ಫಿಲ್ ಸಾಲ್ಟ್ - ಜಾಶ್ ಹೇಜಲ್‌ವುಡ್ 
ಕ್ರಿಕೆಟ್

IPL 2025: LSG ವಿರುದ್ಧದ ಪಂದ್ಯಕ್ಕೆ ಜಾಶ್ ಹೇಜಲ್‌ವುಡ್, ಫಿಲ್ ಸಾಲ್ಟ್ ಲಭ್ಯತೆ ಕುರಿತು ದಿನೇಶ್ ಕಾರ್ತಿಕ್ ಮಾಹಿತಿ

10 ಪಂದ್ಯಗಳಲ್ಲಿ 18 ವಿಕೆಟ್‌ಗಳನ್ನು ಪಡೆದಿರುವ ಹೇಜಲ್‌ವುಡ್, ಭುಜದ ನೋವಿನಿಂದಾಗಿ ಸಿಎಸ್‌ಕೆ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿಯ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ ಪಡೆದಿರಲಿಲ್ಲ.

ಮೇ 9 ರಂದು LSG ವಿರುದ್ಧ ನಡೆಯಲಿರುವ ಪಂದ್ಯಕ್ಕೆ ಜಾಶ್ ಹೇಜಲ್‌ವುಡ್ ಮತ್ತು ಫಿಲ್ ಸಾಲ್ಟ್ ಲಭ್ಯತೆಯ ಕುರಿತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಮೆಂಟರ್ ದಿನೇಶ್ ಕಾರ್ತಿಕ್ ಮಾಹಿತಿ ನೀಡಿದ್ದಾರೆ. CSK ವಿರುದ್ಧ ನಡೆದ ಪಂದ್ಯದಲ್ಲಿ ಈ ಇಬ್ಬರು ಹೊರಗುಳಿದಿದ್ದರು. ಆ ಪಂದ್ಯದಲ್ಲಿ ಆರ್‌ಸಿಬಿ ಸಿಎಸ್‌ಕೆ ವಿರುದ್ಧ 2 ರನ್‌ಗಳ ರೋಚಕ ಜಯ ಗಳಿಸಿತು. 2025ರ ಐಪಿಎಲ್‌ ಆವೃತ್ತಿಯಲ್ಲಿ ಹೇಜಲ್‌ವುಡ್ ಇದುವರೆಗೆ RCB ಯ ಅತ್ಯುತ್ತಮ ಬೌಲರ್ ಆಗಿದ್ದರೆ, ಪವರ್‌ಪ್ಲೇನಲ್ಲಿ ಸಾಲ್ಟ್ ತಂಡದ ಪ್ರಮುಖ ಅಸ್ತ್ರವಾಗಿದ್ದಾರೆ.

RCB vs CSK ಪಂದ್ಯದ ನಂತರ ಮಾತನಾಡಿದ ಕಾರ್ತಿಕ್, LSG ವಿರುದ್ಧದ ಪಂದ್ಯಕ್ಕೆ ಜಾಶ್ ಹೇಜಲ್‌ವುಡ್ ಮತ್ತು ಫಿಲ್ ಸಾಲ್ಟ್ ಜೋಡಿ ಮರಳುತ್ತದೆ ಎಂಬ ಭರವಸೆ ಇದೆ ಎಂದು ಹೇಳಿದರು. RCB ಸದ್ಯ ಆಡಿರುವ 11 ಪಂದ್ಯಗಳಲ್ಲಿ 16 ಅಂಕಗಳೊಂದಿಗೆ ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. IPL 2025ರ ಪ್ಲೇಆಫ್‌ನಲ್ಲಿ ಸ್ಥಾನ ಬಹುತೇಕ ಖಚಿತವಾಗಿದೆ.

'ಮುಂದಿನ ಪಂದ್ಯಕ್ಕೆ ಫಿಲ್ ಸಾಲ್ಟ್ ಮತ್ತು ಹೇಜಲ್‌ವುಡ್ ಮತ್ತೆ ತಂಡಕ್ಕೆ ಮರಳುತ್ತಾರೆ ಎಂಬ ಭರವಸೆ ನಮಗಿದೆ' ಎಂದು ಕಾರ್ತಿಕ್ ಸ್ಟಾರ್ ಸ್ಪೋರ್ಟ್ಸ್‌ಗೆ ತಿಳಿಸಿದರು.

10 ಪಂದ್ಯಗಳಲ್ಲಿ 18 ವಿಕೆಟ್‌ಗಳನ್ನು ಪಡೆದಿರುವ ಹೇಜಲ್‌ವುಡ್, ಭುಜದ ನೋವಿನಿಂದಾಗಿ ಸಿಎಸ್‌ಕೆ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿಯ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ ಪಡೆದಿರಲಿಲ್ಲ. ಅವರ ಅನುಪಸ್ಥಿತಿಯಲ್ಲಿ ಯಶ್ ದಯಾಳ್ ಉತ್ತಮ ಪ್ರದರ್ಶನ ನೀಡಿದ್ದರೂ, ಡೆತ್ ಓವರ್‌ಗಳಲ್ಲಿ ಅವರು ತಂಡದ ಅತ್ಯುತ್ತಮ ಬೌಲರ್ ಆಗಿದ್ದಾರೆ.

ಮತ್ತೊಂದೆಡೆ, ಅನಾರೋಗ್ಯದ ಕಾರಣದಿಂದಾಗಿ ಸಾಲ್ಟ್ ಕೂಡ ಕಳೆದ ಎರಡು ಪಂದ್ಯಗಳಿಂದ ಹೊರಗುಳಿದಿದ್ದಾರೆ. ಸಾಲ್ಟ್ ಆಡಿರುವ 9 ಇನಿಂಗ್ಸ್‌ಗಳಲ್ಲಿ 239 ರನ್ ಗಳಿಸಿದ್ದಾರೆ ಮತ್ತು ಮೊದಲ ಆರು ಓವರ್‌ಗಳಲ್ಲಿ ಆಕ್ರಮಣಕಾರಿ ಬ್ಯಾಟಿಂಗ್ ಪ್ರದರ್ಶನ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT