪ್ರಿಲ್ 3 ರಂದು ರಬಾಡ ಅವರು ವೈಯಕ್ತಿಕ ಕಾರಣಗಳಿಗಾಗಿ ತವರಿಗೆ ಮರಳಿದ್ದಾರೆ ಎಂದು ಫ್ರಾಂಚೈಸಿ ಹೇಳಿತ್ತು.

ವೇಗಿ ಕಗಿಸೊ ರಬಾಡ ನಿಷೇಧಿತ ಮಾದಕ ವಸ್ತು ಸೇವನೆ ದೃಢಪಟ್ಟಿದೆ. ಈ ಘಟನೆ ವಿಷಾದನೀಯ, ಆದಾಗ್ಯೂ, ರಬಾಡ CSA ಮತ್ತು ಅವರ ಅಭಿಮಾನಿಗಳಿಗೆ ವೃತ್ತಿಪರ ಮಾನದಂಡಗಳನ್ನು ಎತ್ತಿಹಿಡಿಯುವ ಬದ್ಧತೆಯ ಬಗ್ಗೆ ಭರವಸೆ ನೀಡಿದ್ದಾರೆ ಎಂದು ಕ್ರಿಕೆಟ್ ದಕ್ಷಿಣ ಆಫ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

'CSA ಮಾದಕವಸ್ತು ಮುಕ್ತ ಕ್ರೀಡೆಗೆ ಸಂಪೂರ್ಣವಾಗಿ ಬದ್ಧವಾಗಿದೆ ಮತ್ತು ವೃತ್ತಿಪರ ಮತ್ತು ಹವ್ಯಾಸಿ ಎರಡೂ ಕ್ರಿಕೆಟ್ ಆಟಗಾರರಿಗೆ ಎಲ್ಲ ನಿಯಮಗಳನ್ನು ಪಾಲಿಸುವ ಪ್ರಾಮುಖ್ಯತೆಯನ್ನು ನೆನಪಿಸುತ್ತದೆ. ಈ ನಿಟ್ಟಿನಲ್ಲಿ ಎಲ್ಲ ಆಟಗಾರರಿಗೆ ಬೆಂಬಲ ನೀಡುವಲ್ಲಿ ನಾವು ದೃಢವಾಗಿದ್ದೇವೆ' ಎಂದಿದೆ.

‘ಐಪಿಎಲ್‌ನಲ್ಲಿ ಆಡಿದ ಬಳಿಕ ವೈಯಕ್ತಿಕ ಕಾರಣಗಳಿಂದ ದಕ್ಷಿಣ ಆಫ್ರಿಕಾಕ್ಕೆ ಮರಳಿದ್ದೆ. ನಾನು ನಿಷೇಧಿತ ಮಾದಕ ದ್ರವ್ಯ ಸೇವನೆ ಮಾಡಿರುವುದು ಪರೀಕ್ಷೆಯಲ್ಲಿ ದೃಢಪಟ್ಟಿದೆ. ಈ ತಪ್ಪಿನಿಂದಾಗಿ ನಾನು ಎಲ್ಲರನ್ನೂ ನಿರಾಸೆಗೊಳಿಸಿದ್ದಕ್ಕೆ ವಿಷಾದಿಸುತ್ತೇನೆ. ಕ್ರಿಕೆಟ್ ಆಡುವ ಅವಕಾಶವನ್ನು ಎಂದಿಗೂ ಲಘುವಾಗಿ ಪರಿಗಣಿಸುವುದಿಲ್ಲ' ಎಂದು ರಬಾಡ ಹೇಳಿದ್ದಾರೆ.

‘ನಾನು ತಾತ್ಕಾಲಿಕ ಅಮಾನತು ಶಿಕ್ಷೆ ಅನುಭವಿಸುತ್ತಿದ್ದೇನೆ. ಶೀಘ್ರದಲ್ಲೇ ಕ್ರಿಕೆಟ್‌ಗೆ ಮರಳುತ್ತೇನೆ. ಈ ಕಷ್ಟದ ಸಮಯದಲ್ಲಿ ನನ್ನ ಕುಟುಂಬ, ಕಾನೂನು ತಂಡ ಮತ್ತು ಗುಜರಾತ್ ಟೈಟಾನ್ಸ್ ನೀಡಿದ ಬೆಂಬಲಕ್ಕೆ ಧನ್ಯವಾದಗಳು. ಈ ಘಟನೆಯಿಂದ ನಾನು ಕುಗ್ಗುವುದಿಲ್ಲ. ಎಂದಿನಂತೆ ಕಠಿಣ ಪರಿಶ್ರಮದಿಂದ ಕ್ರಿಕೆಟ್ ಆಡುತ್ತೇನೆʼ ಎಂದಿದ್ದಾರೆ

ವಿಶ್ವ ಡೋಪಿಂಗ್ ವಿರೋಧಿ ಸಂಸ್ಥೆ (WADA) ನಿಯಮಗಳ ಅಡಿಯಲ್ಲಿ ಕಾರ್ಯನಿರ್ವಹಿಸುವ ದಕ್ಷಿಣ ಆಫ್ರಿಕಾದ ಔಷಧ-ಮುಕ್ತ ಕ್ರೀಡಾ ಸಂಸ್ಥೆ (SAIDS) ಮುಂದಿನ ವಾರ ವಿವರವಾದ ಹೇಳಿಕೆಯನ್ನು ಬಿಡುಗಡೆ ಮಾಡುವ ನಿರೀಕ್ಷೆಯಿದೆ. ಕಗಿಸೊ ರಬಾಡ ಯಾವ ಮಾದಕ ದ್ರವ್ಯವನ್ನು ಸೇವಿಸಿದ್ದಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆದರೂ ಅದು ಕೊಕೇನ್ ಅಥವಾ ಕ್ಯಾನಬಿಸ್ ಆಗಿರಬಹುದು ಎನ್ನಲಾಗಿದೆ. ವಿಶ್ವ ಡೋಪಿಂಗ್ ವಿರೋಧಿ ಸಂಸ್ಥೆ (WADA) ಎಕ್ಸ್ಟಸಿ ಮತ್ತು ಹೆರಾಯಿನ್ ಜೊತೆಗೆ ಪಟ್ಟಿ ಮಾಡಲಾದ ಎರಡು ಪದಾರ್ಥಗಳಲ್ಲಿ ಇದು ಒಂದಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT