ಮೊಹಮ್ಮದ್ ಶಮಿ 
ಕ್ರಿಕೆಟ್

1 ಕೋಟಿ ಕೊಡು, ಇಲ್ಲ ನಿನ್ನ ತಲೆ ತೆಗಿತೀವಿ: Mohammed Shami ಗೆ Bengaluru ನಿವಾಸಿಯಿಂದ ಬೆದರಿಕೆ ಇ-ಮೇಲ್!

ಭಾರತ ಕ್ರಿಕೆಟ್ ತಂಡದ ವೇಗದ ಬೌಲರ್ ಮೊಹಮ್ಮದ್ ಶಮಿಗೆ ಇ-ಮೇಲ್ ಮೂಲಕ ಜೀವ ಬೆದರಿಕೆ ಹಾಕಲಾಗಿದೆ. ಮೊಹಮ್ಮದ್ ಶಮಿ ಸಹೋದರ ಮೊಹಮ್ಮದ್ ಹಸೀಬ್ ಅಮ್ರೋಹಾದಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

ಅಮ್ರೋಹಾ: ಭಾರತ ಕ್ರಿಕೆಟ್ ತಂಡದ ವೇಗದ ಬೌಲರ್ ಮೊಹಮ್ಮದ್ ಶಮಿಗೆ ಇ-ಮೇಲ್ ಮೂಲಕ ಜೀವ ಬೆದರಿಕೆ ಹಾಕಲಾಗಿದೆ. ಮೊಹಮ್ಮದ್ ಶಮಿ ಸಹೋದರ ಮೊಹಮ್ಮದ್ ಹಸೀಬ್ ಅಮ್ರೋಹಾದಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಸೈಬರ್ ಸೆಲ್‌ನಲ್ಲಿ ಪ್ರಕರಣ ದಾಖಲಾಗಿದೆ ಎಂದು ಅಮ್ರೋಹಾ ಪೊಲೀಸರು ತಿಳಿಸಿದ್ದಾರೆ.

ಕ್ರಿಕೆಟಿಗ ಮೊಹಮ್ಮದ್ ಶಮಿ ಉತ್ತರಪ್ರದೇಶದ ಅಮ್ರೋಹಾ ಜಿಲ್ಲೆಯ ದಿದೌಲಿ ಪೊಲೀಸ್ ಠಾಣೆ ವ್ಯಾಪ್ತಿಯ ಸಹಸ್ಪುರ್ ಅಲಿನಗರ ಗ್ರಾಮದ ನಿವಾಸಿ. ಕ್ರಿಕೆಟಿಗ ಮೊಹಮ್ಮದ್ ಶಮಿ ಅವರ ಸಹೋದರ ಮೊಹಮ್ಮದ್ ಹಸೀಬ್, ಅಮ್ರೋಹಾದ ಎಸ್ಪಿಗೆ ತಮ್ಮ ಸಹೋದರ (ಮೊಹಮ್ಮದ್ ಶಮಿ) ಈ ದಿನಗಳಲ್ಲಿ ಐಪಿಎಲ್ 2025 ರಲ್ಲಿ ಬ್ಯುಸಿಯಾಗಿದ್ದಾರೆ ಎಂದು ಹೇಳಿದ್ದಾರೆ. ಸನ್‌ರೈಸರ್ಸ್ ಹೈದರಾಬಾದ್ ತಂಡದ ಪರವಾಗಿ ಆಡುತ್ತಿದ್ದಾರೆ. ಪ್ರಸ್ತುತ ಹೈದರಾಬಾದ್‌ನಲ್ಲಿದ್ದಾರೆ. ರಜಪೂತ್ ಸಿಂಧರ್ ಎಂಬ ಮೇಲ್ ಐಡಿಯಿಂದ ಬೆದರಿಕೆ ಬಂದಿರುವುದಾಗಿ ಶಮಿ ಸಹೋದರ ಮೊಹಮ್ಮದ್ ಹಸೀಬ್ ಪೊಲೀಸರಿಗೆ ತಿಳಿಸಿದ್ದಾರೆ. ಇದರಲ್ಲಿ ಶಮಿಗೆ 1 ಕೋಟಿ ರೂಪಾಯಿ ನೀಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ ಎಂದು ಹೇಳಿದರು.

ಬೆದರಿಕೆ ಇಮೇಲ್ ಕಳುಹಿಸಿದ ವ್ಯಕ್ತಿ ಬೆಂಗಳೂರಿನ ನಿವಾಸಿ ಪ್ರಭಾಕರ್ ಎಂದು ಹೇಳಲಾಗಿದೆ. ಆ ಮೇಲ್‌ನ ಸ್ಕ್ರೀನ್‌ಶಾಟ್ ಅನ್ನು ಪೊಲೀಸರಿಗೆ ನೀಡಲಾಗಿದ್ದು, ಅದರಲ್ಲಿ 'ನಿನ್ನನ್ನು ಕೊಲ್ಲುತ್ತೇವೆ'. ಸರ್ಕಾರ ನಮಗೆ ಏನೂ ಮಾಡಲು ಆಗುವುದಿಲ್ಲ ಎಂದು ಬರೆಯಲಾಗಿದೆ ಎಂದು ತಿಳಿಸಲಾಗಿದೆ.

ಕ್ರಿಕೆಟಿಗ ಮೊಹಮ್ಮದ್ ಶಮಿ ಅವರ ಸಹೋದರನಿಂದ ದೂರು ಸ್ವೀಕರಿಸಲಾಗಿದೆ ಎಂದು ಅಮ್ರೋಹಾ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಕುಮಾರ್ ಆನಂದ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ದೂರಿನ ಮೇರೆಗೆ ಸೈಬರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ತನಿಖೆಗೆ ಪೊಲೀಸ್ ತಂಡವನ್ನು ನಿಯೋಜಿಸಲಾಗಿದೆ. ಪೊಲೀಸರು ಶೀಘ್ರದಲ್ಲೇ ಆರೋಪಿಯನ್ನು ಪತ್ತೆ ಹಚ್ಚಿ, ಬಂಧಿಸಿ ಸತ್ಯವನ್ನು ಬಯಲು ಮಾಡುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT