ಸಾಂದರ್ಭಿಕ ಚಿತ್ರ 
ಕ್ರಿಕೆಟ್

IPL: ಅತ್ಯಾಚಾರ ಆರೋಪ, Mumbai Indians ಆಟಗಾರನ ಬಂಧನ!

ಮಹಿಳೆ ಫೆಬ್ರವರಿ 2023ರಲ್ಲಿ ವಡೋದರಾದಲ್ಲಿ ವಾಕಿಂಗ್ ಹೋಗಿದ್ದಾಗ ಶಿವಾಲಿಕ್ ಶರ್ಮಾರನ್ನು ಭೇಟಿಯಾಗಿದ್ದರು.

ಜೋಧ್ ಪುರ: ಅತ್ಯಾಚಾರ ಆರೋಪದಡಿಯಲ್ಲಿ ಮುಂಬೈ ಇಂಡಿಯನ್ಸ್ (Mumbai Indians) ತಂಡದ ಆಟಗಾರನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಐಪಿಎಲ್ ಕ್ರಿಕೆಟಿಗ ಶಿವಾಲಿಕ್ ಶರ್ಮಾ (Shivalik Sharma) ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಬಂಧಿಸಲಾಗಿದ್ದು, ರಾಜಸ್ತಾನದ ಜೋಧ್ ಪುರದ ಕುಡಿ ಬಹಗತ್ಸಾನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂಲಗಳ ಪ್ರಕಾರ ಶಿವಾಲಿಕ್ ಶರ್ಮಾ ವಿರುದ್ಧ ಮದುವೆಯಾಗುವ ನೆಪದಲ್ಲಿ ಯುವತಿಯೊಂದಿಗೆ ದೈಹಿಕ ಸಂಬಂಧ ಹೊಂದಿದ್ದ ಆರೋಪವಿದೆ.

ಪೊಲೀಸ್ ಮೂಲಗಳ ಪ್ರಕಾರ, 'ಸೆಕ್ಟರ್ 2 ರ ಕುಡಿ ಭಗತಸಾನಿ ನಿವಾಸಿ ಯುವತಿ ಕ್ರಿಕೆಟಿಗ ಶಿವಾಲಿಕ್ ಶರ್ಮಾ ವಿರುದ್ಧ ಅತ್ಯಾಚಾರ ಆರೋಪ ಹೊರಿಸಿದ್ದಾರೆ. ಆ ಮಹಿಳೆ ಫೆಬ್ರವರಿ 2023ರಲ್ಲಿ ವಡೋದರಾದಲ್ಲಿ ವಾಕಿಂಗ್ ಹೋಗಿದ್ದಾಗ ಶಿವಾಲಿಕ್ ಶರ್ಮಾರನ್ನು ಭೇಟಿಯಾಗಿದ್ದರು.

ಅವರ ಸ್ನೇಹ ಕ್ರಮೇಣ ಪ್ರೀತಿಗೆ ತಿರುಗಿತು. ಬಳಿಕ ಅವರು ಫೋನ್‌ನಲ್ಲಿ ಗಂಟೆಗಟ್ಟಲೆ ಮಾತನಾಡುತ್ತಿದ್ದರು. ಎರಡೂ ಕುಟುಂಬಗಳು 2023 ರಲ್ಲಿ ಭೇಟಿಯಾದರು ಮತ್ತು ಬಳಿಕ ಈ ಜೋಡಿ ನಿಶ್ಚಿತಾರ್ಥ ಮಾಡಿಕೊಂಡಿತು. ನಿಶ್ಚಿತಾರ್ಥದ ನಂತರ ಅವರು ದೈಹಿಕ ಸಂಬಂಧದಲ್ಲಿ ತೊಡಗಿಕೊಂಡರು ಎಂದು ಎಸಿಪಿ ಆನಂದ್ ರಾಜ್‌ಪುರೋಹಿತ್ ಹೇಳಿದರು.

ಶಿವಾಲಿಕ್ ಶರ್ಮಾ

ಐಪಿಎಲ್ ನಲ್ಲಿ ಶಿವಾಲಿಕ್ ಶರ್ಮಾ

ಇನ್ನು 2018 ರಲ್ಲಿ ಬರೋಡಾ ಪರ ಹದಿಹರೆಯದ ಆಟಗಾರನಾಗಿ ಪಾದಾರ್ಪಣೆ ಮಾಡಿದ್ದರು. ಅವರು ಬರೋಡಾ ಪರ 18 ಪ್ರಥಮ ದರ್ಜೆ ಪಂದ್ಯಗಳಲ್ಲಿ 1087 ರನ್ ಗಳಿಸಿದ್ದಾರೆ. ಶಿವಾಲಿಕ್ ಶರ್ಮಾ ಪ್ರಸ್ತುತ ಮುಂಬೈ ನಾಯಕ ಹಾರ್ದಿಕ್ ಪಾಂಡ್ಯ ಅವರ ಬರೋಡಾ ತಂಡದ ಸಹ ಆಟಗಾರರಾಗಿದ್ದು, ಆರ್‌ಸಿಬಿ ಆಲ್‌ರೌಂಡರ್ ಕೃನಾಲ್ ಪಾಂಡ್ಯ ಅವರ ಅಡಿಯಲ್ಲಿ ಆಡುತ್ತಾರೆ.

ಶಿವಾಲಿಕ್ ಶರ್ಮಾ ಬರೋಡಾ ಪರ ಟಿ20 ಕ್ರಿಕೆಟ್‌ನಲ್ಲಿ 147.88 ಸ್ಟ್ರೈಕ್ ರೇಟ್‌ನಲ್ಲಿ 349 ರನ್ ಮತ್ತು ಲಿಸ್ಟ್ 'ಎ' 50 ಓವರ್ ಪಂದ್ಯಗಳಲ್ಲಿ 322 ರನ್ ಗಳಿಸಿದ್ದಾರೆ.

ಅಂದಹಾಗೆ 2024 ರ ಐಪಿಎಲ್ ಸೀಸನ್‌ನಲ್ಲಿ ಮುಂಬೈ ಇಂಡಿಯನ್ಸ್ ತಂಡ ಶಿವಾಲಿಕ್ ಶರ್ಮಾ ಅವರನ್ನು 20 ಲಕ್ಷ ರೂ.ಗೆ ಖರೀದಿಸಿತ್ತು. ಆದಾಗ್ಯೂ, ಅವರು ಕಳೆದ ವರ್ಷ ಮುಂಬೈ ಪರ ಯಾವುದೇ ಪಂದ್ಯದಲ್ಲಿ ಆಡಿರಲಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT